ಕುಡಿಯುವ ನೀರಿನ ಸಮಸ್ಯೆ ಬರದಂತೆ ಮುಂಜಾಗ್ರತೆ ವಹಿಸಿ- ಬಾಕಿ ಇರುವ ತೆರಿಗೆಯನ್ನು ಶೀಘ್ರ ವಸೂಲಾತಿ ಮಾಡಿ-ಪೌರಾಡಳಿತ ಹಾಗೂ ಹಜ್ ಇಲಾಖೆ ಸಚಿವರಾದ ರಹೀಂ ಖಾನ್

‘ಸರ್ಕಾರದಿಂದ ಬಿಡುಗಡೆಯಾದ ಅನುದಾನ ಆಯಾ ಆರ್ಥಿಕ ವರ್ಷದಲ್ಲೇ ಬಳಕೆ ಮಾಡಬೇಕು ಅಮೃತ್ ನಗರೋತ್ಥಾನ- 04 ರಡಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಪೌರಾಡಳಿತ ಹಾಗೂ ಹಜ್ ಇಲಾಖೆ ಸಚಿವರಾದ ರಹೀಂ ಖಾನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರೋತ್ಥಾನ-04 ಮೂರು ವರ್ಷದ ಯೋಜನೆ, ಕೈಗೆತ್ತಿಕೊಂಡಿರುವ ಕಾಮಗಾರಿಗಳು ಇನ್ನು ಬಾಕಿ ಇರುವುದರಿಂದ ಯೋಜನೆಯನ್ನು 4 ವರ್ಷಗಳಿಗೆ ವಿಸ್ತರಣೆ ಮಾಡಲಾಗಿದೆ. ರಾಜ್ಯಾದ್ಯಂತ ನಗರೋತ್ಥಾನ-4 ರಲ್ಲಿ 600 ಕಾಮಗಾರಿಗಳು ಬಾಕಿ ಉಳಿದಿದೆ. ನಗರೋತ್ಥಾನ-05 ಕ್ಕೆ 5000 ಕೋಟಿ ನೀಡಲು ಆರ್ಥಿಕ ಇಲಾಖೆಗೆ ವರದಿ ನೀಡಲಾಗಿದೆ. ಮೊದಲು ನಗರೋತ್ಥಾನ-4 ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಬೇಕು ಎಂದರು.

ಮುಂಬರುವ ಬೇಸಿಗೆ ಸಮಯದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣ ಆಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಸಮಸ್ಯೆ ಉಂಟಾಗುವ ಪ್ರದೇಶದಲ್ಲಿ ಮೊದಲೇ ಅಗತ್ಯ ತಯಾರಿ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

*ಬಾಕಿ ಇರುವ ತೆರಿಗೆಯನ್ನು ಶೀಘ್ರ ವಸೂಲಾತಿ ಮಾಡಿ*

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಇರುವ ಆಸ್ತಿ ತೆರಿಗೆ, ನೀರಿನ ತೆರಿಗೆ, ಅಂಗಡಿ ಮಳಿಗೆಗಳ ಬಾಡಿಗೆ ತೆರಿಗೆ, ಉದ್ದಿಮೆ ಪರವಾನಗಿ ತೆರಿಗೆ ವಸೂಲಾತಿಯಲ್ಲಿ ಶೇಕಡ 100% ರಷ್ಟು ಪ್ರಗತಿ ಸಾಧಿಸಿ, ಜೊತೆಗೆ 10 ವರ್ಷಗಳಿಂದ ಒಂದೇ ರೀತಿಯ ತೆರಿಗೆ ಕಟ್ಟುತ್ತಿರುವ ತೆರಿಗೆದಾರರ ಮನೆಗಳಿಗೆ ಭೇಟಿ ನೀಡಿ, ಅಲ್ಲಿ ಎಷ್ಟು ಮಹಡಿ ಮನೆಗಳಿವೆ, ಒಂದೇ ಮನೆಗೆ ಬಾಡಿಗೆ ಕಟ್ಟುತ್ತಿದ್ದಾರೆ, ಎಷ್ಟು ಮನೆಗಳಿಗೆ ಬಾಡಿಗೆ ಕಟ್ಟುತ್ತಿದ್ದಾರೆ ಎನ್ನುವುದನ್ನು ಪರಿಶೀಲನೆ ಮಾಡಿ ಎಂದರು.

*ಇ-ಖಾತೆ ಮಾಡಲು ವಿಶೇಷ ಶಿಬಿರ ಆಯೋಜಿಸಿ*
ಅನಧಿಕೃತ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ, ಪ್ರತ್ಯೇಕ ವಹಿ (ಬಿ-ರಿಜಿಸ್ಟರ್) ಯಲ್ಲಿ ದಾಖಲಿಸಲು ಅವಕಾಶ ಕಲ್ಪಿಸಿದ್ದು, ಇದರಿಂದ ನಗರ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ఆస్తి ತೆರಿಗೆ ಸಂಗ್ರಹಣೆ ಮಾಡಲು ಅನುಕೂಲವಾಗುತ್ತದೆ. ಹಾಗೂ ಸಾರ್ವಜನಿಕರಿಗೆ ತಮ್ಮ ಆಸ್ತಿಯ ಇ-ಖಾತಾ ದೊರೆಯುವುದರಿಂದ ವಹಿವಾಟುಗಳನ್ನು ನಡೆಸಲು ಕೂಡ ಅನುಕೂಲವಾಗುತ್ತದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ನಗರ ಸ್ಥಳೀಯ ಸಂಸ್ಥೆಗಳಲ್ಲಿ -ಅಭಿಯಾನವನ್ನು ನಡೆಸಿ ನಿಯಮಿತವಾಗಿ ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ನಿಗಧಿಪಡಿಸಿದ ಸಮಯದೊಳಗೆ ಇ-ಖಾತಾ ದೊರೆಯುವಂತೆ ಕ್ರಮ ಕೈಗೊಳ್ಳಿ ಎಂದರು.

ಇದಕ್ಕೂ ಮುನ್ನ ದೇವನಹಳ್ಳಿ ಪಟ್ಟಣದ ಎಸ್.ಎಫ್.ಟಿ.ಪಿ ಘಟಕ ಹಾಗೂ ಸಿಹಿನೀರು ಕೆರೆಯ ನೀರು ಸಂಸ್ಕರಣಾ ಘಟಕಗಳಿಗೆ ಪೌರಾಡಳಿತ ಸಚಿವರು ಭೇಟಿ ನೀಡಿ, ಮಾಹಿತಿ ಪಡೆದರು.

ಸಭೆಯಲ್ಲಿ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ಡಾ. ಪಿ.ಎನ್ ರವಿಂದ್ರ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಚಿವರ ಆಪ್ತ ಕಾರ್ಯದರ್ಶಿ ಡಾ. ಮುರಳೀಧರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ರಮೇಶ್, ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷರಾದ ಸುಮಿತ್ರಾ ಕೆ, ಉಪಾಧ್ಯಕ್ಷರಾದ ಎಂ. ಮಲ್ಲೇಶ್, ಪೌರಾಡಳಿತ ನಿರ್ದೇಶನಾಲಯದ ಬಸವರಾಜ ಸೇರಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

9 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

10 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

1 day ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago