ಕುಡಿಯುವ ನೀರಿನ ಸಮಸ್ಯೆ ಬರದಂತೆ ಮುಂಜಾಗ್ರತೆ ವಹಿಸಿ- ಬಾಕಿ ಇರುವ ತೆರಿಗೆಯನ್ನು ಶೀಘ್ರ ವಸೂಲಾತಿ ಮಾಡಿ-ಪೌರಾಡಳಿತ ಹಾಗೂ ಹಜ್ ಇಲಾಖೆ ಸಚಿವರಾದ ರಹೀಂ ಖಾನ್

‘ಸರ್ಕಾರದಿಂದ ಬಿಡುಗಡೆಯಾದ ಅನುದಾನ ಆಯಾ ಆರ್ಥಿಕ ವರ್ಷದಲ್ಲೇ ಬಳಕೆ ಮಾಡಬೇಕು ಅಮೃತ್ ನಗರೋತ್ಥಾನ- 04 ರಡಿ ಕೈಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಪೌರಾಡಳಿತ ಹಾಗೂ ಹಜ್ ಇಲಾಖೆ ಸಚಿವರಾದ ರಹೀಂ ಖಾನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನಗರೋತ್ಥಾನ-04 ಮೂರು ವರ್ಷದ ಯೋಜನೆ, ಕೈಗೆತ್ತಿಕೊಂಡಿರುವ ಕಾಮಗಾರಿಗಳು ಇನ್ನು ಬಾಕಿ ಇರುವುದರಿಂದ ಯೋಜನೆಯನ್ನು 4 ವರ್ಷಗಳಿಗೆ ವಿಸ್ತರಣೆ ಮಾಡಲಾಗಿದೆ. ರಾಜ್ಯಾದ್ಯಂತ ನಗರೋತ್ಥಾನ-4 ರಲ್ಲಿ 600 ಕಾಮಗಾರಿಗಳು ಬಾಕಿ ಉಳಿದಿದೆ. ನಗರೋತ್ಥಾನ-05 ಕ್ಕೆ 5000 ಕೋಟಿ ನೀಡಲು ಆರ್ಥಿಕ ಇಲಾಖೆಗೆ ವರದಿ ನೀಡಲಾಗಿದೆ. ಮೊದಲು ನಗರೋತ್ಥಾನ-4 ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಬೇಕು ಎಂದರು.

ಮುಂಬರುವ ಬೇಸಿಗೆ ಸಮಯದಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣ ಆಗದಂತೆ ನೋಡಿಕೊಳ್ಳಬೇಕು. ಒಂದು ವೇಳೆ ಸಮಸ್ಯೆ ಉಂಟಾಗುವ ಪ್ರದೇಶದಲ್ಲಿ ಮೊದಲೇ ಅಗತ್ಯ ತಯಾರಿ ಮಾಡಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

*ಬಾಕಿ ಇರುವ ತೆರಿಗೆಯನ್ನು ಶೀಘ್ರ ವಸೂಲಾತಿ ಮಾಡಿ*

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬಾಕಿ ಇರುವ ಆಸ್ತಿ ತೆರಿಗೆ, ನೀರಿನ ತೆರಿಗೆ, ಅಂಗಡಿ ಮಳಿಗೆಗಳ ಬಾಡಿಗೆ ತೆರಿಗೆ, ಉದ್ದಿಮೆ ಪರವಾನಗಿ ತೆರಿಗೆ ವಸೂಲಾತಿಯಲ್ಲಿ ಶೇಕಡ 100% ರಷ್ಟು ಪ್ರಗತಿ ಸಾಧಿಸಿ, ಜೊತೆಗೆ 10 ವರ್ಷಗಳಿಂದ ಒಂದೇ ರೀತಿಯ ತೆರಿಗೆ ಕಟ್ಟುತ್ತಿರುವ ತೆರಿಗೆದಾರರ ಮನೆಗಳಿಗೆ ಭೇಟಿ ನೀಡಿ, ಅಲ್ಲಿ ಎಷ್ಟು ಮಹಡಿ ಮನೆಗಳಿವೆ, ಒಂದೇ ಮನೆಗೆ ಬಾಡಿಗೆ ಕಟ್ಟುತ್ತಿದ್ದಾರೆ, ಎಷ್ಟು ಮನೆಗಳಿಗೆ ಬಾಡಿಗೆ ಕಟ್ಟುತ್ತಿದ್ದಾರೆ ಎನ್ನುವುದನ್ನು ಪರಿಶೀಲನೆ ಮಾಡಿ ಎಂದರು.

*ಇ-ಖಾತೆ ಮಾಡಲು ವಿಶೇಷ ಶಿಬಿರ ಆಯೋಜಿಸಿ*
ಅನಧಿಕೃತ ಆಸ್ತಿಗಳನ್ನು ಆಸ್ತಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ, ಪ್ರತ್ಯೇಕ ವಹಿ (ಬಿ-ರಿಜಿಸ್ಟರ್) ಯಲ್ಲಿ ದಾಖಲಿಸಲು ಅವಕಾಶ ಕಲ್ಪಿಸಿದ್ದು, ಇದರಿಂದ ನಗರ ಸ್ಥಳೀಯ ಸಂಸ್ಥೆಗಳಿಗೆ ಹೆಚ್ಚಿನ ఆస్తి ತೆರಿಗೆ ಸಂಗ್ರಹಣೆ ಮಾಡಲು ಅನುಕೂಲವಾಗುತ್ತದೆ. ಹಾಗೂ ಸಾರ್ವಜನಿಕರಿಗೆ ತಮ್ಮ ಆಸ್ತಿಯ ಇ-ಖಾತಾ ದೊರೆಯುವುದರಿಂದ ವಹಿವಾಟುಗಳನ್ನು ನಡೆಸಲು ಕೂಡ ಅನುಕೂಲವಾಗುತ್ತದೆ. ಹಾಗಾಗಿ ಸಂಬಂಧಪಟ್ಟ ಅಧಿಕಾರಿಗಳು ನಗರ ಸ್ಥಳೀಯ ಸಂಸ್ಥೆಗಳಲ್ಲಿ -ಅಭಿಯಾನವನ್ನು ನಡೆಸಿ ನಿಯಮಿತವಾಗಿ ಪರಿಶೀಲನೆ ನಡೆಸಿ ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ನಿಗಧಿಪಡಿಸಿದ ಸಮಯದೊಳಗೆ ಇ-ಖಾತಾ ದೊರೆಯುವಂತೆ ಕ್ರಮ ಕೈಗೊಳ್ಳಿ ಎಂದರು.

ಇದಕ್ಕೂ ಮುನ್ನ ದೇವನಹಳ್ಳಿ ಪಟ್ಟಣದ ಎಸ್.ಎಫ್.ಟಿ.ಪಿ ಘಟಕ ಹಾಗೂ ಸಿಹಿನೀರು ಕೆರೆಯ ನೀರು ಸಂಸ್ಕರಣಾ ಘಟಕಗಳಿಗೆ ಪೌರಾಡಳಿತ ಸಚಿವರು ಭೇಟಿ ನೀಡಿ, ಮಾಹಿತಿ ಪಡೆದರು.

ಸಭೆಯಲ್ಲಿ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ಡಾ. ಪಿ.ಎನ್ ರವಿಂದ್ರ, ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಸಚಿವರ ಆಪ್ತ ಕಾರ್ಯದರ್ಶಿ ಡಾ. ಮುರಳೀಧರ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾಧಿಕಾರಿ ರಮೇಶ್, ದೊಡ್ಡಬಳ್ಳಾಪುರ ನಗರಸಭೆ ಅಧ್ಯಕ್ಷರಾದ ಸುಮಿತ್ರಾ ಕೆ, ಉಪಾಧ್ಯಕ್ಷರಾದ ಎಂ. ಮಲ್ಲೇಶ್, ಪೌರಾಡಳಿತ ನಿರ್ದೇಶನಾಲಯದ ಬಸವರಾಜ ಸೇರಿ ನಗರ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

Ramesh Babu

Journalist

Recent Posts

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

4 hours ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

5 hours ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

16 hours ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

17 hours ago

ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್‌ನಲ್ಲಿ ಕರಡಿಗಳ ಪ್ರತ್ಯಕ್ಷ: ನಂದಿಬೆಟ್ಟ ಸಮೀಪ ವನ್ಯಜೀವಿಗಳ ಓಡಾಟದಿಂದ ಆತಂಕ

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್‌ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…

17 hours ago

ಪೆಟ್ರೋಲ್ ಟ್ಯಾಂಕರ್-ಹಾಲಿನ ಟ್ಯಾಂಕರ್ ನಡುವೆ ಅಪಘಾತ: ಬೆಂಕಿಗಾಹುತಿಯಾದ ಎರಡು ಟ್ಯಾಂಕರ್ ಗಳು

ದೊಡ್ಡಬಳ್ಳಾಪುರ: ತಾಲೂಕಿನ ಮಧುರೆ ಹೋಬಳಿಯ 11ನೇ ಮೈಲಿ (ಮಲ್ಲೋಹಳ್ಳಿ ಸಮೀಪ) ಪೆಟ್ರೋಲ್ ಟ್ಯಾಂಕರ್ ಹಾಗೂ ಹಾಲಿನ ಟ್ಯಾಂಕರ್ ನಡುವೆ ಸಂಭವಿಸಿದ…

1 day ago