ಕೋಲಾರ: ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಕಳೆದ ವರ್ಷ ಕೋಲಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉದ್ಘಾಟಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಭಾನುವಾರ ಸಂಜೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ವಕ್ಕಲೇರಿ ಡೇರಿಯ ಸಭಾಂಗಣದಲ್ಲಿ ಜಿಪಂ ಮಾಜಿ ಅಧ್ಯಕ್ಷೆ ಚೌಡೇಶ್ವರಿ ರಾಮು ನೇತೃತ್ವದಲ್ಲಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಚೌಡೇಶ್ವರಿ ರಾಮು ರಾಜ್ಯದಲ್ಲಿ ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಬಡವರ, ರೈತರ, ಮಹಿಳೆಯರು ಧ್ವನಿಯಾಗಿ ಕೆಲಸ ಮಾಡಿದ್ದಾರೆ ಹಾಲು ಉತ್ಪಾದಕರ ಅಭಿವೃದ್ಧಿಗಾಗಿ ಪ್ರತಿ ಲೀಟರ್ ಹಾಲಿಗೂ ಪೋತ್ಸಾಹ ಧನ ನೀಡುವಂತೆ ಮಾಡಿದ್ದಾರೆ ರೈತ ಸಾಲಮನ್ನಾ ಅಂತಹ ಜನಪರವಾದ ಯೋಜನೆಗಳನ್ನು ರೂಪಿಸಿದ್ದಾರೆ ಪ್ರಸ್ತುತ ಕೇಂದ್ರ ಸಚಿವರಾಗಿ ಬಯಲುಸೀಮೆ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಜಾರಿಗೊಳಿಸಲಿದ್ದಾರೆ ಶಾಶ್ವತ ಕುಡಿಯುವ ನೀರು ಒದಗಿಸುವ ಸಂಕಲ್ಪ ಮಾಡಲಿದ್ದು ಜೊತೆಗೆ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿರುವ ನರೇಂದ್ರ ಮೋದಿ ಹಾಗೂ ನೂತನ ಸಂಸದ ಮಲ್ಲೇಶ್ ಬಾಬು ಅವರಿಗೆ ಇದೇ ಸಂದರ್ಭದಲ್ಲಿ ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ವಿಸ್ತಾರಣಾಧಿಕಾರಿ ಶ್ರೀನಿವಾಸಗೌಡ, ವಕ್ಕಲೇರಿ ಹಾಲು ಡೇರಿ ಉಪಾಧ್ಯಕ್ಷ ಅಂಜಿನಪ್ಪ ನಿರ್ದೇಶಕರಾದ ಶ್ರೀನಿವಾಸ್, ಸದಾಶಿವ, ರತ್ನಮ್ಮ ಗೋವಿಂದಮ್ಮ, ರಾಮಚಂದ್ರಪ್ಪ, ಹನುಮಂತ, ಮಂಜುನಾಥ್, ದೇವರಾಜ್, ಕಾರ್ಯದರ್ಶಿ ನಾಗರಾಜ್ ಸಹಾಯಕ ಮಾರ್ಕೊಂಡಪ್ಪ, ಮುಖಂಡ ವಕ್ಕಲೇರಿ ಮಂಜುನಾಥ್ ಸೇರಿದಂತೆ ಗ್ರಾಮಸ್ಥರು ಹಾಲು ಉತ್ಪಾದಕರ ಇದ್ದರು
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಹಾಗೂ ರೇಬೀಸ್ ಸೋಂಕಿನ ಆತಂಕಕ್ಕೆ ಕಡಿವಾಣ ಹಾಕಲು ಪಶುಪಾಲನಾ ಇಲಾಖೆ ಬೃಹತ್…
ಕೋಲಾರ: 2028ರಲ್ಲಿ ರಾಜ್ಯದಲ್ಲಿ ಎನ್ಡಿಎ ಸರ್ಕಾರ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ. ಸಾಮಾಜಿಕ ಜಾಲತಾಣ ಈಗ ಪರಿಣಾಮಕಾರಿಯಾಗಿದೆ. ಅದನ್ನು…
ಕೋಲಾರ : ಗಣೇಶ ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ರೀತಿಯ ಅನಾಹುತ, ಅಹಿತಕರ ಘಟನೆಗಳು ಸಂಭವಿಸದಂತೆ ಗ್ರಾಮೀಣ ಪ್ರದೇಶಗಳಲ್ಲಿ ಕರಪತ್ರಗಳ…
ದೊಡ್ಡಬಳ್ಳಾಪುರ: ಒಡ್ಡರಹಳ್ಳಿ ಹಾಗೂ ದೊಡ್ಡಬಳ್ಳಾಪುರ ರೈಲು ನಿಲ್ದಾಣಗಳ ನಡುವಿನ ಡಿ ಕ್ರಾಸ್ ರೈಲ್ವೆ ಬ್ರಿಡ್ಜ್ ಸಮೀಪ ಶುಕ್ರವಾರ (ಸೆ.11) ಮಧ್ಯಾಹ್ನ…