ಕುರಿ ಸಾಕಾಣಿಕೆ ಮತ್ತು ಫುಡ್ ಕಾರ್ಟ್ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಡಾ.ಬಿ.ಆ‌ರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ 2024-25 ನೇ ಸಾಲಿನಲ್ಲಿ ಸ್ವಯಂ ಉದ್ಯೋಗ ನೇರಸಾಲ ಯೋಜನೆಗಳಡಿ ‘ಕುರಿ ಸಾಕಾಣಿಕೆ’ ಉದ್ದೇಶಕ್ಕೆ ರೂ. 1 ಲಕ್ಷ (ರೂ. 50000 ಸಾಲ ಮತ್ತು ರೂ.50000 ಸಹಾಯಧನ)

ಹಾಗೂ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಯಡಿ ‘ಫುಡ್ ಕಾರ್ಟ್’ ಉದ್ದೇಶಕ್ಕೆ ಬ್ಯಾಂಕ್‌ ಸಹಯೋಗದೊಂದಿಗೆ ಗರಿಷ್ಟ 4 ಲಕ್ಷದವರೆಗೂ ಸಾಲ ಸೌಲಭ್ಯ ಕಲ್ಪಿಸಲು ಅರ್ಹ ಫಲಾಪೇಕ್ಷಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಯನ್ನು ಡಿಸೆಂಬರ್ 29 ರೊಳಗೆ ಗ್ರಾಮ ಓನ್ ಕರ್ನಾಟಕ, ಓನ್ ಬೆಂಗಳೂರು ಸೇವಾ ಕೇಂದ್ರ ಹಾಗೂ https://Sevasindhu.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತಿಯುಳ್ಳ ಅರ್ಹ ಪರಿಶಿಷ್ಟ ಜಾತಿಗೆ ಸೇರಿದ ಈ ಹಿಂದೆ ನಿಗಮದಿಂದ ಯಾವುದೇ ಸಾಲ ಸೌಲಭ್ಯ ಪಡೆಯದ 21 ರಿಂದ 50 ವರ್ಷ ವಯೋಮಿತಿ ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರು. 2023-24 ನೇ ಸಾಲಿನಲ್ಲಿ ಆನ್ ಲೈನ್ ಮುಖಾಂತರ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಶ್ಯಕತೆ ಇರುವುದಿಲ್ಲ.

ಹೆಚ್ಚಿನ ಮಾಹಿತಿಗೆ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ ಜಿಲ್ಲಾ ವ್ಯವಸ್ಥಾಪಕರ ಕಛೇರಿ ಅಥವಾ ಆಯಾ ತಾಲೂಕು ಅಭಿವೃದ್ಧಿ ಅಧಿಕಾರಿಗಳನ್ನು ದೇವನಹಳ್ಳಿ ತಾಲೂಕು- 8050854019, ದೊಡ್ಡಬಳ್ಳಾಪುರ ತಾಲೂಕು- 8050854020, ಹೊಸಕೋಟೆ ತಾಲೂಕು- 8050854021, ನೆಲಮಂಗಲ ತಾಲೂಕು- 8050854022 ಹಾಗೂ ನಿಗಮದ ವೆಬ್ಸೈಟ್ ಅನ್ನು ಸಂಪರ್ಕಿಸಬಹುದು ಎಂದು ಡಾ.ಬಿ.ಆರ್. ಅಂಬೇಡ್ಕ‌ರ್ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

View Comments

Recent Posts

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

23 hours ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

4 days ago