Categories: ಕೋಲಾರ

ಕುಮಾರಸ್ವಾಮಿ ಬೇಗ ಗುಣಮುಖರಾಗಲೆಂದು ವಿಶೇಷ ಪೂಜೆ

ಕೋಲಾರ: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರು ಹೃದಯ ಶಸ್ತ್ರ‌ಚಿಕಿತ್ಸೆಗೊಳಗಾಗಿರುವ ಹಿನ್ನೆಲೆಯಲ್ಲಿ ಗುರುವಾರ ನಗರದ ಸಾಯಿ ಬಾಬಾ ಮಂದಿರದಲ್ಲಿ ಜೆಡಿಎಸ್ ಪಕ್ಷದಿಂದ ವಿಶೇಷ ಪೂಜೆ ಸಲ್ಲಿಸಿ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ದೇವರಲ್ಲಿ ಪ್ರಾರ್ಥಿಸಿ ಶೀಘ್ರ ಚೇತರಿಕೆ ಕಂಡು ರಾಜ್ಯದ ಜನತೆಗೆ ಇನ್ನಷ್ಟು ಸೇವೆಸಲ್ಲಿಸುವಂತಾಗಲಿ ಅ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಬೇಡಿಕೊಂಡಿದ್ದೇವೆ ಎಂದರು.

ರಾಜ್ಯದಲ್ಲಿ ಎನ್.ಡಿ.ಎ ಮೈತ್ರಿಕೂಟದಿಂದ ಕೋಲಾರ, ಮಂಡ್ಯ, ಮತ್ತು ಹಾಸನ ಮೂರು ಕಡೆ ಜೆಡಿಎಸ್‌ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಮೈತ್ರಿಕೂಟದ ಪಕ್ಷಗಳಲ್ಲಿ ಎಲ್ಲರ ಅಭಿಪ್ರಾಯಗಳನ್ನು ಪಡೆದು ಒಮ್ಮತದಿಂದ ಅವರ ಸಲಹೆ ಸೂಚನೆ ನಿರೀಕ್ಷೆಗಳೊಂದಿಗೆ ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತೇವೆ ಎರಡು ಪಕ್ಷಗಳ ವರಿಷ್ಠರು ಯಾರಿಗೆ ಟಿಕೆಟ್ ನೀಡಿದರೂ ಮೈತ್ರಿಯ ನಿಯಮಾನುಸಾರವಾಗಿ ಪಾಲನೆ ಮಾಡುತ್ತೇವೆ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲದೇ ವರಿಷ್ಠರ ತೀರ್ಮಾನಕ್ಕೆ ಬದ್ದವಾಗಿ ಚುನಾವಣೆ ಎದುರಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಮಲ್ಲೇಶ್ ಬಾಬು, ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಅಧ್ಯಕ್ಷ ಬಾಬು ಮೌನಿ, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು ನಗರಸಭೆ ಸದಸ್ಯ ರಾಕೇಶ್, ಮುಖಂಡರಾದ ಜಡೇರಿ ಗೋಪಾಲಗೌಡ, ಮುದುವಾಡಿ ಮಂಜು, ಲಕ್ಷ್ಮೀಸಾಗರ ಸುನಿಲ್ ಕುಮಾರ್, ಜನಪನಹಳ್ಳಿ ಆನಂದ್, ತೋಟಗಳ ಅಶೋಕ್, ವಿಜಯಗೌಡ, ಚಂಬೆ ರಾಜೇಶ್, ಯಲುವಗುಳಿ ನಾಗರಾಜ್, ಜಯಚಂದ್ರ, ಮುಂತಾದವರು ಇದ್ದರು

Ramesh Babu

Journalist

Recent Posts

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಾಗುವುದು- ಎಸ್ಪಿ ಸಿ.ಕೆ ಬಾಬಾ

ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…

10 hours ago

ಗೊತ್ತಿರದ ವಿಷಯ ಕಲಿಯುವ ಕಡೆ ಗಮನ ಕೇಂದ್ರೀಕರಿಸಿ- ಡಾ. ಸೀಮಾ ಚೋಪ್ರಾ

"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…

11 hours ago

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

19 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

1 day ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

2 days ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

2 days ago