ಚನ್ನಪಟ್ಟಣ: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಗ್ರಾಮಕ್ಕೆ ಕೊಂಬುವುಳ್ಳ 7 ವರ್ಷ ವಯಸ್ಸಿನ ಗಂಡು ಚುಕ್ಕಿ ಜಿಂಕೆಯೊಂದು ಕಾಡಿನಿಂದ ದಾರಿತಪ್ಪಿ ಬಂದ ಘಟನೆ ಶನಿವಾರ ಸಂಜೆ ನಡೆದಿದೆ.
ಕಾಡಂಚಿನ ಚನ್ನಪ್ಪಾಜಿ ಬೆಟ್ಟದ ಕಡೆಯಿಂದ ದಾರಿ ತಪ್ಪಿ ಬಂದ ಚುಕ್ಕಿ ಜಿಂಕೆಯನ್ನು ಗ್ರಾಮದ ನಾಯಿಗಳು ಓಡಿಸಿಕೊಂಡು ಬಂದಾಗ ಜಿಂಕೆಯು ಹೆದರಿ ಗ್ರಾಮದ ವಸಂತಮ್ಮ ಎಂಬುವರ ಮನೆಗೆ ನುಗ್ಗಿದೆ.
ಭಯದಿಂದ ಮನೆಯಲ್ಲಿದ್ದ ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿದೆ. ಜಿಂಕೆಯನ್ನು ನೋಡಿ ಮನೆಯವರು ಸಹ ಗಾಬರಿಗೊಂಡಿದ್ದಾರೆ.
ಇದನ್ನು ಕಂಡ ಗ್ರಾಮದ ಮುಖಂಡರಾದ ಎಂ.ರಾಮಕೃಷ್ಣ, ಎಂ.ಪುಟ್ಟೇಗೌಡ, ಎಚ್.ಎಸ್.ಸಿದ್ದರಾಜು ಇತರರು ನಾಯಿಗಳನ್ನು ಓಡಿಸಿ ಜಿಂಕೆಯನ್ನು ರಕ್ಷಣೆ ಮಾಡಿದ್ದರೆ.
ಜಿಂಕೆಗೆ ತೊಂದರೆಯಾಗದಂತೆ ಅದನ್ನು ಹಿಡಿದು ಹಗ್ಗದಿಂದ ಕಟ್ಟಿ ಹಾಕಿದರು. ನಂತರ ಅದಕ್ಕೆ ನೀರು ಕುಡಿಸಿದರು. ಆನಂತರ ಅರಣ್ಯ ಇಲಾಖೆ ಸಿಬ್ಬಂದಿಗೆ ದೂರವಾಣಿ ಮೂಲಕ ವಿಷಯ ಮುಟ್ಟಿಸಿದ್ದಾರೆ.
ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಾತನೂರು ವಿಭಾಗದ ಸಿಬ್ಬಂದಿ ಕಾಂತರಾಜು, ರಿಜ್ವಾನ್ ಅವರು ಜಿಂಕೆಯನ್ನು ವಶಕ್ಕೆ ಪಡೆದುಕೊಂಡರು.
ಕುಡಿಯುವ ನೀರು ಅರಸಿಕೊಂಡು ಈ ಜಿಂಕೆ ಕಾಡಿನಿಂದ ನಾಡಿಗೆ ಬಂದಿದೆ. ಇದಕ್ಕೆ ಆರೋಗ್ಯ ತಪಾಸಣೆ ನಡೆಸಿ ಆನಂತರ ಮೇಲಾಧಿಕಾರಿಗಳ ಸೂಚನೆ ಮೇರೆಗೆ ಅರಣ್ಯಕ್ಕೆ ಬಿಡಲಾಗುವುದು ಎಂದು ಅವರು ತಿಳಿಸಿ, ಜೊತೆಯಲ್ಲಿ ಕೊಂಡೊಯ್ದರು.
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…
ನೀಟ್ ಪ್ರವೇಶ ಪರೀಕ್ಷೆ.... ಆಡಳಿತಗಾರ ರಾಜಕಾರಣಿಗಳ ಸಂಪೂರ್ಣ ವೈಫಲ್ಯ, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ, ಪೋಷಕರ ಅತಿಯಾದ ದುರಾಸೆ, ವಿದ್ಯಾರ್ಥಿಗಳ ನಿರ್ಲಜ್ಜತೆ…
ರಾಮನಗರ: ಮುತ್ತತ್ತಿಯ ಕಾವೇರಿ ನದಿಯಲ್ಲಿ ಫೋಟೋ ತೆಗೆಯಲು ನೀರಿಗೆ ಇಳಿದ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ನೀರಿನಲ್ಲಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…