2025ರ ಸೆ.25 ರಂದು ರಾಮನಗರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೂನಮುದ್ದನಹಳ್ಳಿ ಗ್ರಾಮದಲ್ಲಿ, ಮನೆಯಲ್ಲಿದ್ದ ವೃದ್ದೆಯ ಬಳಿ ಬಂದು ಕುಡಿಯಲು ನೀರು ಕೇಳುವ ನೆಪದಲ್ಲಿ , ವೃದ್ದೆಯ ಕುತ್ತಿಗೆಯಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಕಿತ್ತುಕೊಂಡು ಕಳ್ಳರು ಪರಾರಿಯಾಗಿದ್ದರು…
ಈ ಬಗ್ಗೆ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದಲ್ಲಿ ಆರೋಪಿಗಳ ಪತ್ತೆಗಾಗಿ ಮಾಹಿತಿ ಸಂಗ್ರಹಿಸಿ, ಸರಗಳ್ಳತನದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ, ಆರೋಪಿಗಳು ಮಾಯಗಾನಹಳ್ಳಿ ಗ್ರಾಮದಲ್ಲಿ ನಡೆದಿದ್ದ ಸರಗಳ್ಳತನ ಪ್ರಕರಣವಾದ ಠಾಣಾ ಮೊ.ಸಂ:116/2025 ಕಲಂ: 309(4) ರೀತ್ಯಾ ಪ್ರಕರಣದಲ್ಲಿಯು ಸಹ ಭಾಗಿಯಾಗಿರುವುದಾಗಿ ವಿಚಾರಣಾ ಸಮಯದಲ್ಲಿ ತಿಳಿದುಬಂದಿರುತ್ತದೆ.
ಸದರಿ ಎರಡು ಪ್ರಕರಣಗಳಲ್ಲಿ ಒಟ್ಟು ಸುಮಾರು 7,11,000/- ರೂ ಮೌಲ್ಯದ 59.300 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಅಮಾನತು ಪಡಿಸಿಕೊಂಡು, ಒಟ್ಟು 2 ಪ್ರಕರಣಗಳನ್ನು ಪತ್ತೆ ಮಾಡುವಲ್ಲಿ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳಾದ, ಟಿ. ಮುರಳಿ, ಮಹಮದ್ ಅಲ್ಲಾವುದೀನ್, ನರಸಿಂಹ ಮೂರ್ತಿ, ಸಿದ್ದರಾಜು ಮತ್ತು ಸಿಬ್ಬಂದಿ ಮಹೇಶ್, ಲೋಕೇಶ್, ಸುಜಾತ, ಸಮೀವುಲ್ಲ, ಹೆಚ್. ಎನ್ ರವಿ, ರವಿಚಂದ್ರ, ಆಸೀಫ್, ರಮೇಶ್, ನರೇಶ್, ಯಾಸಿನ್ ಸಾಬ್ ನದಾಪ್, ಕುಮಾರ್ & ಶಾರದಮ್ಮ ತಂಡವು ಯಶಸ್ವಿಯಾಗಿರುತ್ತದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…
ಬೆಂಗಳೂರು ಗ್ರಾಮಾಂತರ: ಮಳೆ ಕೊರತೆ ಹಾಗೂ ಬೆಳೆ ನಷ್ಟದಿಂದ ಸಂಕಷ್ಟಕ್ಕೆ ಸಿಲುಕಿದ್ದ ದೊಡ್ಡಬಳ್ಳಾಪುರ ತಾಲೂಕು ಇದೀಗ ಬರಪೀಡಿತ ತಾಲೂಕುಗಳ ಪಟ್ಟಿಗೆ…
ಧಾರವಾಡ: ಭೂಮಿಯ ‘ಅ-ಖರಾಬ್’ ತೆರವುಗೊಳಿಸಲು 1 ಕೋಟಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಧಾರವಾಡ ತಹಶೀಲ್ದಾರ್ ಸಚ್ಚಿದಾನಂದ ಕುಚನೂರ್ ವಿರುದ್ಧ…
ರಾಜ್ಯದ ಮಹತ್ವಾಕಾಂಕ್ಷಿ ನೀರಾವರಿ ಯೋಜನೆಗಳಿಗೆ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಅವರು ಅಭೂತಪೂರ್ವ ವೇಗ ನೀಡಿದ್ದಾರೆ. ಒಂದೆಡೆ ಮೇಕೆದಾಟು ಯೋಜನೆ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಪತ್ನಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಮೃತರನ್ನು ಗೌರಿಬಿದನೂರು ತಾಲೂಕಿನ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಸಹ ಆಡಳಿತ ಉಸ್ತುವಾರಿಯಾಗಿ…