ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಆಗಮಿಸಿದ್ದ ಪ್ರಯಾಣಿಕನಿಂದ ₹ 3.44 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿದೆ.
ಆರೋಪಿಯೂ ಕುರುಡನಾಗಿದ್ದು (ಕಣ್ಣು ಇಲ್ಲದವ) ಕಳೆದ ಮಂಗಳವಾರ (ಮಾರ್ಚ್ 4) ದಂದು 3 ಕೆ.ಜಿ 995 ಗ್ರಾಂ ಚಿನ್ನದ ಆಭರಣವನ್ನು ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದಿದ್ದಾನೆ.
ಕುರುಡನಾಗಿರುವುದನ್ನೇ ಅನುಕೂಲ ಮಾಡಿಕೊಂಡಿದ್ದ ಆರೋಪಿಯೂ, ಅಧಿಕಾರಿಗಳ ಕಣ್ತಪ್ಪಿಸಿ ಚಿನ್ನವನ್ನು ಸಾಗಿಸುವ ಸಂಚು ರೂಪಿಸಿದ್ದು, ಆತನು ಧರಿಸಿದ್ದ ಅಂಗಿಯ ಒಳಗೆ ಮುಚ್ಚಿಟ್ಟು ಕೊಂಡು ಚಿನ್ನವನ್ನು ಕಳ್ಳ ಸಾಗಣೆಗೆ ಯತ್ನಿಸಿದ್ದ.
ಇತನ ವರ್ತನೆ ಮೇಲೆ ಅನುಮಾನ ಬಂದ ಅಧಿಕಾರಿಗಳು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಅಕ್ರಮ ಚಿನ್ನ ಕಳ್ಳ ಸಾಗಣೆ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿರುವ ಕಸ್ಟಮ್ಸ್ ಅಧಿಕಾರಿಗಳು, ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…