ಕುಡಿಯುವ ನೀರು ಸಮಸ್ಯೆ ಕಂಡುಬಂದಲ್ಲಿ ಸಹಾಯವಾಣಿ ಸಂಪರ್ಕಿಸಿ- ಸಿಇಒ ಡಾ.ಕೆ.ಎನ್ ಅನುರಾಧಾ

ಬೇಸಿಗೆ ಹಿನ್ನೆಲೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಸಾರ್ವಜನಿಕರು ಸಹಾಯವಾಣಿ ಸಂಖ್ಯೆ 080-22221050 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿ.ಪಂ ಸಿಇಒ ಡಾ.ಕೆ.ಎನ್ ಅನುರಾಧ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ನ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದಲ್ಲಿ 24/7 ಕಂಟ್ರೋಲ್ ರೂಂ ನಲ್ಲಿ 080-22221050 ಸಹಾಯವಾಣಿ ತೆರೆಯಲಾಗಿದೆ. 24/7 ಕಂಟ್ರೋಲ್ ರೂಂ ನಲ್ಲಿ ಸಿಬ್ಬಂದಿಗಳು ಕಾರ್ಯ ನಿರ್ವಹಿಸುತ್ತಿದ್ದು, ಜಿಲ್ಲೆಯ ಯಾವುದೇ ಗ್ರಾಮದ ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆ ಕಂಡುಬಂದಲ್ಲಿ ಮೇಲೆ ತಿಳಿಸಿದ ಸಹಾಯವಾಣಿ ಸಂಖ್ಯೆಗೆ ಕರೆಮಾಡಿ, ತಮ್ಮ ಗ್ರಾಮದ ವಿಳಾಸವನ್ನು ತಿಳಿಸಿದರೆ, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಅದಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ವಹಿಸುತ್ತಾರೆ.

ಜಿಲ್ಲೆಯ ನಾಲ್ಕು ತಾಲ್ಲೂಕುಗಳಲ್ಲಿನ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಾಹಕ ಅಧಿಕಾರಿಗಳು, ಆಯಾ ಗ್ರಾಮ ಪಂಚಾಯಿತಿಯ ಜಲಗಾರ (ವಾಟರ್ ಮ್ಯಾನ್)ಗಳು ಒಳಗೊಂಡಂತೆ ಕ್ಷಿಪ್ರ ಕಾರ್ಯಪಡೆಯನ್ನು ರಚಿಸಿಕೊಂಡು ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವ ಕೆಲಸವನ್ನು ಮಾಡುತ್ತಾರೆ ಎಂದು ಸಿಇಒ ತಿಳಿಸಿದ್ದಾರೆ.

Ramesh Babu

Journalist

Recent Posts

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

1 minute ago

ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…

7 hours ago

ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…

20 hours ago

ಲಾಡ್ಜ್‌ನಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೊಲೆ ಶಂಕಿತ ಪತಿ ಆನಂದ್ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…

21 hours ago

ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯ- ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜ್

ದೊಡ್ಡಬಳ್ಳಾಪುರ: ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…

1 day ago

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

2 days ago