ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಿರೇಮುದೇನಹಳ್ಳಿಯಲ್ಲಿರುವ ಓವರ್ ಹೆಡ್ ಟ್ಯಾಂಕ್ ನಿಂದ ಸರಬರಾಜಾಗುವ ಕುಡಿಯುವ ನೀರಿನಲ್ಲಿ ಕಲುಷಿತ ನೀರು ಮಿಶ್ರಣಗೊಂಡು ಹುಳ ಹುಪ್ಪಟೆಗಳು ಕಂಡು ಬರುತ್ತಿದ್ದು, ಊರಿನ ಗ್ರಾಮಸ್ಥರು ಆಂತಕಕ್ಕೆ ಸಿಲುಕಿದ್ದಾರೆ.
ಹಲವಾರು ದಿನಗಳಿಂದ ಕುಡಿಯುವ ನೀರಿನಲ್ಲಿ ಹುಳು ಹುಪ್ಪಟೆಗಳು ಕಂಡು ಬರುತ್ತಿದ್ದು, ಈ ಕುರಿತು ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ಯಾವ ಕ್ರಮ ಕೈಗೊಳ್ಳದೇ ಇಲ್ಲಿನ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯವಹಿಸುತ್ತಿದ್ದಾರೆ ಎಂದು ಊರಿನ ಗ್ರಾಮಸ್ಥರು ಆರೋಪಿಸಿದ್ದಾರೆ.
ಅನೇಕ ಬಡ ಕುಟುಂಬಗಳು ರೈತಾಪಿ ವರ್ಗದ ಜನರೇ ವಾಸಿಸುವ ಈ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಪೂರೈಸುವ ನೀರೇ ಕುಡಿಯಲು ಆಧಾರವಾಗಿದೆ.
ಅಲ್ಲದೇ ಜಾನುವಾರಗಳಿಗೂ ಕುಡಿಯಲು ಇದೇ ನೀರು ಬಳಕೆ ಮಾಡುತ್ತಿರುವುದರಿಂದ ಕಲುಷಿತ ನೀರು ಸರಬರಾಜು ಆಗುತ್ತಿದ್ದು, ಇದರಿಂದ ಅನೇಕ ರೋಗ ರುಜಿನಗಳು ಹರಡುವ ಆತಂಕ ಇಲ್ಲಿಯ ನಿವಾಸಿಗಳನ್ನು ಕಾಡುತ್ತಿದೆ.
ಕಳೆದ ಒಂದು ತಿಂಗಳಿನಿಂದ ಈ ರೀತಿ ಸಮಸ್ಯೆ ಆಗುತ್ತಿದ್ದು, ಕುರಿತು ಹಲವು ಬಾರಿ ಗ್ರಾಮ ಪಂಚಾಯಿತಿ ಅಧಿಕಾರಿ, ಸಿಬ್ಬಂದಿಗೆ ಮನವಿ ಮಾಡಿಕೊಂಡಿದ್ದರೂ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಪಂಚಾಯಿತಿ ಅಧಿಕಾರಿಗಳು ಮುಂದಾಗುತ್ತಿಲ್ಲ ಎಂಬುವುದು ಇಲ್ಲಿನ ನಿವಾಸಿಗಳ ಆರೋಪವಾಗಿದೆ.
ಕುಡಿಯುವ ನೀರಿನ ಸಮಸ್ಯೆಯನ್ನು ನಿವಾರಿಸಲು ಅಗತ್ಯ ಕ್ರಮವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಸೂಚಿಸಿದ್ದರು.
ಬೇಸಿಗೆ ಹಿನ್ನೆಲೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 080-22221050 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…