ಕುರಿ ಸಾಕಾಣಿಕೆ ಮತ್ತು ಫುಡ್ ಕಾರ್ಟ್ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಡಾ.ಬಿ.ಆ‌ರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗಳಡಿ ‘ಕುರಿ ಸಾಕಾಣಿಕೆ’ ಉದ್ದೇಶಕ್ಕೆ ರೂ. 1 ಲಕ್ಷ (ರೂ. 50000 ಸಾಲ ಮತ್ತು ರೂ.50000 ಸಹಾಯಧನ)

ಹಾಗೂ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ‘ಫುಡ್ ಕಾರ್ಟ್’ ಉದ್ದೇಶಕ್ಕೆ ಬ್ಯಾಂಕ್‌ ಸಹಯೋಗದೊಂದಿಗೆ ಗರಿಷ್ಟ 4 ಲಕ್ಷದವರೆಗೂ ಸಾಲ ಸೌಲಭ್ಯ ಕಲ್ಪಿಸಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಡಿಸೆಂಬರ್ 29 ರೊಳಗೆ ಗ್ರಾಮ ಓನ್ ಕರ್ನಾಟಕ, ಓನ್ ಬೆಂಗಳೂರು ಸೇವಾ ಕೇಂದ್ರ ಹಾಗೂ https://Sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತಿಯುಳ್ಳ ಅರ್ಹ ಪರಿಶಿಷ್ಟ ಜಾತಿಗೆ ಸೇರಿದ ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆಯದ 21 ರಿಂದ 50 ವರ್ಷ ವಯೋಮಿತಿ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು. 2023-24 ನೇ ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಶ್ಯಕತೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಆಯಾ ತಾಲೂಕು ಅಭಿವೃದ್ಧಿ ಅಧಿಕಾರಿಗಳನ್ನು ದೇವನಹಳ್ಳಿ ತಾಲೂಕು- 8050854019, ದೊಡ್ಡಬಳ್ಳಾಪುರ ತಾಲೂಕು- 8050854020, ಹೊಸಕೋಟೆ ತಾಲೂಕು- 8050854021, ನೆಲಮಂಗಲ ತಾಲೂಕು- 8050854022 ಹಾಗೂ ನಿಗಮದ ವೆಬ್ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್. ಅಂಬೇಡ್ಕ‌ರ್ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

View Comments

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

11 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

11 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

12 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

17 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

23 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

2 days ago