ಕುರಿ ಕಳ್ಳತನ ಮಾಡುವಾಗ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದ ಕಳ್ಳ: ಕಂಬಕ್ಕೆ ಕಟ್ಟಿಹಾಕಿ ಬೆವರಿಳಿಸಿದ ಗ್ರಾಮಸ್ಥರು

ಮನೆ ಬಳಿ ಕಟ್ಟಿಹಾಕಲಾಗಿರುವ ಕುರಿಗಳನ್ನು ಕಳ್ಳತನ ಮಾಡುತ್ತಿದ್ದ ಎಂದು ಆರೋಪಿಸಿ ವ್ಯಕ್ತಿಯೋರ್ವನನ್ನ ಕಂಬಕ್ಕೆ ಹಗ್ಗದಿಂದ ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ತಡರಾತ್ರಿ ಸುಮಾರು 1:30ರ ಸಮಯದಲ್ಲಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಮಟ್ಟಬಾರ್ಲು ಗ್ರಾಮದಲ್ಲಿ ನಡೆದಿದೆ.

ಇಬ್ಬರು ಕಳ್ಳರು ಬೈಕ್ ನಲ್ಲಿ ಬಂದು ಹೊಂಚುಹಾಕಿ ಕುರಿಗಳನ್ನ ಕಳ್ಳತನಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸ್ಥಳೀಯರು ನೋಡಿ ಕೂಡಲೇ ಕಳ್ಳರನ್ನ ಹಿಡಿಯಲು ಮುಂದಾಗಿದ್ದಾರೆ. ಇಬ್ಬರು ಕಳ್ಳರಲ್ಲಿ ಒಬ್ಬ ಮಾತ್ರ ಸಿಕ್ಕಿಬಿದ್ದಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಒದಗಿಬಂದಿದೆ.

ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕುರಿ, ಮೇಕೆ ಸೇರಿದಂತೆ ಜಾನುವಾರುಗಳ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ ರೈತರು ತೀವ್ರವಾಗಿ ಸಂಕಷ್ಟಕ್ಕೆ ಒಳಗಾಗಿ ಆತಂಕದಲ್ಲಿ ತಮ್ಮ ಜೀವನ ನಡೆಸುತ್ತಿದ್ದಾರೆ.

ಕುರಿ, ಮೇಕೆ, ಜಾನುವಾರುಗಳನ್ನ ಕಳ್ಳತನ ಮಾಡುವವರನ್ನ ಪತ್ತೆಹಚ್ಚಿ, ಕಳ್ಳರ ಉಪಟಳವನ್ನ ಮಟ್ಟಹಾಕಬೇಕು. ರೈತರು ನೆಮ್ಮದಿ ಬದುಕು ನಡೆಸಲು ಅನುವುಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

1 hour ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

9 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

1 day ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago