Categories: ರಾಜ್ಯ

ಕುಡಿಯುವ ನೀರು ಅರಸಿ ಕಾಡಿನಿಂದ ನಾಡಿಗೆ ಬಂದ ಚುಕ್ಕಿ ಜಿಂಕೆ..!

ಚನ್ನಪಟ್ಟಣ: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಗ್ರಾಮಕ್ಕೆ ಕೊಂಬುವುಳ್ಳ 7 ವರ್ಷ ವಯಸ್ಸಿನ ಗಂಡು ಚುಕ್ಕಿ ಜಿಂಕೆಯೊಂದು ಕಾಡಿನಿಂದ ದಾರಿತಪ್ಪಿ ಬಂದ ಘಟನೆ ಶನಿವಾರ ಸಂಜೆ ನಡೆದಿದೆ.

ಕಾಡಂಚಿನ ಚನ್ನಪ್ಪಾಜಿ ಬೆಟ್ಟದ ಕಡೆಯಿಂದ ದಾರಿ ತಪ್ಪಿ ಬಂದ ಚುಕ್ಕಿ ಜಿಂಕೆಯನ್ನು ಗ್ರಾಮದ ನಾಯಿಗಳು ಓಡಿಸಿಕೊಂಡು ಬಂದಾಗ ಜಿಂಕೆಯು ಹೆದರಿ ಗ್ರಾಮದ ವಸಂತಮ್ಮ ಎಂಬುವರ ಮನೆಗೆ ನುಗ್ಗಿದೆ.

ಭಯದಿಂದ ಮನೆಯಲ್ಲಿದ್ದ ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿದೆ. ಜಿಂಕೆಯನ್ನು ನೋಡಿ ಮನೆಯವರು ಸಹ ಗಾಬರಿಗೊಂಡಿದ್ದಾರೆ.

ಇದನ್ನು ಕಂಡ ಗ್ರಾಮದ ಮುಖಂಡರಾದ ಎಂ.ರಾಮಕೃಷ್ಣ, ಎಂ.ಪುಟ್ಟೇಗೌಡ, ಎಚ್.ಎಸ್.ಸಿದ್ದರಾಜು ಇತರರು ನಾಯಿಗಳನ್ನು ಓಡಿಸಿ ಜಿಂಕೆಯನ್ನು ರಕ್ಷಣೆ ಮಾಡಿದ್ದರೆ.

ಜಿಂಕೆಗೆ ತೊಂದರೆಯಾಗದಂತೆ ಅದನ್ನು ಹಿಡಿದು ಹಗ್ಗದಿಂದ ಕಟ್ಟಿ ಹಾಕಿದರು. ನಂತರ ಅದಕ್ಕೆ ನೀರು ಕುಡಿಸಿದರು. ಆನಂತರ ಅರಣ್ಯ ಇಲಾಖೆ ಸಿಬ್ಬಂದಿಗೆ ದೂರವಾಣಿ ಮೂಲಕ ವಿಷಯ ಮುಟ್ಟಿಸಿದ್ದಾರೆ.

ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಾತನೂರು ವಿಭಾಗದ ಸಿಬ್ಬಂದಿ ಕಾಂತರಾಜು, ರಿಜ್ವಾನ್ ಅವರು ಜಿಂಕೆಯನ್ನು ವಶಕ್ಕೆ ಪಡೆದುಕೊಂಡರು.

ಕುಡಿಯುವ ನೀರು ಅರಸಿಕೊಂಡು ಈ ಜಿಂಕೆ ಕಾಡಿನಿಂದ ನಾಡಿಗೆ ಬಂದಿದೆ. ಇದಕ್ಕೆ ಆರೋಗ್ಯ ತಪಾಸಣೆ ನಡೆಸಿ ಆನಂತರ ಮೇಲಾಧಿಕಾರಿಗಳ ಸೂಚನೆ ಮೇರೆಗೆ ಅರಣ್ಯಕ್ಕೆ ಬಿಡಲಾಗುವುದು ಎಂದು ಅವರು ತಿಳಿಸಿ, ಜೊತೆಯಲ್ಲಿ ಕೊಂಡೊಯ್ದರು.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

6 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

9 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

13 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

1 day ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

1 day ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago