Categories: ರಾಮನಗರ

ಕುಡಿಯಲು ನೀರು ಕೇಳುವ ನೆಪದಲ್ಲಿ ಸರಗಳ್ಳತನ ಪ್ರಕರಣ- ಮೂವರು ಆರೋಪಿಗಳ ಬಂಧನ, 7,11,000 ರೂ. ಮೌಲ್ಯದ 59.3 ಗ್ರಾಂ ಚಿನ್ನದ ಒಡವೆ ವಶ

2025ರ ಸೆ.25 ರಂದು ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೂನಮುದ್ದನಹಳ್ಳಿ  ಗ್ರಾಮದಲ್ಲಿ, ಮನೆಯಲ್ಲಿದ್ದ  ವೃದ್ದೆಯ ಬಳಿ ಬಂದು ಕುಡಿಯಲು ನೀರು ಕೇಳುವ ನೆಪದಲ್ಲಿ , ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದರು…

ಈ ಬಗ್ಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಮಾಹಿತಿ ಸಂಗ್ರಹಿಸಿ, ಸರಗಳ್ಳತನದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಮಾಯಗಾನಹಳ್ಳಿ ಗ್ರಾಮದಲ್ಲಿ ನಡೆದಿದ್ದ  ಸರಗಳ್ಳತನ ಪ್ರಕರಣವಾದ ಠಾಣಾ ಮೊ.ಸಂ:116/2025 ಕಲಂ: 309(4) ರೀತ್ಯಾ ಪ್ರಕರಣದಲ್ಲಿಯು ಸಹ ಭಾಗಿಯಾಗಿರುವುದಾಗಿ ವಿಚಾರಣಾ ಸಮಯದಲ್ಲಿ ತಿಳಿದುಬಂದಿರುತ್ತದೆ.

ಸದರಿ ಎರಡು ಪ್ರಕರಣಗಳಲ್ಲಿ ಒಟ್ಟು ಸುಮಾರು 7,11,000/- ರೂ ಮೌಲ್ಯದ 59.300 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಅಮಾನತು ಪಡಿಸಿಕೊಂಡು, ಒಟ್ಟು 2  ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ರಾಮನಗರ ಗ್ರಾಮಾಂತರ ಪೊಲೀಸ್‌ ಠಾಣೆಯ ಅಧಿಕಾರಿಗಳಾದ, ಟಿ. ಮುರಳಿ, ಮಹಮದ್‌ ಅಲ್ಲಾವುದೀನ್‌, ನರಸಿಂಹ ಮೂರ್ತಿ, ಸಿದ್ದರಾಜು ಮತ್ತು ಸಿಬ್ಬಂದಿ ಮಹೇಶ್‌, ಲೋಕೇಶ್‌, ಸುಜಾತ, ಸಮೀವುಲ್ಲ, ಹೆಚ್.‌ ಎನ್‌ ರವಿ, ರವಿಚಂದ್ರ, ಆಸೀಫ್‌, ರಮೇಶ್‌, ನರೇಶ್‌, ಯಾಸಿನ್‌ ಸಾಬ್‌ ನದಾಪ್‌, ಕುಮಾರ್‌ & ಶಾರದಮ್ಮ ತಂಡವು ಯಶಸ್ವಿಯಾಗಿರುತ್ತದೆ.

Ramesh Babu

Journalist

Recent Posts

ಸ್ಥಳೀಯ ಸಂಸ್ಥೆಗಳಲ್ಲಿ ಚುರುಕಾಗಬೇಕಿದೆ ಬಿಎಂಸಿ: ಕೆರೆ, ಕುಂಟೆ, ಗೋಮಾಳ, ಅರಣ್ಯ ಸಂರಕ್ಷಣೆಗೆ ನಿರ್ಲಕ್ಷ್ಯ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ನೈಸರ್ಗಿಕ ಸಂಪನ್ಮೂಲ ಹಾಗೂ ಜೀವ ವೈವಿಧ್ಯ ಸಂರಕ್ಷಣೆಗಾಗಿ ರಚಿಸಲಾಗಿರುವ ಜೀವ ವೈವಿಧ್ಯ…

5 hours ago

ಅಪರೂಪದ ದುಬಾರಿ ಖಾಯಿಲೆಗಳು…….

ಇದಕ್ಕೊಂದು ಪರಿಹಾರ ರೂಪಿಸಬಹುದೇ...... ಅಪರೂಪದ ದುಬಾರಿ ಖಾಯಿಲೆಗಳು.......... ಆಗಾಗ ಬದುಕು ಬಟ್ಟೆ ಒಗೆಯುವಂತೆ ಎತ್ತೆತ್ತಿ ಒಗೆಯುತ್ತದೆ. ಅನಿರೀಕ್ಷಿತಗಳು ಸಂಭವಿಸಿ ತುಂಬಾ…

1 day ago

ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: 7.96 ಲಕ್ಷ ಮತದಾರರ ಹೆಸರು ಅಂತಿಮ ಹಂತಕ್ಕೆ

ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…

2 days ago

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 days ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

3 days ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

4 days ago