ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ತಕ್ಷಣ ಪರಿಹಾರ ಒದಗಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೊತೆ ಪ್ರತಿ ಮಾಹೆಯ 2ನೇ ಹಾಗೂ 4ನೇ ಸೋಮವಾರ ಕುಡಿಯುವ ನೀರಿನ ಸಮಸ್ಯೆಗಳ ವಸ್ತು ಸ್ಥಿತಿ ಬಗ್ಗೆ ಸಭೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಧ್ಯಕ್ಷತೆಯಲ್ಲಿ ನಡೆಸಲಾಗುತ್ತಿದೆ.

ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ 24/7 ಜಿಲ್ಲೆಯಲ್ಲಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾದಾಗ ಸಾರ್ವಜನಿಕರು ಉಚಿತ ದೂರವಾಣಿ ಸಂಖ್ಯೆ 080-22221050 ಕರೆ ಮಾಡಿ ಸಮಸ್ಯೆಯನ್ನು ತಿಳಿಸಬಹುದಾಗಿದೆ.

24/7 ಕಂಟ್ರೋಲ್ ರೂಂ ನಲ್ಲಿನ ಕರ್ತವ್ಯನಿರತ ಸಿಬ್ಬಂದಿ ತಕ್ಷಣವೇ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಸಾರ್ವಜನಿಕರಿಂದ ಕರೆಗಳನ್ನು ಸ್ವೀಕರಿಸಿ, ದೂರುಗಳನ್ನು ದಾಖಲಿಸಿಕೊಂಡು, ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸುವ ಬಗ್ಗೆ ಕ್ರಮವಹಿಸಲಾಗುತ್ತದೆ.

ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಎಲ್ಲಾ ಗ್ರಾಮ ಪಂಚಾಯಿತಿಗಳ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಸಭೆ ನಡೆಸಿ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ವಸತಿ ಶಾಲೆಯಲ್ಲಿ ಅನುಮಾನಾಸ್ಪದ ವಿದ್ಯಾರ್ಥಿ ಸಾವು: ಶಿಕ್ಷಕರ ವಿರುದ್ಧ ಪೋಷಕರ ಆರೋಪ

ದೇವನಹಳ್ಳಿ: ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ 12 ವರ್ಷದ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದ ರೀತಿಯಲ್ಲಿ ಮೃತಪಟ್ಟಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ…

57 minutes ago

ಭ್ರಷ್ಟಾಚಾರ ಆರೋಪ: ಮೂವರು ಅಧಿಕಾರಿಗಳ 14 ಸ್ಥಳಗಳಲ್ಲಿ ಲೋಕಾಯುಕ್ತ ದಾಳಿ

ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ…

4 hours ago

2026ರಲ್ಲಿ ‘ಸೂಪರ್ ಎಲ್ ನಿನೊ’ ಆತಂಕ: ಭಾರತಕ್ಕೆ ಕಡಿಮೆ ಮಳೆ, ಕೃಷಿ ಮತ್ತು ಜಲಮೂಲಗಳ ಮೇಲೆ ಗಂಭೀರ ಪರಿಣಾಮದ ಎಚ್ಚರಿಕೆ

ನವದೆಹಲಿ: 2026ರಲ್ಲಿ ರೂಪುಗೊಳ್ಳುತ್ತಿರುವ "ಸೂಪರ್ ಎಲ್ ನಿನೊ" ಪರಿಣಾಮ ದೇಶದ ಮಾನ್ಸೂನ್ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ…

10 hours ago

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

21 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

22 hours ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

22 hours ago