ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದೇನಹಳ್ಳಿಯಲ್ಲಿರುವ ಓವರ್ ಹೆಡ್ ಟ್ಯಾಂಕ್ ನಿಂದ ಸರಬರಾಜಾಗುವ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣಗೊಂಡು ಹುಳ ಹುಪ್ಪಟೆಗಳು ಕಂಡು ಬರುತ್ತಿದ್ದು, ಊರಿನ ಗ್ರಾಮಸ್ಥರು ಆಂತಕಕ್ಕೆ ಸಿಲುಕಿದ್ದಾರೆ.
ಹಲವಾರು ದಿನಗಳಿಂದ ಕುಡಿಯುವ ನೀರಿನಲ್ಲಿ ಹುಳು ಹುಪ್ಪಟೆಗಳು ಕಂಡು ಬರುತ್ತಿದ್ದು, ಈ ಕುರಿತು ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ಯಾವ ಕ್ರಮ ಕೈಗೊಳ್ಳದೇ ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ಊರಿನ ಗ್ರಾಮಸ್ಥರು ಆರೋಪಿಸಿದ್ದಾರೆ.
ಅನೇಕ ಬಡ ಕುಟುಂಬಗಳು ರೈತಾಪಿ ವರ್ಗದ ಜನರೇ ವಾಸಿಸುವ ಈ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಪೂರೈಸುವ ನೀರೇ ಕುಡಿಯಲು ಆಧಾರವಾಗಿದೆ.
ಅಲ್ಲದೇ ಜಾನುವಾರಗಳಿಗೂ ಕುಡಿಯಲು ಇದೇ ನೀರು ಬಳಕೆ ಮಾಡುತ್ತಿರುವುದರಿಂದ ಕಲುಷಿತ ನೀರು ಸರಬರಾಜು ಆಗುತ್ತಿದ್ದು, ಇದರಿಂದ ಅನೇಕ ರೋಗ ರುಜಿನಗಳು ಹರಡುವ ಆತಂಕ ಇಲ್ಲಿಯ ನಿವಾಸಿಗಳನ್ನು ಕಾಡುತ್ತಿದೆ.
ಕಳೆದ ಒಂದು ತಿಂಗಳಿನಿಂದ ಈ ರೀತಿ ಸಮಸ್ಯೆ ಆಗುತ್ತಿದ್ದು, ಕುರಿತು ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿ, ಸಿಬ್ಬಂದಿಗೆ ಮನವಿ ಮಾಡಿಕೊಂಡಿದ್ದರೂ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಪಂಚಾಯಿತಿ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂಬುವುದು ಇಲ್ಲಿನ ನಿವಾಸಿಗಳ ಆರೋಪವಾಗಿದೆ.
ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಅಗತ್ಯ ಕ್ರಮವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಸೂಚಿಸಿದ್ದರು.
ಬೇಸಿಗೆ ಹಿನ್ನೆಲೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 080-22221050 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಗ್ರಾಮದ ಪುಷ್ಪಲತಾ ಸೋಮಶೇಖರ್ ರವರನ್ನು ರಾಜ್ಯ ಮಟ್ಟದ ಜಾಗೃತಿ ಸಮಿತಿ ಸದಸ್ಯರನ್ನಾಗಿ…
ಬೆಂಗಳೂರು ಕೊಡಿಗೆಹಳ್ಳಿ, : ಮೆಡಿಕವರ್ ಆಸ್ಪತ್ರೆಯು ಕೊಡಿಗೆಹಳ್ಳಿಯ ಸೃಷ್ಟಿ ಗ್ಲೋಬಲ್ ಶಾಲೆಯಲ್ಲಿ 9ನೇ ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು, ಶಾಲಾ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಮಾಡಿದ್ದುಣ್ಣೋ ಮಹಾರಾಯ....... ಬೇವು ಬಿತ್ತಿ ಮಾವಿನ ಫಲವನ್ನು ನಿರೀಕ್ಷಿಸಿದರೆಂತಯ್ಯ....... ನಾನು ಕೆಲವರು ವಿರುದ್ಧ ದೂರು ಕೊಡಬೇಕಿದೆ. ಯಾರಿಗೆ ಕೊಡಲಿ, ಎಲ್ಲಿ…
ಲಾರಿಯನ್ನು ಅಡ್ಡಾದಿಡ್ಡಿಯಾಗಿ ಚಾಲಾಯಿಸಿಕೊಂಡು ಬಂದ ಚಾಲಕನು, ರಸ್ತೆಯಲ್ಲಿ ಸಂಚರಿಸುತ್ತಿದ್ದ ಇತರೆ ವಾಹನಗಳಿಗೆ ಡಿಕ್ಕಿ ಹೊಡೆದು ಕಿರಿಕಿರಿ ಉಂಟು ಮಾಡಿರುವ ಘಟನೆ…
ಕಾರವಾರ:- ರಾಜ್ಯದಲ್ಲಿನ ಅಸಂಘಟಿತ ಕಾರ್ಮಿಕರಿಗೆ ಹೆಚ್ಚಿನ ಸಂಖ್ಯೆಯ ಸಾಮಾಜಿಕ ಭದ್ರತೆ ಯೋಜನೆಗಳನ್ನು ಒದಗಿಸಲು ರಾಜ್ಯದಲ್ಲಿನ ಡೀಸೆಲ್ ಪೆಟ್ರೋಲ್ ಮೇಲೆ ವಿಧಿಸುತ್ತಿರುವ…