ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ- ಸಿಎಂ ಸಿದ್ದರಾಮಯ್ಯ

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ನನ್ನದೇ ನೇತೃತ್ವದ ಸರ್ಕಾರ. ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ‌ ಒಡನಾಟ ಆಗಲೂ ಚೆನ್ನಾಗಿತ್ತು, ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಡ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ಎಸ್.ಟಿ ಗೆ ಸೇರಿಸಿದರು ಎಂದರು.

ವಾಲ್ಮೀಕಿ, ಬೇಡ ಮತ್ತು ನಾಯಕ‌ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು. ಈಗ ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ತಿಳಿಸಿದರು.

ಕುರುಬರನ್ನು ಎಸ್‌.ಟಿ ಗೆ ಸೇರಿಸಿದರೆ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ. ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ಎಸ್.ಟಿ ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ ಎಂದು ಹೇಳಿದರು.

ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೋಷಿತ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ, ಶ್ರೇಷ್ಠವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದರು.

ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

46 minutes ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

5 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

11 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago