ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ದುಬೈನಿಂದ ಆಗಮಿಸಿದ್ದ ಪ್ರಯಾಣಿಕನಿಂದ ₹ 3.44 ಕೋಟಿ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಲಾಗಿದೆ.
ಆರೋಪಿಯೂ ಕುರುಡನಾಗಿದ್ದು (ಕಣ್ಣು ಇಲ್ಲದವ) ಕಳೆದ ಮಂಗಳವಾರ (ಮಾರ್ಚ್ 4) ದಂದು 3 ಕೆ.ಜಿ 995 ಗ್ರಾಂ ಚಿನ್ನದ ಆಭರಣವನ್ನು ಕಳ್ಳ ಸಾಗಣೆ ಮಾಡುವಾಗ ಸಿಕ್ಕಿ ಬಿದಿದ್ದಾನೆ.
ಕುರುಡನಾಗಿರುವುದನ್ನೇ ಅನುಕೂಲ ಮಾಡಿಕೊಂಡಿದ್ದ ಆರೋಪಿಯೂ, ಅಧಿಕಾರಿಗಳ ಕಣ್ತಪ್ಪಿಸಿ ಚಿನ್ನವನ್ನು ಸಾಗಿಸುವ ಸಂಚು ರೂಪಿಸಿದ್ದು, ಆತನು ಧರಿಸಿದ್ದ ಅಂಗಿಯ ಒಳಗೆ ಮುಚ್ಚಿಟ್ಟು ಕೊಂಡು ಚಿನ್ನವನ್ನು ಕಳ್ಳ ಸಾಗಣೆಗೆ ಯತ್ನಿಸಿದ್ದ.
ಇತನ ವರ್ತನೆ ಮೇಲೆ ಅನುಮಾನ ಬಂದ ಅಧಿಕಾರಿಗಳು ತಪಾಸಣೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಅಕ್ರಮ ಚಿನ್ನ ಕಳ್ಳ ಸಾಗಣೆ ಆರೋಪದ ಮೇಲೆ ಪ್ರಕರಣ ದಾಖಲು ಮಾಡಿರುವ ಕಸ್ಟಮ್ಸ್ ಅಧಿಕಾರಿಗಳು, ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದಾರೆ.
ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…
ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…
ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್ಸೆಟ್ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…
ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…
" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…