ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದೇನಹಳ್ಳಿಯಲ್ಲಿರುವ ಓವರ್ ಹೆಡ್ ಟ್ಯಾಂಕ್ ನಿಂದ ಸರಬರಾಜಾಗುವ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣಗೊಂಡು ಹುಳ ಹುಪ್ಪಟೆಗಳು ಕಂಡು ಬರುತ್ತಿದ್ದು, ಊರಿನ ಗ್ರಾಮಸ್ಥರು ಆಂತಕಕ್ಕೆ ಸಿಲುಕಿದ್ದಾರೆ.
ಹಲವಾರು ದಿನಗಳಿಂದ ಕುಡಿಯುವ ನೀರಿನಲ್ಲಿ ಹುಳು ಹುಪ್ಪಟೆಗಳು ಕಂಡು ಬರುತ್ತಿದ್ದು, ಈ ಕುರಿತು ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ಯಾವ ಕ್ರಮ ಕೈಗೊಳ್ಳದೇ ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ಊರಿನ ಗ್ರಾಮಸ್ಥರು ಆರೋಪಿಸಿದ್ದಾರೆ.
ಅನೇಕ ಬಡ ಕುಟುಂಬಗಳು ರೈತಾಪಿ ವರ್ಗದ ಜನರೇ ವಾಸಿಸುವ ಈ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಪೂರೈಸುವ ನೀರೇ ಕುಡಿಯಲು ಆಧಾರವಾಗಿದೆ.
ಅಲ್ಲದೇ ಜಾನುವಾರಗಳಿಗೂ ಕುಡಿಯಲು ಇದೇ ನೀರು ಬಳಕೆ ಮಾಡುತ್ತಿರುವುದರಿಂದ ಕಲುಷಿತ ನೀರು ಸರಬರಾಜು ಆಗುತ್ತಿದ್ದು, ಇದರಿಂದ ಅನೇಕ ರೋಗ ರುಜಿನಗಳು ಹರಡುವ ಆತಂಕ ಇಲ್ಲಿಯ ನಿವಾಸಿಗಳನ್ನು ಕಾಡುತ್ತಿದೆ.
ಕಳೆದ ಒಂದು ತಿಂಗಳಿನಿಂದ ಈ ರೀತಿ ಸಮಸ್ಯೆ ಆಗುತ್ತಿದ್ದು, ಕುರಿತು ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿ, ಸಿಬ್ಬಂದಿಗೆ ಮನವಿ ಮಾಡಿಕೊಂಡಿದ್ದರೂ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಪಂಚಾಯಿತಿ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂಬುವುದು ಇಲ್ಲಿನ ನಿವಾಸಿಗಳ ಆರೋಪವಾಗಿದೆ.
ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಅಗತ್ಯ ಕ್ರಮವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಸೂಚಿಸಿದ್ದರು.
ಬೇಸಿಗೆ ಹಿನ್ನೆಲೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 080-22221050 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…