Categories: ರಾಜ್ಯ

‘ಕುರಿ ಕಾಯುವವನ ಮಗ ಮುಖ್ಯಮಂತ್ರಿ ಆಗಿಬಿಟ್ಟೆ ಎನ್ನುವ ಕಾರಣಕ್ಕೆ ಪಟ್ಟ ಭದ್ರರು ನನ್ನನ್ನು ವಿರೋಧಿಸುತ್ತಾರೆ’- ಸಿಎಂ ಸಿದ್ದರಾಮಯ್ಯ

ಹಿಂದುಳಿದ, ದಲಿತ ಮತ್ತು ಶೋಷಿತ ಜಾತಿ ಸಮುದಾಯಗಳ ಜನ ತಮ್ಮ ಶತ್ರು ಯಾರು ಎನ್ನುವುದನ್ನು ಸ್ಪಷ್ಟವಾಗಿ ಅರ್ಥ ಮಾಡಿಕೊಳ್ಳಬೇಕು. ಶತ್ರುಗಳನ್ನು ಸ್ಪಷ್ಟವಾಗಿ ಗುರುತಿಸಬೇಕು. ಅವರನ್ನು ಸಂಪೂರ್ಣವಾಗಿ ತಿರಸ್ಕರಿಸಿ ನಿಮ್ಮ ಸ್ವಾಭಿಮಾನ ಬೆಳೆಸಿಕೊಳ್ಳಬೇಕು. ಜಾತಿ ಹೆಸರಲ್ಲಿ ಸಮಾಜವನ್ನು ಛಿದ್ರಗೊಳಿಸುವ, ಸಂವಿಧಾನ ವಿರೋಧಿ BJP-RSS ಅನ್ನು ತಿರಸ್ಕರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ “ಶೋಷಿತರ ಜಾಗೃತಿ ಸಮಾವೇಶವನ್ನು” ಉದ್ಘಾಟಿಸಿ ಅವರು ಮಾತನಾಡಿದರು.

ಮಂಡಲ್ ವರದಿಯನ್ನು ಬಿಜೆಪಿ – ಆರ್.ಎಸ್.ಎಸ್ ವಿರೋಧಿಸುತ್ತಲೇ ಬಂದಿದೆ. ಸಾಮಾಜಿಕ ನ್ಯಾಯ ಮತ್ತು ಸಮಾನ ಅವಕಾಶಗಳನ್ನು ಬಿಜೆಪಿ – ಆರ್.ಎಸ್.ಎಸ್ ನಿರಂತರವಾಗಿ ವಿರೋಧಿಸುತ್ತಲೇ ಇದೆ. ಆದ್ದರಿಂದ ಸಂವಿಧಾನ ಮತ್ತು ಮೀಸಲಾತಿ ಹಾಗೂ ಸಾಮಾಜಿಕ ನ್ಯಾಯದ ವಿರೋಧಿಗಳ ಕೈಗೆ ಅಧಿಕಾರ ಹೋಗಬಾರದು ಎಂದು ಅಂಬೇಡ್ಕರ್ ಎಚ್ಚರಿಸಿದ್ದರು. ಈ ಎಚ್ಚರಿಕೆಯನ್ನು ನಾವು ಮರೆಯಬಾರದು ಎಂದರು.

ಬಾಬಾ ಸಾಹೇಬ್ ಅವರ ಸಂವಿಧಾನ ಇಲ್ಲದೇ ಹೋಗಿದ್ದರೆ ಕೆ.ಎಸ್.ಈಶ್ವರಪ್ಪ ಸಿ.ಟಿ.ರವಿ ಮತ್ತು ಆರ್.ಅಶೋಕ್ ಶಾಸಕರಾಗಿ ವಿಧಾನಸಭೆ ಪ್ರವೇಶಿಸಲು ಸಾಧ್ಯವೇ ಇರಲಿಲ್ಲ. ಯಾರದ್ದೋ ಹೊಲ ಗದ್ದೆಗಳಲ್ಲಿ ಕೂಲಿ ಮಾಡುತ್ತಾ ಕೂರಬೇಕಾಗಿತ್ತು ಎಂದು ಹೇಳಿದರು.

ಕುರಿ ಕಾಯುವವನ ಮಗ ಮುಖ್ಯಮಂತ್ರಿ ಆಗಿಬಿಟ್ಟೆ ಎನ್ನುವ ಕಾರಣಕ್ಕೆ ಪಟ್ಟ ಭದ್ರರು ನನ್ನನ್ನು ವಿರೋಧಿಸುತ್ತಾರೆ. ಎಲ್ಲಾ ಜಾತಿ, ಎಲ್ಲಾ ಧರ್ಮದ ಮಧ್ಯಮ ವರ್ಗ ಮತ್ತು ಬಡವರಿಗೆ ಅನುಕೂಲ ಆಗುವ ಯೋಜನೆಗಳನ್ನು ಜಾರಿಗೆ ತಂದಿದ್ದಕ್ಕೆ ನನ್ನನ್ನು ವಿರೋಧಿಸುತ್ತಿದ್ದಾರೆ ಎಂದು ತಿಳಿಸಿದರು.

ಅನ್ನಭಾಗ್ಯ, ಶೂ ಭಾಗ್ಯ, ಸಮವಸ್ತ್ರ ಭಾಗ್ಯ ಸೇರಿ ಸಾಲು ಸಾಲು ಅನುಕೂಲಗಳನ್ನು ಎಲ್ಲಾ ಜಾತಿ, ಎಲ್ಲಾ ಧರ್ಮದ ಬಡವರಿಗೆ ಕಲ್ಪಿಸಿದೆ. ಇದಕ್ಕೇ ನನ್ನನ್ನು ವಿರೋಧಿಸುತ್ತಾರೆ. ಆದರೆ ನಾನು ಎದೆ ಗುಂದದೆ ನಿಮ್ಮ ಪರವಾಗಿ ಇರುತ್ತೇನೆ. ಜಾತಿ ತಾರತಮ್ಯ, ಜಾತಿ ಶೋಷಣೆ, ಜಾತಿ ಆಧಾರಿತ ಅಸಮಾನತೆ ಇರುವವರೆಗೆ ಇಂಥಾ ಸಮಾವೇಶಗಳು ಅಗತ್ಯ ಮತ್ತು ಅನಿವಾರ್ಯ ಎಂದರು.

ಸಂಘಟನೆಗಳ ಮೂಲಕ ಜಗೃತಿ ಪಡೆದುಕೊಂಡರೆ ಮಾತ್ರ ಜಾತಿ ವ್ಯವಸ್ಥೆ ನಾಶವಾಗುತ್ತದೆ ಎನ್ನುವ ಎಚ್ಚರಿಕೆಯನ್ನು ಅಂಬೇಡ್ಕರ್ ಮುಂತಾದ ಮಹನೀಯರು ನೀಡಿದ್ದಾರೆ. ಕುಲ ಕುಲ ಎಂದು ಬಡಿದಾಡದಿರಿ ಎಂದು ಕರೆ ನೀಡಿದ ಕನಕದಾಸರನ್ನು ಒಂದು ಜಾತಿಗೆ ಸೀಮಿತಗೊಳಿಸಿ ಅವಮಾನಿಸಬೇಡಿ ಎಂದಿದ್ದಾರೆ.

ಜಾತಿ ವ್ಯವಸ್ಥೆ ಕಾರಣಕ್ಕೆ ಶತ ಶತಮಾನಗಳಿಂದ ತಳ ಸಮುದಾಯಗಳ ಜನ ಶೋಷಣೆಗೆ ಒಳಗಾಗುತ್ತಲೇ ಇದ್ದಾರೆ. ಅಕ್ಷರ ಸಂಸ್ಕೃತಿಯಿಂದ ವಂಚಿತರಾದ ಪರಿಣಾಮ ಸಮಾಜದಲ್ಲಿ ಅಸಮಾನತೆ ಸೃಷ್ಟಿ ಆಯಿತು‌. ಸಾಮಾಜಿಕ, ಆರ್ಥಿಕ ಅಸಮಾನತೆಗೆ ಜಾತಿ ವ್ಯವಸ್ಥೆಯೇ ಕಾರಣ. ಈ ಜಾತಿ ತಾರತಮ್ಯದಿಂದಲೇ ದೇಶದಲ್ಲು ಶೋಷಣೆ ಮುಂದುವರೆದಿದೆ ಎಂದರು.

ಈ ಜಾತಿ ಶೋಷಣೆಗೆ ಕೊನೆ ಹಾಡುವ ಉದ್ದೇಶದಿಂದಲೇ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ ನೀಡಿದರು. ಸಾಹು ಮಹಾರಾಜ್, ಜ್ಯೋತಿಬಾ ಫುಲೆ, ಬುದ್ದ, ಬಸವಣ್ಣ, ನಾರಾಯಣಗುರು, ನಾಲ್ವಡಿ ಅರಸರು, ವಿವೇಕಾನಂದ, ಕನಕದಾಸರೆಲ್ಲರೂ ಈ ಜಾತಿ ವ್ಯವಸ್ಥೆ ತೊಡೆದು ಹಾಕಲು ಶ್ರಮಿಸಿದರು. ನಮ್ಮ ಸಂವಿಧಾನ ಕೂಡ ಈ ಎಲ್ಲಾ ಮಹನೀಯರ ಆಶಯಗಳನ್ನು ಒಳಗೊಂಡಿದೆ ಎಂದು ಹೇಳಿದರು.

ಈ ಕಾರಣಕ್ಕೇ ಪಟ್ಟ ಭದ್ರ ಹಿತಾಸಕ್ತಿಗಳು, ದುಷ್ಟ ಶಕ್ತಿಗಳು ಸಂವಿಧಾನ ಬದಲಾಯಿಸುವ ಮೂಲಕ ಮತ್ತೆ ಶೋಷಣೆ, ಮೌಡ್ಯದ ದರ್ಬಾರ್ ಮುಂದುವರೆಸಲು ಯತ್ನಿಸುತ್ತಿದ್ದಾರೆ. ಒಂದು ಕಡೆ ಸಂವಿಧಾನ ಬದಲಾಯಿಸಲು ಹುನ್ನಾರ ನಡೆಸುತ್ತಿದ್ದಾರೆ, ಮತ್ತೊಂದು ಕಡೆ ನಾಲ್ವಡಿ ಅರಸು ಮತ್ತು ಅಂಬೇಡ್ಕರ್, ಸಾಹು ಮಹಾರಾಜ್ ಪ್ರತಿಪಾದಿಸಿದ ಮೀಸಲಾತಿಯನ್ನೂ ವಿರೋಧಿಸುತ್ತಿದ್ದಾರೆ. ಆದ್ದರಿಂದ ಸಂವಿಧಾನ ವಿರೋಧಿಗಳಿಗೆ ತಕ್ಕ ಪಾಠ ಕಲಿಸಬೇಕು ಎಂದು ತಿಳಿಸಿದರು.

ಕಾಂತರಾಜ್ ಅವರ ವರದಿಯನ್ನು ಕೆಲವರು ಓದದೆ, ತಿಳಿಯದೆ ವಿರೋಧಿಸುತ್ತಿದ್ದಾರೆ. ನಾವು ಕಾಂತರಾಜ ವರದಿಯನ್ನು ಖಂಡಿತಾ ಸ್ವೀಕರಿಸುತ್ತೇವೆ. ನಂತರ ಅದರಲ್ಲಿ‌ ಸಮಸ್ಯೆಗಳು ಕಂಡುಬಂದರೆ ತಜ್ಞರ ಅಭಿಪ್ರಾಯ ಪಡೆದು ಮುಂದುವರೆಯುತ್ತೇವೆ ಎಂದರು.

ಕೇಂದ್ರದಲ್ಲಿ ನಮ್ಮ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಇಡೀ ದೇಶದಲ್ಲಿ ಜಾತಿ ಗಣತಿ ಮಾಡಿಸುತ್ತೇವೆ ಎಂದು ರಾಹುಲ್ ಗಾಂಧಿ ಘೋಷಿಸಿದ್ದಾರೆ. ಕಾಂಗ್ರೆಸ್ ಪಕ್ಷ ಜಾತಿ ಗಣತಿಯ ಪರವಾಗಿದೆ. ಅಧಿಕಾರ ಇರಲಿ, ಇಲ್ಲದಿರಲಿ ನಾನು ಸದಾಕಾಲ ನಿಮ್ಮ ಪರವಾಗಿ ಇರುತ್ತೇನೆ ಎಂದು ಹೇಳಿದರು.

Ramesh Babu

Journalist

Recent Posts

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

8 hours ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

9 hours ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

10 hours ago

ಕೋಳಿಫಾರ್ಮ್‌ಗೆ ಚಿರತೆ ದಾಳಿ ಶಂಕೆ: 950ಕ್ಕೂ ಅಧಿಕ ಕೋಳಿಮರಿಗಳು ಬಲಿ!

  ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್‌ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…

10 hours ago

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

14 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

16 hours ago