Categories: ಕೋಲಾರ

ಕುಮಾರಸ್ವಾಮಿ ಬೇಗ ಗುಣಮುಖರಾಗಲೆಂದು ವಿಶೇಷ ಪೂಜೆ

ಕೋಲಾರ: ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ ಕುಮಾರಸ್ವಾಮಿ ಅವರು ಹೃದಯ ಶಸ್ತ್ರ‌ಚಿಕಿತ್ಸೆಗೊಳಗಾಗಿರುವ ಹಿನ್ನೆಲೆಯಲ್ಲಿ ಗುರುವಾರ ನಗರದ ಸಾಯಿ ಬಾಬಾ ಮಂದಿರದಲ್ಲಿ ಜೆಡಿಎಸ್ ಪಕ್ಷದಿಂದ ವಿಶೇಷ ಪೂಜೆ ಸಲ್ಲಿಸಿ ಶೀಘ್ರ ಗುಣಮುಖರಾಗುವಂತೆ ಪ್ರಾರ್ಥಿಸಲಾಯಿತು.

ಈ ಸಂದರ್ಭದಲ್ಲಿ ಜೆಡಿಎಸ್‌ ಮುಖಂಡ ಸಿಎಂಆರ್ ಶ್ರೀನಾಥ್ ಮಾತನಾಡಿ, ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಹೃದಯ ಶಸ್ತ್ರಚಿಕಿತ್ಸೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ದೇವರಲ್ಲಿ ಪ್ರಾರ್ಥಿಸಿ ಶೀಘ್ರ ಚೇತರಿಕೆ ಕಂಡು ರಾಜ್ಯದ ಜನತೆಗೆ ಇನ್ನಷ್ಟು ಸೇವೆಸಲ್ಲಿಸುವಂತಾಗಲಿ ಅ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಬೇಡಿಕೊಂಡಿದ್ದೇವೆ ಎಂದರು.

ರಾಜ್ಯದಲ್ಲಿ ಎನ್.ಡಿ.ಎ ಮೈತ್ರಿಕೂಟದಿಂದ ಕೋಲಾರ, ಮಂಡ್ಯ, ಮತ್ತು ಹಾಸನ ಮೂರು ಕಡೆ ಜೆಡಿಎಸ್‌ ಪಕ್ಷದ ಅಭ್ಯರ್ಥಿಗಳು ಸ್ಪರ್ಧೆ ಮಾಡಲಿದ್ದಾರೆ ಮೈತ್ರಿಕೂಟದ ಪಕ್ಷಗಳಲ್ಲಿ ಎಲ್ಲರ ಅಭಿಪ್ರಾಯಗಳನ್ನು ಪಡೆದು ಒಮ್ಮತದಿಂದ ಅವರ ಸಲಹೆ ಸೂಚನೆ ನಿರೀಕ್ಷೆಗಳೊಂದಿಗೆ ಒಗ್ಗಟ್ಟಿನಿಂದ ಚುನಾವಣೆ ಎದುರಿಸುತ್ತೇವೆ ಎರಡು ಪಕ್ಷಗಳ ವರಿಷ್ಠರು ಯಾರಿಗೆ ಟಿಕೆಟ್ ನೀಡಿದರೂ ಮೈತ್ರಿಯ ನಿಯಮಾನುಸಾರವಾಗಿ ಪಾಲನೆ ಮಾಡುತ್ತೇವೆ ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲದೇ ವರಿಷ್ಠರ ತೀರ್ಮಾನಕ್ಕೆ ಬದ್ದವಾಗಿ ಚುನಾವಣೆ ಎದುರಿಸುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

ಈ ಸಂದರ್ಭದಲ್ಲಿ ಜೆಡಿಎಸ್‌ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಮಲ್ಲೇಶ್ ಬಾಬು, ಜಿಲ್ಲಾ ಕಾರ್ಯಾಧ್ಯಕ್ಷ ಬಣಕನಹಳ್ಳಿ ನಟರಾಜ್, ತಾಲೂಕು ಅಧ್ಯಕ್ಷ ಬಾಬು ಮೌನಿ, ಟಿಎಪಿಸಿಎಂಎಸ್ ಅಧ್ಯಕ್ಷ ವಡಗೂರು ರಾಮು ನಗರಸಭೆ ಸದಸ್ಯ ರಾಕೇಶ್, ಮುಖಂಡರಾದ ಜಡೇರಿ ಗೋಪಾಲಗೌಡ, ಮುದುವಾಡಿ ಮಂಜು, ಲಕ್ಷ್ಮೀಸಾಗರ ಸುನಿಲ್ ಕುಮಾರ್, ಜನಪನಹಳ್ಳಿ ಆನಂದ್, ತೋಟಗಳ ಅಶೋಕ್, ವಿಜಯಗೌಡ, ಚಂಬೆ ರಾಜೇಶ್, ಯಲುವಗುಳಿ ನಾಗರಾಜ್, ಜಯಚಂದ್ರ, ಮುಂತಾದವರು ಇದ್ದರು

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

18 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

23 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

2 days ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

3 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

3 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago