ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ- ಸಿಎಂ ಸಿದ್ದರಾಮಯ್ಯ

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ನನ್ನದೇ ನೇತೃತ್ವದ ಸರ್ಕಾರ. ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ‌ ಒಡನಾಟ ಆಗಲೂ ಚೆನ್ನಾಗಿತ್ತು, ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಡ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ಎಸ್.ಟಿ ಗೆ ಸೇರಿಸಿದರು ಎಂದರು.

ವಾಲ್ಮೀಕಿ, ಬೇಡ ಮತ್ತು ನಾಯಕ‌ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು. ಈಗ ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ತಿಳಿಸಿದರು.

ಕುರುಬರನ್ನು ಎಸ್‌.ಟಿ ಗೆ ಸೇರಿಸಿದರೆ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ. ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ಎಸ್.ಟಿ ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ ಎಂದು ಹೇಳಿದರು.

ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೋಷಿತ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ, ಶ್ರೇಷ್ಠವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದರು.

ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

14 hours ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

14 hours ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

15 hours ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

18 hours ago

Arizona’s New Wave of Home‑Buying Assistance: What Buyers Need to Know

The desert sun has always promised a bright future for Arizona residents, but the rising…

1 day ago

ರಾಜಕೀಯ ಮತ್ತು ಸಾಂಸ್ಕೃತಿಕ ಜನಜೀವನದಲ್ಲಿ ಅತಿಮುಖ್ಯ ಪಾತ್ರವಹಿಸಿದ ಕೆಲವೇ ಪ್ರಮುಖರಲ್ಲಿ ಲಂಕೇಶ್ ಒಬ್ಬರು

ಪಿ. ಲಂಕೇಶ್........ ಮಾರ್ಚ್ 8, 1935, ಜನವರಿ 25, 2000.... ಎರಡು ವೈರುಧ್ಯಗಳ ಚಿಂತನೆಯ ಜನರಲ್ಲಿ ಪ್ರೀತಿ - ದ್ವೇಷ…

1 day ago