ಕುಡಿಯುವ ನೀರಿನಲ್ಲಿ ಹುಳ ಹುಪ್ಪಟೆ: ಆಂತಕದಲ್ಲಿ ಗ್ರಾಮಸ್ಥರು: ಕ್ಯಾರೆ ಎನ್ನದ ಅಧಿಕಾರಿಗಳು

ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದೇನಹಳ್ಳಿಯಲ್ಲಿರುವ ಓವರ್ ಹೆಡ್ ಟ್ಯಾಂಕ್ ನಿಂದ ಸರಬರಾಜಾಗುವ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣಗೊಂಡು ಹುಳ ಹುಪ್ಪಟೆಗಳು ಕಂಡು ಬರುತ್ತಿದ್ದು, ಊರಿನ ಗ್ರಾಮಸ್ಥರು ಆಂತಕಕ್ಕೆ ಸಿಲುಕಿದ್ದಾರೆ.

ಹಲವಾರು ದಿನಗಳಿಂದ ಕುಡಿಯುವ ನೀರಿನಲ್ಲಿ ಹುಳು ಹುಪ್ಪಟೆಗಳು ಕಂಡು ಬರುತ್ತಿದ್ದು, ಈ ಕುರಿತು ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ಯಾವ ಕ್ರಮ ಕೈಗೊಳ್ಳದೇ ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ಊರಿನ‌ ಗ್ರಾಮಸ್ಥರು ಆರೋಪಿಸಿದ್ದಾರೆ.

ಅನೇಕ ಬಡ ಕುಟುಂಬಗಳು ರೈತಾಪಿ ವರ್ಗದ ಜನರೇ ವಾಸಿಸುವ ಈ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಪೂರೈಸುವ ನೀರೇ ಕುಡಿಯಲು ಆಧಾರವಾಗಿದೆ.

ಅಲ್ಲದೇ ಜಾನುವಾರಗಳಿಗೂ ಕುಡಿಯಲು ಇದೇ ನೀರು ಬಳಕೆ ಮಾಡುತ್ತಿರುವುದರಿಂದ ಕಲುಷಿತ ನೀರು ಸರಬರಾಜು ಆಗುತ್ತಿದ್ದು, ಇದರಿಂದ ಅನೇಕ ರೋಗ ರುಜಿನಗಳು ಹರಡುವ ಆತಂಕ ಇಲ್ಲಿಯ ನಿವಾಸಿಗಳನ್ನು ಕಾಡುತ್ತಿದೆ.

ಕಳೆದ ಒಂದು ತಿಂಗಳಿನಿಂದ ಈ ರೀತಿ ಸಮಸ್ಯೆ ಆಗುತ್ತಿದ್ದು, ಕುರಿತು ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿ, ಸಿಬ್ಬಂದಿಗೆ ಮನವಿ ಮಾಡಿಕೊಂಡಿದ್ದರೂ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಪಂಚಾಯಿತಿ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂಬುವುದು ಇಲ್ಲಿನ ನಿವಾಸಿಗಳ ಆರೋಪವಾಗಿದೆ.

ಓವರ್ ಹೆಡ್ ಟ್ಯಾಂಕ್ ನಿಂದ ಸರಬರಾಜಾಗುತ್ತಿರುವ‌ ನೀರಿನ ಪೈಪ್ ಸಹ ನಾಶವಾಗಿದ್ದು, ಇದನ್ನು ರಿಪೇರಿ ಮಾಡಿಲ್ಲ. ಪ್ಯೂರಿಫೈಯರ್ ವಾಟರ್ ಫಿಲ್ಟರ್ ಕೂಡ ಕೆಟ್ಟುನಿಂತು ಹಲವು ದಿನಗಳು ಕಳೆದರು ಸಂಬಂಧಪಟ್ಟ ಅಧಿಕಾರಿಗಳು ಖ್ಯಾರೆ ಎನ್ನುತ್ತಿಲ್ಲ. ಊರಿಗೆ ಸರಸಮರ್ಪಕ, ಶುದ್ಧ ಕುಡಿಯುವ ನೀರಿನ್ನು ಸರಬರಾಜು ಮಾಡಬೇಕು ಎಂದು ಊರಿನ ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಅಗತ್ಯ ಕ್ರಮವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಸೂಚಿಸಿದ್ದರು.

ಬೇಸಿಗೆ ಹಿನ್ನೆಲೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 080-22221050 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

Ramesh Babu

Journalist

Recent Posts

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

11 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

14 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

16 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

18 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

19 hours ago

Free Blackjack Online: The Most Effective Means to Practice and Have A Good Time

Blackjack is one of the most prominent gambling enterprise video games on the planet. It's…

20 hours ago