ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ- ಸಿಎಂ ಸಿದ್ದರಾಮಯ್ಯ

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ನನ್ನದೇ ನೇತೃತ್ವದ ಸರ್ಕಾರ. ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ‌ ಒಡನಾಟ ಆಗಲೂ ಚೆನ್ನಾಗಿತ್ತು, ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಡ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ಎಸ್.ಟಿ ಗೆ ಸೇರಿಸಿದರು ಎಂದರು.

ವಾಲ್ಮೀಕಿ, ಬೇಡ ಮತ್ತು ನಾಯಕ‌ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು. ಈಗ ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ತಿಳಿಸಿದರು.

ಕುರುಬರನ್ನು ಎಸ್‌.ಟಿ ಗೆ ಸೇರಿಸಿದರೆ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ. ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ಎಸ್.ಟಿ ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ ಎಂದು ಹೇಳಿದರು.

ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೋಷಿತ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ, ಶ್ರೇಷ್ಠವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದರು.

ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

12 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

15 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago