Categories: ಕೋಲಾರ

ಕುಮಾರಸ್ವಾಮಿ ಬೇಗ ಗುಣಮುಖರಾಗಲೆಂದು ವಿಶೇಷ ಪೂಜೆ

ಕೋಲಾರ: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರು ಹೃದಯ ಶಸ್ತ್ರ‌ಚಿಕಿತ್ಸೆಗೊಳಗಾಗಿರುವ ಹಿನ್ನೆಲೆಯಲ್ಲಿ ಗುರುವಾರ ನಗರದ ಸಾಯಿ ಬಾಬಾ ಮಂದಿರದಲ್ಲಿ ಜೆಡಿಎಸ್ ಪಕ್ಷದಿಂದ ವಿಶೇಷ ಪೂಜೆ ಸಲ್ಲಿಸಿ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ದೇವರಲ್ಲಿ ಪ್ರಾರ್ಥಿಸಿ ಶೀಘ್ರ ಚೇತರಿಕೆ ಕಂಡು ರಾಜ್ಯದ ಜನತೆಗೆ ಇನ್ನಷ್ಟು ಸೇವೆಸಲ್ಲಿಸುವಂತಾಗಲಿ ಅ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಬೇಡಿಕೊಂಡಿದ್ದೇವೆ ಎಂದರು.

ರಾಜ್ಯದಲ್ಲಿ ಎನ್.ಡಿ.ಎ ಮೈತ್ರಿಕೂಟದಿಂದ ಕೋಲಾರ, ಮಂಡ್ಯ, ಮತ್ತು ಹಾಸನ ಮೂರು ಕಡೆ ಜೆಡಿಎಸ್‌ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಮೈತ್ರಿಕೂಟದ ಪಕ್ಷಗಳಲ್ಲಿ ಎಲ್ಲರ ಅಭಿಪ್ರಾಯಗಳನ್ನು ಪಡೆದು ಒಮ್ಮತದಿಂದ ಅವರ ಸಲಹೆ ಸೂಚನೆ ನಿರೀಕ್ಷೆಗಳೊಂದಿಗೆ ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತೇವೆ ಎರಡು ಪಕ್ಷಗಳ ವರಿಷ್ಠರು ಯಾರಿಗೆ ಟಿಕೆಟ್ ನೀಡಿದರೂ ಮೈತ್ರಿಯ ನಿಯಮಾನುಸಾರವಾಗಿ ಪಾಲನೆ ಮಾಡುತ್ತೇವೆ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲದೇ ವರಿಷ್ಠರ ತೀರ್ಮಾನಕ್ಕೆ ಬದ್ದವಾಗಿ ಚುನಾವಣೆ ಎದುರಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಮಲ್ಲೇಶ್ ಬಾಬು, ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಅಧ್ಯಕ್ಷ ಬಾಬು ಮೌನಿ, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು ನಗರಸಭೆ ಸದಸ್ಯ ರಾಕೇಶ್, ಮುಖಂಡರಾದ ಜಡೇರಿ ಗೋಪಾಲಗೌಡ, ಮುದುವಾಡಿ ಮಂಜು, ಲಕ್ಷ್ಮೀಸಾಗರ ಸುನಿಲ್ ಕುಮಾರ್, ಜನಪನಹಳ್ಳಿ ಆನಂದ್, ತೋಟಗಳ ಅಶೋಕ್, ವಿಜಯಗೌಡ, ಚಂಬೆ ರಾಜೇಶ್, ಯಲುವಗುಳಿ ನಾಗರಾಜ್, ಜಯಚಂದ್ರ, ಮುಂತಾದವರು ಇದ್ದರು

Ramesh Babu

Journalist

Recent Posts

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

52 minutes ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

4 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

21 hours ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

21 hours ago

ಪಾಲನಜೋಗಿಹಳ್ಳಿ ಬಳಿ ಅಪಘಾತ: ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು

ಬೈಕ್ ಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು…

1 day ago

ಚಿಂತಕರು ಸ್ವಾಮಿ ನಾವು ಚಿಂತಕರು….

ಚಿಂತನೆ ಮತ್ತು ಚಿಂತಕರು....... " ಹೃದಯಾಂತರಾಳದಿಂದ ಬರುವ ಮಾತುಗಳು ಹೃದಯವನ್ನು ‌ತಾಕುತ್ತವೆ " ರೂಮಿ........... ಕೃತಕತೆ ಮತ್ತು ಸಹಜತೆಯ ನಡುವಿನ…

1 day ago