ಕುರಿ ಕಳ್ಳತನ ಮಾಡುವಾಗ ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿಬಿದ್ದ ಕಳ್ಳ: ಕಂಬಕ್ಕೆ ಕಟ್ಟಿಹಾಕಿ ಬೆವರಿಳಿಸಿದ ಗ್ರಾಮಸ್ಥರು

ಮನೆ ಬಳಿ ಕಟ್ಟಿಹಾಕಲಾಗಿರುವ ಕುರಿಗಳನ್ನು ಕಳ್ಳತನ ಮಾಡುತ್ತಿದ್ದ ಎಂದು ಆರೋಪಿಸಿ ವ್ಯಕ್ತಿಯೋರ್ವನನ್ನ ಕಂಬಕ್ಕೆ ಹಗ್ಗದಿಂದ ಕಟ್ಟಿಹಾಕಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ತಡರಾತ್ರಿ ಸುಮಾರು 1:30ರ ಸಮಯದಲ್ಲಿ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ ಮಟ್ಟಬಾರ್ಲು ಗ್ರಾಮದಲ್ಲಿ ನಡೆದಿದೆ.

ಇಬ್ಬರು ಕಳ್ಳರು ಬೈಕ್ ನಲ್ಲಿ ಬಂದು ಹೊಂಚುಹಾಕಿ ಕುರಿಗಳನ್ನ ಕಳ್ಳತನಕ್ಕೆ ಯತ್ನಿಸಿದ್ದಾರೆ ಎನ್ನಲಾಗಿದೆ. ಈ ವೇಳೆ ಸ್ಥಳೀಯರು ನೋಡಿ ಕೂಡಲೇ ಕಳ್ಳರನ್ನ ಹಿಡಿಯಲು ಮುಂದಾಗಿದ್ದಾರೆ. ಇಬ್ಬರು ಕಳ್ಳರಲ್ಲಿ ಒಬ್ಬ ಮಾತ್ರ ಸಿಕ್ಕಿಬಿದ್ದಿದ್ದು, ಇನ್ನೊಬ್ಬ ಪರಾರಿಯಾಗಿದ್ದಾನೆ ಎಂಬ ಮಾಹಿತಿ ಒದಗಿಬಂದಿದೆ.

ಇತ್ತೀಚೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕುರಿ, ಮೇಕೆ ಸೇರಿದಂತೆ ಜಾನುವಾರುಗಳ ಕಳ್ಳತನ ಎಗ್ಗಿಲ್ಲದೆ ನಡೆಯುತ್ತಿದೆ. ಇದರಿಂದ ರೈತರು ತೀವ್ರವಾಗಿ ಸಂಕಷ್ಟಕ್ಕೆ ಒಳಗಾಗಿ ಆತಂಕದಲ್ಲಿ ತಮ್ಮ ಜೀವನ ನಡೆಸುತ್ತಿದ್ದಾರೆ.

ಕುರಿ, ಮೇಕೆ, ಜಾನುವಾರುಗಳನ್ನ ಕಳ್ಳತನ ಮಾಡುವವರನ್ನ ಪತ್ತೆಹಚ್ಚಿ, ಕಳ್ಳರ ಉಪಟಳವನ್ನ ಮಟ್ಟಹಾಕಬೇಕು. ರೈತರು ನೆಮ್ಮದಿ ಬದುಕು ನಡೆಸಲು ಅನುವುಮಾಡಿಕೊಡಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

8 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

12 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

12 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

15 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago