ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ- ಸಿಎಂ ಸಿದ್ದರಾಮಯ್ಯ

ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಜನಸಂಖ್ಯೆ ಪ್ರಮಾಣದಷ್ಟೇ ಅಭಿವೃದ್ಧಿ ಬಜೆಟ್ ನಲ್ಲೂ ಹಣ ಮೀಸಲಿಡಲು ಕಾಯ್ದೆ ಮಾಡಿದ್ದು ನನ್ನದೇ ನೇತೃತ್ವದ ಸರ್ಕಾರ. ಎಸ್‌ಸಿ/ಎಸ್‌ಟಿ ಸಮುದಾಯಗಳಿಗೆ ಹೋಬಳಿಗೊಂದರಂತೆ ವಸತಿ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಗಳನ್ನು ಮಾಡಿದ್ದು ಇದೇ ಸಿದ್ದರಾಮಯ್ಯ. ಹೀಗಾಗಿ ಈ ಇತಿಹಾಸವನ್ನೆಲ್ಲಾ ಚೆನ್ನಾಗಿ ತಿಳಿದುಕೊಳ್ಳಿ. ಅಧಿಕಾರದಲ್ಲಿದ್ದಾಗ ಯಾರು ನಿಮ್ಮ ಪರವಾಗಿ ಇದ್ದಾರೋ ಅವರ ಪರವಾಗಿ ವಾಲ್ಮೀಕಿ ಸಮುದಾಯ ನಿಲ್ಲಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಾಲ್ಮೀಕಿ ಮತ್ತು ಕುರುಬ ಸಮುದಾಯವನ್ನು ಎಸ್.ಟಿ ಗೆ ಸೇರಿಸಲು ನಾನು ಮತ್ತು ಉಗ್ರಪ್ಪ ಅವರು ರಾಮಕೃಷ್ಣ ಹೆಗಡೆಯವರಿಗೆ ಮನವಿ ಮಾಡಿದ್ದೆವು. ಹೆಗಡೆಯವರು ನಮ್ಮ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದರೂ ಆಗ ಸೇರಿಸಲು ಆಗಲಿಲ್ಲ. ಆದರೆ, ಉಗ್ರಪ್ಪ ಅವರು ಸುಮ್ಮನೆ ಕೂರಲಿಲ್ಲ. ಉಗ್ರಪ್ಪ ಮತ್ತು ದೇವೇಗೌಡರ ನಡುವಿನ‌ ಒಡನಾಟ ಆಗಲೂ ಚೆನ್ನಾಗಿತ್ತು, ಈಗಲೂ ಚನ್ನಾಗಿದೆ. ದೇವೇಗೌಡರು ಮತ್ತು ಚಂದ್ರಶೇಖರ್ ಅವರ ಒಡನಾಡ ಚನ್ನಾಗಿತ್ತು. ಚಂದ್ರಶೇಖರ್ ಅವರು ಪ್ರಧಾನಿಯಾಗಿದ್ದಾಗ ಅವರನ್ನು ದೇವೇಗೌಡರ ಮೂಲಕ ಒಪ್ಪಿಸಿ ವಾಲ್ಮೀಕಿ ಸಮುದಾಯವನ್ನು ಎಸ್.ಟಿ ಗೆ ಸೇರಿಸಿದರು ಎಂದರು.

ವಾಲ್ಮೀಕಿ, ಬೇಡ ಮತ್ತು ನಾಯಕ‌ ಸಮುದಾಯಕ್ಕೆ ಮೀಸಲಾತಿ ದೊರಕಲು ಉಗ್ರಪ್ಪನವರೇ ಕಾರಣ ಎನ್ನುವುದನ್ನು ಮರೆಯಬಾರದು. ಈಗ ಕುರುಬರನ್ನು ಎಸ್.ಟಿ ಗೆ ಸೇರಿಸಲು ಹೋರಾಟ ಮಾಡಿದವರು ನಾವಲ್ಲ. ಬಿಜೆಪಿಯ ಈಶ್ವರಪ್ಪ ಹೋರಾಟ ಮಾಡಿದರು. ಸಿಎಂ ಆಗಿದ್ದ ಬೊಮ್ಮಾಯಿ ಅವರು ಈಶ್ವರಪ್ಪ ಅವರ ಮನವಿಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದಾರೆ. ಆ ಶಿಫಾರಸ್ಸಿನ ಬಗ್ಗೆ ಕೆಲವು ಸ್ಪಷ್ಟನೆಗಳನ್ನು ಕೇಂದ್ರ ಕೇಳಿದೆ. ಅದಷ್ಟೇ ನಮ್ಮೆದುರಿಗಿದೆ ಎಂದು ತಿಳಿಸಿದರು.

ಕುರುಬರನ್ನು ಎಸ್‌.ಟಿ ಗೆ ಸೇರಿಸಿದರೆ ಎಸ್.ಟಿ ಮೀಸಲಾತಿ ಪ್ರಮಾಣ ಹೆಚ್ಚಾಗಬೇಕು ಎನ್ನುವುದಕ್ಕೆ ನನ್ನ ಬೆಂಬಲ, ಸಹಮತವೂ ಇದೆ. ಯಾರೂ ಯಾರ ಅನ್ನದ ತಟ್ಟೆಗೆ ಕೈ ಹಾಕಬಾರದು. ಯಾರೂ ಯಾರ ಅವಕಾಶಗಳನ್ನೂ ಕಿತ್ತುಕೊಳ್ಳಬಾರದು ಎನ್ನುವುದು ನನ್ನ ಬದ್ಧತೆ. ಜೆ.ಹೆಚ್.ಪಟೇಲರು ಸಿಎಂ ಆಗಿದ್ದಾಗ ಬೆಸ್ತರು ಸೇರಿ ಹಲವು ಸಮುದಾಯಗಳನ್ನು ಎಸ್.ಟಿ ಗೆ ಸೇರಿಸಲು ಕೇಂದ್ರಕ್ಕೆ ಶಿಫಾರಸ್ಸು ಮಾಡಿದ್ದರು. ಇವತ್ತಿನವರೆಗೂ ಇದು ಸಾಧ್ಯವಾಗಿಲ್ಲ ಎಂದು ಹೇಳಿದರು.

ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಶೋಷಿತ ಸಮುದಾಯದ ವಾಲ್ಮೀಕಿ ಅವರು ವಿಶ್ವ ಮಾನವರಾಗಿ, ಶ್ರೇಷ್ಠವಾದ ರಾಮಾಯಣ ಮಹಾಕಾವ್ಯವನ್ನು ರಚಿಸಿದರು. ಹೀಗಾಗಿ ಸಮುದಾಯದ ಪ್ರತಿಯೊಬ್ಬರೂ ಶಿಕ್ಷಣವನ್ನು ಆದ್ಯತೆಯಾಗಿ ಪರಿಗಣಿಸಬೇಕು ಎಂದರು.

ವಾಲ್ಮೀಕಿ ಅವರ ಬಗ್ಗೆ ಮತ್ತು ರಾಮಾಯಣವನ್ನು ಪಠ್ಯದಲ್ಲಿ ಸೇರಿಸಬೇಕು ಎನ್ನುವ ಉಗ್ರಪ್ಪ ಅವರ ಬೇಡಿಕೆ ಬಗ್ಗೆಯೂ ಸಕಾರಾತ್ಮಕವಾಗಿ ಪರಿಗಣಿಸಲಾಗುವುದು ಎಂದು ಹೇಳಿದರು.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

10 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

12 hours ago

ದೊಡ್ಡಬಳ್ಳಾಪುರದಲ್ಲಿ ನೈತಿಕ ಪೊಲೀಸ್‌ಗಿರಿ ಆರೋಪ: ಯುವಕನ ಮೇಲೆ ಹಲ್ಲೆ, 6 ಜನರ ವಿರುದ್ಧ ಪ್ರಕರಣ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್‌ಗಿರಿ ನಡೆಸಿ…

2 days ago

ಮಳೆಗಾಗಿ ಆಚರಣೆಗಳ ಮೊರೆ: ಬರದ ನಡುವೆ ಭರವಸೆಯ ಸಂಪ್ರದಾಯಗಳು

ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…

3 days ago

ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಾರು–ಅಶೋಕ್ ಲೇಲ್ಯಾಂಡ್ ನಡುವೆ ಅಪಘಾತ

ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…

4 days ago

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

5 days ago