Categories: ಕೋಲಾರ

ಕುಮಾರಸ್ವಾಮಿ ಉದ್ಘಾಟಿಸಿದ ವಕ್ಕಲೇರಿ ಡೇರಿಯಲ್ಲಿ ಸಂಭ್ರಮಾಚರಣೆ

ಕೋಲಾರ: ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಕಳೆದ ವರ್ಷ ಕೋಲಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉದ್ಘಾಟಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಭಾನುವಾರ ಸಂಜೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ವಕ್ಕಲೇರಿ ಡೇರಿಯ ಸಭಾಂಗಣದಲ್ಲಿ ಜಿಪಂ ಮಾಜಿ ಅಧ್ಯಕ್ಷೆ ಚೌಡೇಶ್ವರಿ ರಾಮು ನೇತೃತ್ವದಲ್ಲಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಚೌಡೇಶ್ವರಿ ರಾಮು ರಾಜ್ಯದಲ್ಲಿ ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಬಡವರ, ರೈತರ, ಮಹಿಳೆಯರು ಧ್ವನಿಯಾಗಿ ಕೆಲಸ ಮಾಡಿದ್ದಾರೆ ಹಾಲು ಉತ್ಪಾದಕರ ಅಭಿವೃದ್ಧಿಗಾಗಿ ಪ್ರತಿ ಲೀಟರ್ ಹಾಲಿಗೂ ಪೋತ್ಸಾಹ ಧನ ನೀಡುವಂತೆ ಮಾಡಿದ್ದಾರೆ ರೈತ ಸಾಲಮನ್ನಾ ಅಂತಹ ಜನಪರವಾದ ಯೋಜನೆಗಳನ್ನು ರೂಪಿಸಿದ್ದಾರೆ ಪ್ರಸ್ತುತ ಕೇಂದ್ರ ಸಚಿವರಾಗಿ ಬಯಲುಸೀಮೆ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಜಾರಿಗೊಳಿಸಲಿದ್ದಾರೆ ಶಾಶ್ವತ ಕುಡಿಯುವ ನೀರು ಒದಗಿಸುವ ಸಂಕಲ್ಪ ಮಾಡಲಿದ್ದು ಜೊತೆಗೆ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿರುವ ನರೇಂದ್ರ ಮೋದಿ ಹಾಗೂ ನೂತನ ಸಂಸದ ಮಲ್ಲೇಶ್ ಬಾಬು ಅವರಿಗೆ ಇದೇ ಸಂದರ್ಭದಲ್ಲಿ ಶುಭಾಶಯ ತಿಳಿಸಿದರು.

ಈ ಸಂದರ್ಭದಲ್ಲಿ ವಿಸ್ತಾರಣಾಧಿಕಾರಿ ಶ್ರೀನಿವಾಸಗೌಡ, ವಕ್ಕಲೇರಿ ಹಾಲು ಡೇರಿ ಉಪಾಧ್ಯಕ್ಷ ಅಂಜಿನಪ್ಪ ನಿರ್ದೇಶಕರಾದ ಶ್ರೀನಿವಾಸ್, ಸದಾಶಿವ, ರತ್ನಮ್ಮ ಗೋವಿಂದಮ್ಮ, ರಾಮಚಂದ್ರಪ್ಪ, ಹನುಮಂತ, ಮಂಜುನಾಥ್, ದೇವರಾಜ್, ಕಾರ್ಯದರ್ಶಿ ನಾಗರಾಜ್ ಸಹಾಯಕ ಮಾರ್ಕೊಂಡಪ್ಪ, ಮುಖಂಡ ವಕ್ಕಲೇರಿ ಮಂಜುನಾಥ್ ಸೇರಿದಂತೆ ಗ್ರಾಮಸ್ಥರು ಹಾಲು ಉತ್ಪಾದಕರ ಇದ್ದರು

Ramesh Babu

Journalist

Recent Posts

ಖಾಯಂ ನೇಮಕಾತಿ, ಸಮಾನ ಕೆಲಸಕ್ಕೆ ಸಮಾನ ವೇತನಕ್ಕಾಗಿ ಪರವಾನಗಿ ಭೂಮಾಪಕರ ಪ್ರತಿಭಟನೆ

ಖಾಯಂ ನೇಮಕಾತಿ, ಕನಿಷ್ಠ ವೇತನ, ಸಮಾನ ಕೆಲಸಕ್ಕೆ ಸಮಾನ ವೇತನ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸರ್ಕಾರಿ ಪರವಾನಗಿ…

50 minutes ago

ಪ್ರತಿಷ್ಠಿತ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

2026-27 ನೇ ಸಾಲಿನಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ 6ನೇ ತರಗತಿ(ಆಂಗ್ಲ ಮಾಧ್ಯಮ)ಗೆ ಸೇರಲು ಪರಿಶಿಷ್ಟ ಪಂಗಡದ ಪ್ರತಿಭಾವಂತ…

2 hours ago

ಕೆ-ಸೆಟ್ ಮತ್ತು ಯುಜಿಸಿ-ನೆಟ್ ಪರೀಕ್ಷೆಗಳಿಗೆ ತರಬೇತಿ

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ರಾಜ್ಯ ಮಟ್ಟದ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ…

2 hours ago

ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಹೆಚ್ಚಿದ ಕರಡಿ ಹಾವಳಿ: ಜೀವ ಭಯದಲ್ಲಿ ರೈತರು

ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಕೊಟ್ಟಿಗೆಮಾಚೇನಹಳ್ಳಿ ಗ್ರಾಮದಲ್ಲಿ ಕರಡಿ ಹಾವಳಿ ಮುಂದುವರಿದಿದೆ.. ರಾತ್ರೋರಾತ್ರಿ ರೈತರ ಹೊಲಗಳಿಗೆ ನುಗ್ಗಿ ಬಾಳೆ, ಹಲಸಿನ…

3 hours ago

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

8 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

9 hours ago