ಚನ್ನಪಟ್ಟಣ: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಗ್ರಾಮಕ್ಕೆ ಕೊಂಬುವುಳ್ಳ 7 ವರ್ಷ ವಯಸ್ಸಿನ ಗಂಡು ಚುಕ್ಕಿ ಜಿಂಕೆಯೊಂದು ಕಾಡಿನಿಂದ ದಾರಿತಪ್ಪಿ ಬಂದ ಘಟನೆ ಶನಿವಾರ ಸಂಜೆ ನಡೆದಿದೆ.
ಕಾಡಂಚಿನ ಚನ್ನಪ್ಪಾಜಿ ಬೆಟ್ಟದ ಕಡೆಯಿಂದ ದಾರಿ ತಪ್ಪಿ ಬಂದ ಚುಕ್ಕಿ ಜಿಂಕೆಯನ್ನು ಗ್ರಾಮದ ನಾಯಿಗಳು ಓಡಿಸಿಕೊಂಡು ಬಂದಾಗ ಜಿಂಕೆಯು ಹೆದರಿ ಗ್ರಾಮದ ವಸಂತಮ್ಮ ಎಂಬುವರ ಮನೆಗೆ ನುಗ್ಗಿದೆ.
ಭಯದಿಂದ ಮನೆಯಲ್ಲಿದ್ದ ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿದೆ. ಜಿಂಕೆಯನ್ನು ನೋಡಿ ಮನೆಯವರು ಸಹ ಗಾಬರಿಗೊಂಡಿದ್ದಾರೆ.
ಇದನ್ನು ಕಂಡ ಗ್ರಾಮದ ಮುಖಂಡರಾದ ಎಂ.ರಾಮಕೃಷ್ಣ, ಎಂ.ಪುಟ್ಟೇಗೌಡ, ಎಚ್.ಎಸ್.ಸಿದ್ದರಾಜು ಇತರರು ನಾಯಿಗಳನ್ನು ಓಡಿಸಿ ಜಿಂಕೆಯನ್ನು ರಕ್ಷಣೆ ಮಾಡಿದ್ದರೆ.
ಜಿಂಕೆಗೆ ತೊಂದರೆಯಾಗದಂತೆ ಅದನ್ನು ಹಿಡಿದು ಹಗ್ಗದಿಂದ ಕಟ್ಟಿ ಹಾಕಿದರು. ನಂತರ ಅದಕ್ಕೆ ನೀರು ಕುಡಿಸಿದರು. ಆನಂತರ ಅರಣ್ಯ ಇಲಾಖೆ ಸಿಬ್ಬಂದಿಗೆ ದೂರವಾಣಿ ಮೂಲಕ ವಿಷಯ ಮುಟ್ಟಿಸಿದ್ದಾರೆ.
ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಾತನೂರು ವಿಭಾಗದ ಸಿಬ್ಬಂದಿ ಕಾಂತರಾಜು, ರಿಜ್ವಾನ್ ಅವರು ಜಿಂಕೆಯನ್ನು ವಶಕ್ಕೆ ಪಡೆದುಕೊಂಡರು.
ಕುಡಿಯುವ ನೀರು ಅರಸಿಕೊಂಡು ಈ ಜಿಂಕೆ ಕಾಡಿನಿಂದ ನಾಡಿಗೆ ಬಂದಿದೆ. ಇದಕ್ಕೆ ಆರೋಗ್ಯ ತಪಾಸಣೆ ನಡೆಸಿ ಆನಂತರ ಮೇಲಾಧಿಕಾರಿಗಳ ಸೂಚನೆ ಮೇರೆಗೆ ಅರಣ್ಯಕ್ಕೆ ಬಿಡಲಾಗುವುದು ಎಂದು ಅವರು ತಿಳಿಸಿ, ಜೊತೆಯಲ್ಲಿ ಕೊಂಡೊಯ್ದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…