Categories: ರಾಜ್ಯ

‘ಕುರಿ ಕಾಯುವವನ ಮಗ ಮುಖ್ಯಮಂತ್ರಿ ಆಗಿಬಿಟ್ಟೆ ಎನ್ನುವ ಕಾರಣಕ್ಕೆ ಪಟ್ಟ ಭದ್ರರು ನನ್ನನ್ನು ವಿರೋಧಿಸುತ್ತಾರೆ’- ಸಿಎಂ ಸಿದ್ದರಾಮಯ್ಯ

ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸುವ, ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ “ಶೋಷಿತರ ಜಾಗೃತಿ ಸಮಾವೇಶವನ್ನು” ಉದ್ಘಾಟಿಸಿ ಅವರು ಮಾತನಾಡಿದರು.

ಮಂಡಲ್ ವರದಿಯನ್ನು ಬಿಜೆಪಿ – ಆರ್.ಎಸ್.ಎಸ್ ವಿರೋಧಿಸುತ್ತಲೇ ಬಂದಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಬಿಜೆಪಿ – ಆರ್.ಎಸ್.ಎಸ್ ನಿರಂತರವಾಗಿ ವಿರೋಧಿಸುತ್ತಲೇ ಇದೆ. ಆದ್ದರಿಂದ ಸಂವಿಧಾನ ಮತ್ತು ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ವಿರೋಧಿಗಳ ಕೈಗೆ ಅಧಿಕಾರ ಹೋಗಬಾರದು ಎಂದು ಅಂಬೇಡ್ಕರ್ ಎಚ್ಚರಿಸಿದ್ದರು. ಈ ಎಚ್ಚರಿಕೆಯನ್ನು ನಾವು ಮರೆಯಬಾರದು ಎಂದರು.

ಬಾಬಾ ಸಾಹೇಬ್ ಅವರ ಸಂವಿಧಾನ ಇಲ್ಲದೇ ಹೋಗಿದ್ದರೆ ಕೆ.ಎಸ್.ಈಶ್ವರಪ್ಪ ಸಿ.ಟಿ.ರವಿ ಮತ್ತು ಆರ್.ಅಶೋಕ್ ಶಾಸಕರಾಗಿ ವಿಧಾನಸಭೆ ಪ್ರವೇಶಿಸಲು ಸಾಧ್ಯವೇ ಇರಲಿಲ್ಲ. ಯಾರದ್ದೋ ಹೊಲ ಗದ್ದೆಗಳಲ್ಲಿ ಕೂಲಿ ಮಾಡುತ್ತಾ ಕೂರಬೇಕಾಗಿತ್ತು ಎಂದು ಹೇಳಿದರು.

ಕುರಿ ಕಾಯುವವನ ಮಗ ಮುಖ್ಯಮಂತ್ರಿ ಆಗಿಬಿಟ್ಟೆ ಎನ್ನುವ ಕಾರಣಕ್ಕೆ ಪಟ್ಟ ಭದ್ರರು ನನ್ನನ್ನು ವಿರೋಧಿಸುತ್ತಾರೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಮಧ್ಯಮ ವರ್ಗ ಮತ್ತು ಬಡವರಿಗೆ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದ್ದಕ್ಕೆ ನನ್ನನ್ನು ವಿರೋಧಿಸುತ್ತಿದ್ದಾರೆ ಎಂದು ತಿಳಿಸಿದರು.

ಅನ್ನಭಾಗ್ಯ, ಶೂ ಭಾಗ್ಯ, ಸಮವಸ್ತ್ರ ಭಾಗ್ಯ ಸೇರಿ ಸಾಲು ಸಾಲು ಅನುಕೂಲಗಳನ್ನು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಕಲ್ಪಿಸಿದೆ. ಇದಕ್ಕೇ ನನ್ನನ್ನು ವಿರೋಧಿಸುತ್ತಾರೆ. ಆದರೆ ನಾನು ಎದೆ ಗುಂದದೆ ನಿಮ್ಮ ಪರವಾಗಿ ಇರುತ್ತೇನೆ. ಜಾತಿ ತಾರತಮ್ಯ, ಜಾತಿ ಶೋಷಣೆ, ಜಾತಿ ಆಧಾರಿತ ಅಸಮಾನತೆ ಇರುವವರೆಗೆ ಇಂಥಾ ಸಮಾವೇಶಗಳು ಅಗತ್ಯ ಮತ್ತು ಅನಿವಾರ್ಯ ಎಂದರು.

ಸಂಘಟನೆಗಳ ಮೂಲಕ ಜಗೃತಿ ಪಡೆದುಕೊಂಡರೆ ಮಾತ್ರ ಜಾತಿ ವ್ಯವಸ್ಥೆ ನಾಶವಾಗುತ್ತದೆ ಎನ್ನುವ ಎಚ್ಚರಿಕೆಯನ್ನು ಅಂಬೇಡ್ಕರ್ ಮುಂತಾದ ಮಹನೀಯರು ನೀಡಿದ್ದಾರೆ. ಕುಲ ಕುಲ ಎಂದು ಬಡಿದಾಡದಿರಿ ಎಂದು ಕರೆ ನೀಡಿದ ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಿ ಅವಮಾನಿಸಬೇಡಿ ಎಂದಿದ್ದಾರೆ.

ಜಾತಿ ವ್ಯವಸ್ಥೆ ಕಾರಣಕ್ಕೆ ಶತ ಶತಮಾನಗಳಿಂದ ತಳ ಸಮುದಾಯಗಳ ಜನ ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಪರಿಣಾಮ ಸಮಾಜದಲ್ಲಿ ಅಸಮಾನತೆ ಸೃಷ್ಟಿ ಆಯಿತು‌. ಸಾಮಾಜಿಕ, ಆರ್ಥಿಕ ಅಸಮಾನತೆಗೆ ಜಾತಿ ವ್ಯವಸ್ಥೆಯೇ ಕಾರಣ. ಈ ಜಾತಿ ತಾರತಮ್ಯದಿಂದಲೇ ದೇಶದಲ್ಲು ಶೋಷಣೆ ಮುಂದುವರೆದಿದೆ ಎಂದರು.

ಈ ಜಾತಿ ಶೋಷಣೆಗೆ ಕೊನೆ ಹಾಡುವ ಉದ್ದೇಶದಿಂದಲೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ನೀಡಿದರು. ಸಾಹು ಮಹಾರಾಜ್, ಜ್ಯೋತಿಬಾ ಫುಲೆ, ಬುದ್ದ, ಬಸವಣ್ಣ, ನಾರಾಯಣಗುರು, ನಾಲ್ವಡಿ ಅರಸರು, ವಿವೇಕಾನಂದ, ಕನಕದಾಸರೆಲ್ಲರೂ ಈ ಜಾತಿ ವ್ಯವಸ್ಥೆ ತೊಡೆದು ಹಾಕಲು ಶ್ರಮಿಸಿದರು. ನಮ್ಮ ಸಂವಿಧಾನ ಕೂಡ ಈ ಎಲ್ಲಾ ಮಹನೀಯರ ಆಶಯಗಳನ್ನು ಒಳಗೊಂಡಿದೆ ಎಂದು ಹೇಳಿದರು.

ಈ ಕಾರಣಕ್ಕೇ ಪಟ್ಟ ಭದ್ರ ಹಿತಾಸಕ್ತಿಗಳು, ದುಷ್ಟ ಶಕ್ತಿಗಳು ಸಂವಿಧಾನ ಬದಲಾಯಿಸುವ ಮೂಲಕ ಮತ್ತೆ ಶೋಷಣೆ, ಮೌಡ್ಯದ ದರ್ಬಾರ್ ಮುಂದುವರೆಸಲು ಯತ್ನಿಸುತ್ತಿದ್ದಾರೆ. ಒಂದು ಕಡೆ ಸಂವಿಧಾನ ಬದಲಾಯಿಸಲು ಹುನ್ನಾರ ನಡೆಸುತ್ತಿದ್ದಾರೆ, ಮತ್ತೊಂದು ಕಡೆ ನಾಲ್ವಡಿ ಅರಸು ಮತ್ತು ಅಂಬೇಡ್ಕರ್, ಸಾಹು ಮಹಾರಾಜ್ ಪ್ರತಿಪಾದಿಸಿದ ಮೀಸಲಾತಿಯನ್ನೂ ವಿರೋಧಿಸುತ್ತಿದ್ದಾರೆ. ಆದ್ದರಿಂದ ಸಂವಿಧಾನ ವಿರೋಧಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ತಿಳಿಸಿದರು.

ಕಾಂತರಾಜ್ ಅವರ ವರದಿಯನ್ನು ಕೆಲವರು ಓದದೆ, ತಿಳಿಯದೆ ವಿರೋಧಿಸುತ್ತಿದ್ದಾರೆ. ನಾವು ಕಾಂತರಾಜ ವರದಿಯನ್ನು ಖಂಡಿತಾ ಸ್ವೀಕರಿಸುತ್ತೇವೆ. ನಂತರ ಅದರಲ್ಲಿ‌ ಸಮಸ್ಯೆಗಳು ಕಂಡುಬಂದರೆ ತಜ್ಞರ ಅಭಿಪ್ರಾಯ ಪಡೆದು ಮುಂದುವರೆಯುತ್ತೇವೆ ಎಂದರು.

ಕೇಂದ್ರದಲ್ಲಿ ನಮ್ಮ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ದೇಶದಲ್ಲಿ ಜಾತಿ ಗಣತಿ ಮಾಡಿಸುತ್ತೇವೆ ಎಂದು ರಾಹುಲ್ ಗಾಂಧಿ ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷ ಜಾತಿ ಗಣತಿಯ ಪರವಾಗಿದೆ. ಅಧಿಕಾರ ಇರಲಿ, ಇಲ್ಲದಿರಲಿ ನಾನು ಸದಾಕಾಲ ನಿಮ್ಮ ಪರವಾಗಿ ಇರುತ್ತೇನೆ ಎಂದು ಹೇಳಿದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

3 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

7 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

16 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

22 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

23 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago