ಕುರಿ ಕಳ್ಳತನ ಮಾಡುವಾಗ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದ ಕಳ್ಳ: ಕಂಬಕ್ಕೆ ಕಟ್ಟಿಹಾಕಿ ಬೆವರಿಳಿಸಿದ ಗ್ರಾಮಸ್ಥರು

ಮನೆ ಬಳಿ ಕಟ್ಟಿಹಾಕಲಾಗಿರುವ ಕುರಿಗಳನ್ನು ಕಳ್ಳತನ ಮಾಡುತ್ತಿದ್ದ ಎಂದು ಆರೋಪಿಸಿ ವ್ಯಕ್ತಿಯೋರ್ವನನ್ನ ಕಂಬಕ್ಕೆ ಹಗ್ಗದಿಂದ ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ತಡರಾತ್ರಿ ಸುಮಾರು 1:30ರ ಸಮಯದಲ್ಲಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಮಟ್ಟಬಾರ್ಲು ಗ್ರಾಮದಲ್ಲಿ ನಡೆದಿದೆ.

ಇಬ್ಬರು ಕಳ್ಳರು ಬೈಕ್ ನಲ್ಲಿ ಬಂದು ಹೊಂಚುಹಾಕಿ ಕುರಿಗಳನ್ನ ಕಳ್ಳತನಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸ್ಥಳೀಯರು ನೋಡಿ ಕೂಡಲೇ ಕಳ್ಳರನ್ನ ಹಿಡಿಯಲು ಮುಂದಾಗಿದ್ದಾರೆ. ಇಬ್ಬರು ಕಳ್ಳರಲ್ಲಿ ಒಬ್ಬ ಮಾತ್ರ ಸಿಕ್ಕಿಬಿದ್ದಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಒದಗಿಬಂದಿದೆ.

ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕುರಿ, ಮೇಕೆ ಸೇರಿದಂತೆ ಜಾನುವಾರುಗಳ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ ರೈತರು ತೀವ್ರವಾಗಿ ಸಂಕಷ್ಟಕ್ಕೆ ಒಳಗಾಗಿ ಆತಂಕದಲ್ಲಿ ತಮ್ಮ ಜೀವನ ನಡೆಸುತ್ತಿದ್ದಾರೆ.

ಕುರಿ, ಮೇಕೆ, ಜಾನುವಾರುಗಳನ್ನ ಕಳ್ಳತನ ಮಾಡುವವರನ್ನ ಪತ್ತೆಹಚ್ಚಿ, ಕಳ್ಳರ ಉಪಟಳವನ್ನ ಮಟ್ಟಹಾಕಬೇಕು. ರೈತರು ನೆಮ್ಮದಿ ಬದುಕು ನಡೆಸಲು ಅನುವುಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌, ಬಿಜೆಪಿ ಪರವಾಗಿರುವವರಿಂದಲೇ ಲೂಟಿ: ಮಲ್ಲಿಕಾರ್ಜುನ ಖರ್ಗೆ ಆರೋಪ

ಬೆಂಗಳೂರು ಗ್ರಾಮಾಂತರ: ಅಯೋಧ್ಯೆಯಲ್ಲಿ ಆರ್‌ಎಸ್‌ಎಸ್‌ ಹಾಗೂ ಬಿಜೆಪಿ ಪರವಾಗಿರುವವರಿಂದಲೇ ಭಾರೀ ಪ್ರಮಾಣದ ಲೂಟಿ ನಡೆದಿದೆ ಎಂದು ರಾಜ್ಯಸಭೆ ವಿರೋಧ ಪಕ್ಷದ…

7 hours ago

ಇದು ಡಿ.ಕೆ. ಶಿವಕುಮಾರ್ ಸರ್ಕಾರವಲ್ಲ, ಜನರ ಸರ್ಕಾರ, ಸಂವಿಧಾನದ ಆಶಯಗಳಿಗೆ ಬದ್ಧವಾಗಿರುವ ಸರ್ಕಾರ- ಸಿಎಂ ಡಿಕೆಶಿ

ಸಂವಿಧಾನ ಶಿಲ್ಪಿ ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ಯಾವುದೇ ಒಂದು ಸಮುದಾಯಕ್ಕಾಗಿ ಮಾತ್ರ ಹೋರಾಟ ನಡೆಸಿಲ್ಲ. ದೇಶದ ಪ್ರತಿಯೊಬ್ಬ…

7 hours ago

ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

10 hours ago

ನಾಳೆ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಅನಾವರಣ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಡಿಕೆಶಿ ಭಾಗಿ: ಸಿದ್ಧತೆ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಡಳಿತ ಭವನದ ಆವರಣದಲ್ಲಿ ನಿರ್ಮಿಸಲಾಗಿರುವ ಸಂವಿಧಾನಶಿಲ್ಪಿ, ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಭವ್ಯ ಪ್ರತಿಮೆ…

1 day ago

“ವಿಬಿ-ಜಿ ರಾಮ್ ಜಿ” ಯೋಜನೆಗೆ ಚಾಲನೆ

"ವಿಕಸಿತ ಭಾರತ – ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಕಾಯ್ದೆ, 2025" ಗ್ರಾಮೀಣ ಭಾರತದ ಸಮಗ್ರ…

1 day ago

ಕಳುವಾಗಿದ್ದ ಚಿನ್ನಾಭರಣ, ನಗದು ದೂರುದಾರರಿಗೆ ಹಸ್ತಾಂತರ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಮನೆ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಲಾಗಿದ್ದ ಬೆಲೆಬಾಳುವ ಚಿನ್ನಾಭರಣ ಹಾಗೂ ನಗದು…

2 days ago