ಚನ್ನಪಟ್ಟಣ: ತಾಲ್ಲೂಕಿನ ವಿರುಪಾಕ್ಷಿಪುರ ಹೋಬಳಿಯ ಹುಚ್ಚಯ್ಯನದೊಡ್ಡಿ ಗ್ರಾಮಕ್ಕೆ ಕೊಂಬುವುಳ್ಳ 7 ವರ್ಷ ವಯಸ್ಸಿನ ಗಂಡು ಚುಕ್ಕಿ ಜಿಂಕೆಯೊಂದು ಕಾಡಿನಿಂದ ದಾರಿತಪ್ಪಿ ಬಂದ ಘಟನೆ ಶನಿವಾರ ಸಂಜೆ ನಡೆದಿದೆ.
ಕಾಡಂಚಿನ ಚನ್ನಪ್ಪಾಜಿ ಬೆಟ್ಟದ ಕಡೆಯಿಂದ ದಾರಿ ತಪ್ಪಿ ಬಂದ ಚುಕ್ಕಿ ಜಿಂಕೆಯನ್ನು ಗ್ರಾಮದ ನಾಯಿಗಳು ಓಡಿಸಿಕೊಂಡು ಬಂದಾಗ ಜಿಂಕೆಯು ಹೆದರಿ ಗ್ರಾಮದ ವಸಂತಮ್ಮ ಎಂಬುವರ ಮನೆಗೆ ನುಗ್ಗಿದೆ.
ಭಯದಿಂದ ಮನೆಯಲ್ಲಿದ್ದ ವಸ್ತುಗಳನ್ನೆಲ್ಲಾ ಚೆಲ್ಲಾಪಿಲ್ಲಿ ಮಾಡಿದೆ. ಜಿಂಕೆಯನ್ನು ನೋಡಿ ಮನೆಯವರು ಸಹ ಗಾಬರಿಗೊಂಡಿದ್ದಾರೆ.
ಇದನ್ನು ಕಂಡ ಗ್ರಾಮದ ಮುಖಂಡರಾದ ಎಂ.ರಾಮಕೃಷ್ಣ, ಎಂ.ಪುಟ್ಟೇಗೌಡ, ಎಚ್.ಎಸ್.ಸಿದ್ದರಾಜು ಇತರರು ನಾಯಿಗಳನ್ನು ಓಡಿಸಿ ಜಿಂಕೆಯನ್ನು ರಕ್ಷಣೆ ಮಾಡಿದ್ದರೆ.
ಜಿಂಕೆಗೆ ತೊಂದರೆಯಾಗದಂತೆ ಅದನ್ನು ಹಿಡಿದು ಹಗ್ಗದಿಂದ ಕಟ್ಟಿ ಹಾಕಿದರು. ನಂತರ ಅದಕ್ಕೆ ನೀರು ಕುಡಿಸಿದರು. ಆನಂತರ ಅರಣ್ಯ ಇಲಾಖೆ ಸಿಬ್ಬಂದಿಗೆ ದೂರವಾಣಿ ಮೂಲಕ ವಿಷಯ ಮುಟ್ಟಿಸಿದ್ದಾರೆ.
ವಿಷಯ ತಿಳಿದು ತಕ್ಷಣ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಸಾತನೂರು ವಿಭಾಗದ ಸಿಬ್ಬಂದಿ ಕಾಂತರಾಜು, ರಿಜ್ವಾನ್ ಅವರು ಜಿಂಕೆಯನ್ನು ವಶಕ್ಕೆ ಪಡೆದುಕೊಂಡರು.
ಕುಡಿಯುವ ನೀರು ಅರಸಿಕೊಂಡು ಈ ಜಿಂಕೆ ಕಾಡಿನಿಂದ ನಾಡಿಗೆ ಬಂದಿದೆ. ಇದಕ್ಕೆ ಆರೋಗ್ಯ ತಪಾಸಣೆ ನಡೆಸಿ ಆನಂತರ ಮೇಲಾಧಿಕಾರಿಗಳ ಸೂಚನೆ ಮೇರೆಗೆ ಅರಣ್ಯಕ್ಕೆ ಬಿಡಲಾಗುವುದು ಎಂದು ಅವರು ತಿಳಿಸಿ, ಜೊತೆಯಲ್ಲಿ ಕೊಂಡೊಯ್ದರು.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…