ತುಮಕೂರಿನ ಕುಣಿಗಲ್ ಬೈಪಾಸ್ ನಲ್ಲಿ ಕಾರು ಹಾಗೂ ಈಚರ್ ನಡುವೆ ಭೀಕರ ಅಪಘಾತವಾಗಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗಂಡ, ಹೆಂಡತಿ, ಮಗ ಹಾಗೂ ಮಗಳು ಮೃತಪಟ್ಟಿದ್ದಾರೆ.
ಕುಣಿಗಲ್ ಬಳಿ ಹಾದುಹೋಗಿರುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಬರುವ ಕುಣಿಗಲ್ ಬೈಪಾಸ್ ನಲ್ಲಿರುವ ಉಗಿಬಂಡಿ ರೆಸ್ಟೋರೆಂಟ್ ಬಳಿ ಘಟನೆ ನಡೆದಿದೆ.
ಮೃತರೆಲ್ಲರು ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್ ನವರು ಎನ್ನಲಾಗಿದೆ.
ಯುಟರ್ನ್ ತೆಗೆದುಕೊಳ್ಳುವಾಗ ಕಾರಿಗೆ ಈಚರ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಒಂದೇ ಕುಟುಂಬ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಮೃತದೇಹಗಳು ಕುಣಿಗಲ್ ತಾಲ್ಲೂಕು ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಕುಣಿಗಲ್ ನಲ್ಲಿ ಮಕ್ಕಳ ಶಾಲೆಗೆ ಸೇರಿಸಿದ್ದ ಮಾಹಿತಿ ತಿಳಿದುಬಂದಿದೆ.
ಮಕ್ಕಳೊಂದಿಗೆ ಊಟಕ್ಕೆಂದು ರಾಷ್ಟ್ರೀಯ ಹೆದ್ದಾರಿಯ ಹೋಟೆಲ್ ಗೆ ತೆರಳುವಾಗ ಅಪಘಾತವಾಗಿರುವ ಶಂಕೆ ವ್ಯಕ್ತವಾಗಿದೆ.
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…