ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2023-24 ನೇ ಸಾಲಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಅಡಿಯಲ್ಲಿ ಕುರಿ/ಮೇಕೆ ಸಾಕಣೆಗೆ ಆರ್ಥಿಕ ನೆರವು ನೀಡುವ ಯೋಜನೆಯಡಿ ಫಲಾನುಭವಿಗಳ ಆಯ್ಕೆಗಾಗಿ ಉಪನಿರ್ದೇಶಕರ ಕಚೇರಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಹೆಬ್ಬಾಳ, ಬೆಂಗಳೂರು ಇವರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ 18 ರಿಂದ 60 ವರ್ಷ ವಯೋಮಿತಿಯ ಮಹಿಳಾ ಸದಸ್ಯರು (ಮಹಿಳಾ ಸದಸ್ಯರು ಲಭ್ಯವಿಲ್ಲದಿದ್ದಲ್ಲಿ ಪುರುಷ ಸದಸ್ಯರುಗಳನ್ನು) ಸಂಘಗಳು ಇಲ್ಲದೇ ಇರುವ ತಾಲ್ಲೂಕಿನಲ್ಲಿ ಅರ್ಹ ಕುರಿ ಸಾಕಾಣಿಕೆದಾರರು ನಿಗದಿತ ಅರ್ಜಿ ನಮೂನೆಯನ್ನು ಸಂಬಂಧಿಸಿದ ತಾಲ್ಲೂಕು, ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ) ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಅದೇ ಕಚೇರಿಗೆ ಆಗಸ್ಟ್ 16 ರೊಳಗೆ ಸಲ್ಲಿಸಲು ಕೋರಿದೆ.
ಹೆಚ್ಚಿನ ವಿವರಗಳನ್ನು ಆಯಾ ತಾಲ್ಲೂಕಿನ ಮುಖ್ಯ ಪಶುವೈದ್ಯಾಧಿಕಾರಿ (ಆಡಳಿತ). ಪಶುಪಾಲನಾ ಇಲಾಖೆ ಅಥವಾ ಉಪ ನಿರ್ದೇಶಕರವರ ಕಚೇರಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಹೆಬ್ಬಾಳ, ಬೆಂಗಳೂರು ಇವರಿಂದ (ದೂರವಾಣಿ ಸಂಖ್ಯೆ: 080-23413294) ಪಡೆಯಬಹುದಾಗಿದೆ ಎಂದು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇಚ್ಚಾ ಶಕ್ತಿಯ ಕೊರತೆ ಅಥವಾ ಕಪಟ ನಾಟಕ ಅಥವಾ ಸ್ವ ಹಿತಾಸಕ್ತಿ...... ಮತದಾರರ ಪಟ್ಟಿ ಪರಿಷ್ಕರಣೆ, ಲೋಕಸಭಾ ಕ್ಷೇತ್ರಗಳ ಪುನರ್…
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದೆ. ವಿಧೇಯಕ ಅಂಗೀಕಾರವಾಗಲು 326 ಸದಸ್ಯರ ಬೆಂಬಲ ಬೇಕಿತ್ತು. ಒಟ್ಟಾರೆ 489 ಸದಸ್ಯರು ಮತ…
2016ರಲ್ಲಿ ಧಾರವಾಡದಲ್ಲಿ ಜಿಲ್ಲಾ ಪಂಚಾಯಿತಿಯ ಬಿಜೆಪಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡ ಹತ್ಯೆ ಪ್ರಕರಣದಲ್ಲಿ ದೋಷಿಗಳಾದ ಮಾಜಿ ಸಚಿವ ಹಾಗೂ ಹಾಲಿ…
ಚಿನ್ನಸ್ವಾಮಿ ಕ್ರೀಡಾಂಗಣದ ಕ್ಯಾಂಟೀನ್ ನೌಕರನ ಬಳಿ 100 ಐಪಿಎಲ್ ಟಿಕೆಟ್ ಪತ್ತೆಯಾಗಿದೆ. ಕ್ಯಾಂಟೀನ್ ನೌಕರ 100ಕ್ಕೂ ಹೆಚ್ಚು ಐಪಿಎಲ್ ಟಿಕೆಟ್ಗಳನ್ನು…
ಲವ್ ಜಿಹಾದ್....... ಪ್ರೀತಿ - ಪ್ರೇಮದ ಧರ್ಮ ಯುದ್ಧ..... ಒಂದು ಆತ್ಮಾವಲೋಕನ,..... ನಿಜ ಪ್ರೀತಿಯನ್ನು ಅನುಮಾನದಿಂದ ನೋಡುವ ಅತ್ಯಂತ ಕೆಟ್ಟ,…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆ, ಜಾನುವಾರುಗಳ…