ಕೋಲಾರ: ತಾಲೂಕಿನ ವಕ್ಕಲೇರಿ ಗ್ರಾಮದಲ್ಲಿನ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡವನ್ನು ಕಳೆದ ವರ್ಷ ಕೋಲಾರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉದ್ಘಾಟಿಸಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರು ಭಾನುವಾರ ಸಂಜೆ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ವಕ್ಕಲೇರಿ ಡೇರಿಯ ಸಭಾಂಗಣದಲ್ಲಿ ಜಿಪಂ ಮಾಜಿ ಅಧ್ಯಕ್ಷೆ ಚೌಡೇಶ್ವರಿ ರಾಮು ನೇತೃತ್ವದಲ್ಲಿ ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಚೌಡೇಶ್ವರಿ ರಾಮು ರಾಜ್ಯದಲ್ಲಿ ಕುಮಾರಸ್ವಾಮಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಬಡವರ, ರೈತರ, ಮಹಿಳೆಯರು ಧ್ವನಿಯಾಗಿ ಕೆಲಸ ಮಾಡಿದ್ದಾರೆ ಹಾಲು ಉತ್ಪಾದಕರ ಅಭಿವೃದ್ಧಿಗಾಗಿ ಪ್ರತಿ ಲೀಟರ್ ಹಾಲಿಗೂ ಪೋತ್ಸಾಹ ಧನ ನೀಡುವಂತೆ ಮಾಡಿದ್ದಾರೆ ರೈತ ಸಾಲಮನ್ನಾ ಅಂತಹ ಜನಪರವಾದ ಯೋಜನೆಗಳನ್ನು ರೂಪಿಸಿದ್ದಾರೆ ಪ್ರಸ್ತುತ ಕೇಂದ್ರ ಸಚಿವರಾಗಿ ಬಯಲುಸೀಮೆ ಪ್ರದೇಶಗಳ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ಜಾರಿಗೊಳಿಸಲಿದ್ದಾರೆ ಶಾಶ್ವತ ಕುಡಿಯುವ ನೀರು ಒದಗಿಸುವ ಸಂಕಲ್ಪ ಮಾಡಲಿದ್ದು ಜೊತೆಗೆ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿರುವ ನರೇಂದ್ರ ಮೋದಿ ಹಾಗೂ ನೂತನ ಸಂಸದ ಮಲ್ಲೇಶ್ ಬಾಬು ಅವರಿಗೆ ಇದೇ ಸಂದರ್ಭದಲ್ಲಿ ಶುಭಾಶಯ ತಿಳಿಸಿದರು.
ಈ ಸಂದರ್ಭದಲ್ಲಿ ವಿಸ್ತಾರಣಾಧಿಕಾರಿ ಶ್ರೀನಿವಾಸಗೌಡ, ವಕ್ಕಲೇರಿ ಹಾಲು ಡೇರಿ ಉಪಾಧ್ಯಕ್ಷ ಅಂಜಿನಪ್ಪ ನಿರ್ದೇಶಕರಾದ ಶ್ರೀನಿವಾಸ್, ಸದಾಶಿವ, ರತ್ನಮ್ಮ ಗೋವಿಂದಮ್ಮ, ರಾಮಚಂದ್ರಪ್ಪ, ಹನುಮಂತ, ಮಂಜುನಾಥ್, ದೇವರಾಜ್, ಕಾರ್ಯದರ್ಶಿ ನಾಗರಾಜ್ ಸಹಾಯಕ ಮಾರ್ಕೊಂಡಪ್ಪ, ಮುಖಂಡ ವಕ್ಕಲೇರಿ ಮಂಜುನಾಥ್ ಸೇರಿದಂತೆ ಗ್ರಾಮಸ್ಥರು ಹಾಲು ಉತ್ಪಾದಕರ ಇದ್ದರು
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…