ಮನೆ ಬಳಿ ಕಟ್ಟಿಹಾಕಲಾಗಿರುವ ಕುರಿಗಳನ್ನು ಕಳ್ಳತನ ಮಾಡುತ್ತಿದ್ದ ಎಂದು ಆರೋಪಿಸಿ ವ್ಯಕ್ತಿಯೋರ್ವನನ್ನ ಕಂಬಕ್ಕೆ ಹಗ್ಗದಿಂದ ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ತಡರಾತ್ರಿ ಸುಮಾರು 1:30ರ ಸಮಯದಲ್ಲಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಮಟ್ಟಬಾರ್ಲು ಗ್ರಾಮದಲ್ಲಿ ನಡೆದಿದೆ.
ಇಬ್ಬರು ಕಳ್ಳರು ಬೈಕ್ ನಲ್ಲಿ ಬಂದು ಹೊಂಚುಹಾಕಿ ಕುರಿಗಳನ್ನ ಕಳ್ಳತನಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸ್ಥಳೀಯರು ನೋಡಿ ಕೂಡಲೇ ಕಳ್ಳರನ್ನ ಹಿಡಿಯಲು ಮುಂದಾಗಿದ್ದಾರೆ. ಇಬ್ಬರು ಕಳ್ಳರಲ್ಲಿ ಒಬ್ಬ ಮಾತ್ರ ಸಿಕ್ಕಿಬಿದ್ದಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಒದಗಿಬಂದಿದೆ.
ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕುರಿ, ಮೇಕೆ ಸೇರಿದಂತೆ ಜಾನುವಾರುಗಳ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ ರೈತರು ತೀವ್ರವಾಗಿ ಸಂಕಷ್ಟಕ್ಕೆ ಒಳಗಾಗಿ ಆತಂಕದಲ್ಲಿ ತಮ್ಮ ಜೀವನ ನಡೆಸುತ್ತಿದ್ದಾರೆ.
ಕುರಿ, ಮೇಕೆ, ಜಾನುವಾರುಗಳನ್ನ ಕಳ್ಳತನ ಮಾಡುವವರನ್ನ ಪತ್ತೆಹಚ್ಚಿ, ಕಳ್ಳರ ಉಪಟಳವನ್ನ ಮಟ್ಟಹಾಕಬೇಕು. ರೈತರು ನೆಮ್ಮದಿ ಬದುಕು ನಡೆಸಲು ಅನುವುಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…