ತುಮಕೂರಿನ ಕುಣಿಗಲ್ ಬೈಪಾಸ್ ನಲ್ಲಿ ಕಾರು ಹಾಗೂ ಈಚರ್ ನಡುವೆ ಭೀಕರ ಅಪಘಾತವಾಗಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಗಂಡ, ಹೆಂಡತಿ, ಮಗ ಹಾಗೂ ಮಗಳು ಮೃತಪಟ್ಟಿದ್ದಾರೆ.
ಕುಣಿಗಲ್ ಬಳಿ ಹಾದುಹೋಗಿರುವ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಬರುವ ಕುಣಿಗಲ್ ಬೈಪಾಸ್ ನಲ್ಲಿರುವ ಉಗಿಬಂಡಿ ರೆಸ್ಟೋರೆಂಟ್ ಬಳಿ ಘಟನೆ ನಡೆದಿದೆ.
ಮೃತರೆಲ್ಲರು ಮಾಗಡಿ ತಾಲೂಕಿನ ಯಲಗಲವಾಡಿ ಹ್ಯಾಂಡ್ ಪೊಸ್ಟ್ ನವರು ಎನ್ನಲಾಗಿದೆ.
ಯುಟರ್ನ್ ತೆಗೆದುಕೊಳ್ಳುವಾಗ ಕಾರಿಗೆ ಈಚರ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ಒಂದೇ ಕುಟುಂಬ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸ್ಥಳಕ್ಕೆ ಕುಣಿಗಲ್ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಮೃತದೇಹಗಳು ಕುಣಿಗಲ್ ತಾಲ್ಲೂಕು ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.
ಕುಣಿಗಲ್ ನಲ್ಲಿ ಮಕ್ಕಳ ಶಾಲೆಗೆ ಸೇರಿಸಿದ್ದ ಮಾಹಿತಿ ತಿಳಿದುಬಂದಿದೆ.
ಮಕ್ಕಳೊಂದಿಗೆ ಊಟಕ್ಕೆಂದು ರಾಷ್ಟ್ರೀಯ ಹೆದ್ದಾರಿಯ ಹೋಟೆಲ್ ಗೆ ತೆರಳುವಾಗ ಅಪಘಾತವಾಗಿರುವ ಶಂಕೆ ವ್ಯಕ್ತವಾಗಿದೆ.
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…