Categories: ರಾಮನಗರ

ಕುಡಿಯಲು ನೀರು ಕೇಳುವ ನೆಪದಲ್ಲಿ ಸರಗಳ್ಳತನ ಪ್ರಕರಣ- ಮೂವರು ಆರೋಪಿಗಳ ಬಂಧನ, 7,11,000 ರೂ. ಮೌಲ್ಯದ 59.3 ಗ್ರಾಂ ಚಿನ್ನದ ಒಡವೆ ವಶ

2025ರ ಸೆ.25 ರಂದು ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೂನಮುದ್ದನಹಳ್ಳಿ  ಗ್ರಾಮದಲ್ಲಿ, ಮನೆಯಲ್ಲಿದ್ದ  ವೃದ್ದೆಯ ಬಳಿ ಬಂದು ಕುಡಿಯಲು ನೀರು ಕೇಳುವ ನೆಪದಲ್ಲಿ , ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದರು…

ಈ ಬಗ್ಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಮಾಹಿತಿ ಸಂಗ್ರಹಿಸಿ, ಸರಗಳ್ಳತನದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಮಾಯಗಾನಹಳ್ಳಿ ಗ್ರಾಮದಲ್ಲಿ ನಡೆದಿದ್ದ  ಸರಗಳ್ಳತನ ಪ್ರಕರಣವಾದ ಠಾಣಾ ಮೊ.ಸಂ:116/2025 ಕಲಂ: 309(4) ರೀತ್ಯಾ ಪ್ರಕರಣದಲ್ಲಿಯು ಸಹ ಭಾಗಿಯಾಗಿರುವುದಾಗಿ ವಿಚಾರಣಾ ಸಮಯದಲ್ಲಿ ತಿಳಿದುಬಂದಿರುತ್ತದೆ.

ಸದರಿ ಎರಡು ಪ್ರಕರಣಗಳಲ್ಲಿ ಒಟ್ಟು ಸುಮಾರು 7,11,000/- ರೂ ಮೌಲ್ಯದ 59.300 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಅಮಾನತು ಪಡಿಸಿಕೊಂಡು, ಒಟ್ಟು 2  ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ರಾಮನಗರ ಗ್ರಾಮಾಂತರ ಪೊಲೀಸ್‌ ಠಾಣೆಯ ಅಧಿಕಾರಿಗಳಾದ, ಟಿ. ಮುರಳಿ, ಮಹಮದ್‌ ಅಲ್ಲಾವುದೀನ್‌, ನರಸಿಂಹ ಮೂರ್ತಿ, ಸಿದ್ದರಾಜು ಮತ್ತು ಸಿಬ್ಬಂದಿ ಮಹೇಶ್‌, ಲೋಕೇಶ್‌, ಸುಜಾತ, ಸಮೀವುಲ್ಲ, ಹೆಚ್.‌ ಎನ್‌ ರವಿ, ರವಿಚಂದ್ರ, ಆಸೀಫ್‌, ರಮೇಶ್‌, ನರೇಶ್‌, ಯಾಸಿನ್‌ ಸಾಬ್‌ ನದಾಪ್‌, ಕುಮಾರ್‌ & ಶಾರದಮ್ಮ ತಂಡವು ಯಶಸ್ವಿಯಾಗಿರುತ್ತದೆ.

Ramesh Babu

Journalist

Recent Posts

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

3 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

1 day ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

2 days ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

2 days ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

2 days ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

2 days ago