ಕುಡಿಯುವ ನೀರಿನ ಸಮಸ್ಯೆ ಬರದಂತೆ ಮುಂಜಾಗ್ರತೆ ವಹಿಸಿ- ಬಾಕಿ ಇರುವ ತೆರಿಗೆಯನ್ನು ಶೀಘ್ರ ವಸೂಲಾತಿ ಮಾಡಿ-ಪೌರಾಡಳಿತ ಹಾಗೂ ಹಜ್ ಇಲಾಖೆ ಸಚಿವರಾದ ರಹೀಂ ಖಾನ್

‘ಸರ್ಕಾರದಿಂದ ಬಿಡುಗಡೆಯಾದ ಅನುದಾನ ಆಯಾ ಆರ್ಥಿಕ ವರ್ಷದಲ್ಲೇ ಬಳಕೆ ಮಾಡಬೇಕು ಅಮೃತ್ ನಗರೋತ್ಥಾನ- 04 ರಡಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಪೌರಾಡಳಿತ ಹಾಗೂ ಹಜ್ ಇಲಾಖೆ ಸಚಿವರಾದ ರಹೀಂ ಖಾನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರೋತ್ಥಾನ-04 ಮೂರು ವರ್ಷದ ಯೋಜನೆ, ಕೈಗೆತ್ತಿಕೊಂಡಿರುವ ಕಾಮಗಾರಿಗಳು ಇನ್ನು ಬಾಕಿ ಇರುವುದರಿಂದ ಯೋಜನೆಯನ್ನು 4 ವರ್ಷಗಳಿಗೆ ವಿಸ್ತರಣೆ ಮಾಡಲಾಗಿದೆ. ರಾಜ್ಯಾದ್ಯಂತ ನಗರೋತ್ಥಾನ-4 ರಲ್ಲಿ 600 ಕಾಮಗಾರಿಗಳು ಬಾಕಿ ಉಳಿದಿದೆ. ನಗರೋತ್ಥಾನ-05 ಕ್ಕೆ 5000 ಕೋಟಿ ನೀಡಲು ಆರ್ಥಿಕ ಇಲಾಖೆಗೆ ವರದಿ ನೀಡಲಾಗಿದೆ. ಮೊದಲು ನಗರೋತ್ಥಾನ-4 ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಬೇಕು ಎಂದರು.

ಮುಂಬರುವ ಬೇಸಿಗೆ ಸಮಯದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣ ಆಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಸಮಸ್ಯೆ ಉಂಟಾಗುವ ಪ್ರದೇಶದಲ್ಲಿ ಮೊದಲೇ ಅಗತ್ಯ ತಯಾರಿ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

*ಬಾಕಿ ಇರುವ ತೆರಿಗೆಯನ್ನು ಶೀಘ್ರ ವಸೂಲಾತಿ ಮಾಡಿ*

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಇರುವ ಆಸ್ತಿ ತೆರಿಗೆ, ನೀರಿನ ತೆರಿಗೆ, ಅಂಗಡಿ ಮಳಿಗೆಗಳ ಬಾಡಿಗೆ ತೆರಿಗೆ, ಉದ್ದಿಮೆ ಪರವಾನಗಿ ತೆರಿಗೆ ವಸೂಲಾತಿಯಲ್ಲಿ ಶೇಕಡ 100% ರಷ್ಟು ಪ್ರಗತಿ ಸಾಧಿಸಿ, ಜೊತೆಗೆ 10 ವರ್ಷಗಳಿಂದ ಒಂದೇ ರೀತಿಯ ತೆರಿಗೆ ಕಟ್ಟುತ್ತಿರುವ ತೆರಿಗೆದಾರರ ಮನೆಗಳಿಗೆ ಭೇಟಿ ನೀಡಿ, ಅಲ್ಲಿ ಎಷ್ಟು ಮಹಡಿ ಮನೆಗಳಿವೆ, ಒಂದೇ ಮನೆಗೆ ಬಾಡಿಗೆ ಕಟ್ಟುತ್ತಿದ್ದಾರೆ, ಎಷ್ಟು ಮನೆಗಳಿಗೆ ಬಾಡಿಗೆ ಕಟ್ಟುತ್ತಿದ್ದಾರೆ ಎನ್ನುವುದನ್ನು ಪರಿಶೀಲನೆ ಮಾಡಿ ಎಂದರು.

*ಇ-ಖಾತೆ ಮಾಡಲು ವಿಶೇಷ ಶಿಬಿರ ಆಯೋಜಿಸಿ*
ಅನಧಿಕೃತ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ, ಪ್ರತ್ಯೇಕ ವಹಿ (ಬಿ-ರಿಜಿಸ್ಟರ್) ಯಲ್ಲಿ ದಾಖಲಿಸಲು ಅವಕಾಶ ಕಲ್ಪಿಸಿದ್ದು, ಇದರಿಂದ ನಗರ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ఆస్తి ತೆರಿಗೆ ಸಂಗ್ರಹಣೆ ಮಾಡಲು ಅನುಕೂಲವಾಗುತ್ತದೆ. ಹಾಗೂ ಸಾರ್ವಜನಿಕರಿಗೆ ತಮ್ಮ ಆಸ್ತಿಯ ಇ-ಖಾತಾ ದೊರೆಯುವುದರಿಂದ ವಹಿವಾಟುಗಳನ್ನು ನಡೆಸಲು ಕೂಡ ಅನುಕೂಲವಾಗುತ್ತದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ನಗರ ಸ್ಥಳೀಯ ಸಂಸ್ಥೆಗಳಲ್ಲಿ -ಅಭಿಯಾನವನ್ನು ನಡೆಸಿ ನಿಯಮಿತವಾಗಿ ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ನಿಗಧಿಪಡಿಸಿದ ಸಮಯದೊಳಗೆ ಇ-ಖಾತಾ ದೊರೆಯುವಂತೆ ಕ್ರಮ ಕೈಗೊಳ್ಳಿ ಎಂದರು.

ಇದಕ್ಕೂ ಮುನ್ನ ದೇವನಹಳ್ಳಿ ಪಟ್ಟಣದ ಎಸ್.ಎಫ್.ಟಿ.ಪಿ ಘಟಕ ಹಾಗೂ ಸಿಹಿನೀರು ಕೆರೆಯ ನೀರು ಸಂಸ್ಕರಣಾ ಘಟಕಗಳಿಗೆ ಪೌರಾಡಳಿತ ಸಚಿವರು ಭೇಟಿ ನೀಡಿ, ಮಾಹಿತಿ ಪಡೆದರು.

ಸಭೆಯಲ್ಲಿ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ಡಾ. ಪಿ.ಎನ್ ರವಿಂದ್ರ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಚಿವರ ಆಪ್ತ ಕಾರ್ಯದರ್ಶಿ ಡಾ. ಮುರಳೀಧರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ರಮೇಶ್, ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷರಾದ ಸುಮಿತ್ರಾ ಕೆ, ಉಪಾಧ್ಯಕ್ಷರಾದ ಎಂ. ಮಲ್ಲೇಶ್, ಪೌರಾಡಳಿತ ನಿರ್ದೇಶನಾಲಯದ ಬಸವರಾಜ ಸೇರಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

1 hour ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago