ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗಳಡಿ ‘ಕುರಿ ಸಾಕಾಣಿಕೆ’ ಉದ್ದೇಶಕ್ಕೆ ರೂ. 1 ಲಕ್ಷ (ರೂ. 50000 ಸಾಲ ಮತ್ತು ರೂ.50000 ಸಹಾಯಧನ)
ಹಾಗೂ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ‘ಫುಡ್ ಕಾರ್ಟ್’ ಉದ್ದೇಶಕ್ಕೆ ಬ್ಯಾಂಕ್ ಸಹಯೋಗದೊಂದಿಗೆ ಗರಿಷ್ಟ 4 ಲಕ್ಷದವರೆಗೂ ಸಾಲ ಸೌಲಭ್ಯ ಕಲ್ಪಿಸಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಡಿಸೆಂಬರ್ 29 ರೊಳಗೆ ಗ್ರಾಮ ಓನ್ ಕರ್ನಾಟಕ, ಓನ್ ಬೆಂಗಳೂರು ಸೇವಾ ಕೇಂದ್ರ ಹಾಗೂ https://Sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಆಸಕ್ತಿಯುಳ್ಳ ಅರ್ಹ ಪರಿಶಿಷ್ಟ ಜಾತಿಗೆ ಸೇರಿದ ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆಯದ 21 ರಿಂದ 50 ವರ್ಷ ವಯೋಮಿತಿ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು. 2023-24 ನೇ ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಶ್ಯಕತೆ ಇರುವುದಿಲ್ಲ.
ಹೆಚ್ಚಿನ ಮಾಹಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಆಯಾ ತಾಲೂಕು ಅಭಿವೃದ್ಧಿ ಅಧಿಕಾರಿಗಳನ್ನು ದೇವನಹಳ್ಳಿ ತಾಲೂಕು- 8050854019, ದೊಡ್ಡಬಳ್ಳಾಪುರ ತಾಲೂಕು- 8050854020, ಹೊಸಕೋಟೆ ತಾಲೂಕು- 8050854021, ನೆಲಮಂಗಲ ತಾಲೂಕು- 8050854022 ಹಾಗೂ ನಿಗಮದ ವೆಬ್ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
View Comments
I need ship sid