ಕುವೆಂಪು ಅವರು ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಸಾಮಾಜಿಕ ಸಮಾನತೆ ಸಾರಿದ್ದಾರೆ-ವಕೀಲ ಜಿ.ಟಿ.ನರೇಂದ್ರಕುಮಾರ್

ಕುವೆಂಪುರವರು ಸಾಮಾಜಿಕ ಸಮಾನತೆಯನ್ನು ತಮ್ಮ ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಹರಡಿದ್ದಾರೆ ಎಂದು ಸಮಾಜವಾದಿ ಚಿಂತಕರು ಹಾಗೂ ಹೈಕೋರ್ಟಿನ ವಕೀಲರಾದ ಜಿ.ಟಿ.ನರೇಂದ್ರಕುಮಾರ್  ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ನಡೆದ ‘ವಿಶ್ವ ಮಾನವ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಿಕ್ಷಣ ಉಳ್ಳವರು ಮತ್ತು ಇಲ್ಲದವರ ನಡುವಿನ ಅಂತರವನ್ನು ಕಡಿಮೆ ಮಾಡಬೇಕು ಎಂಬುದನ್ನು  ಕುವೆಂಪುರವರ ಸಾಹಿತ್ಯ ಮತ್ತು ವೈಚಾರಿಕತೆ ಬರಹಗಳು  ತಿಳಿಸುತ್ತವೆ. ಕುವೆಂಪುವರ ಚಿಂತನೆಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಈ ಮೂಲಕ ಪುರೋಹಿತರನ್ನು ಅವಲಂಬಿಸದೆ, ಜ್ಞಾನವಂತರಾಗಿ ಸರ್ವೋದಯದತ್ತ ಮುಖ ಮಾಡಬೇಕು ಎಂದರು.

ಜಾತಿ ಮತ್ತು ಪುರೋಹಿತಶಾಹಿ ವಂಚನೆಯನ್ನು ಅರಿಯಲು ನಿರಂಕುಶಮತಿಗಳಾಗಬೇಕೆಂದು ಕುವೆಂಪು ಹೇಳಿದರು. ಕುವೆಂಪುರವರ ಶೂದ್ರತಪಸ್ವಿ, ಜಲಗಾರ ಹಾಗೂ ಬೆರಳ್ಗೆ ಕೊರಳ್ ನಾಟಕಗಳು ಸಮಾಜದ ಮೌಢ್ಯ ಹಾಗೂ ಅವಿವೇಕವನ್ನು ಕುರಿತು ಹೇಳುವುದರ ಜೊತೆಗೆ ಸಮಾಜದಲ್ಲಿ ವಿಚಾರಶಕ್ತಿಯನ್ನು ಉದ್ಧೀಪಿಸುತ್ತವೆ ಎಂದರು. ಸ್ವಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ನಾವು ಧರ್ಮಗಳ ಆಚೆಗೂ ಬದುಕುವ ಚೈತನ್ಯವನ್ನು ಹೊಂದಬೇಕಾಗುತ್ತದೆ. ಇಂದಿನ ವರದಕ್ಷಿಣೆ ಹಾಗೂ ಆಡಂಬರದ ಮದುವೆಯ ಅನಿಷ್ಠಗಳನ್ನು ಮೀರಿ ಮಂತ್ರಮಾಂಗಲ್ಯದಂತಹ ಸರಳ ಹಾಗೂ ವೈಚಾರಿಕ ಜೀವನ ದೃಷ್ಟಿಯ ದೀಕ್ಷೆಯತ್ತ ಯುವಜನ ಆಕರ್ಷಿತರಾಗಬೇಕಾಗುತ್ತದೆ. ಕುವೆಂಪು ವಿಚಾರಧಾರೆಗಳನ್ನು ಇಂದಿನ ಯುವಕರು ಅರಿಯುವುದರಿಂದ ಸಮಾಜ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ ಎಂದರು.

ಕವಿ ಮತ್ತು ಚಿಂತಕ ಡಾ.ಪ್ರಕಾಶ್ ಮಂಟೇದ ಮಾತನಾಡಿ, ಕುವೆಂಪು ಈ ನಾಡು ಹಾಗೂ ನಮ್ಮ ಬದುಕಿನ ಅದಮ್ಯ ಚೇತನ. ವಿದ್ಯಾರ್ಥಿಗಳು ಆತ್ಮಶ್ರೀಗಳಾಗಲು ಇಂತಹ ಮಾನವತವಾದಿ ಲೇಖಕರನ್ನು ಓದುತ್ತ ತಮ್ಮ ಚೈತನ್ಯವನ್ನು ಉದ್ಧೀಪನಗೊಳಿಸಿಕೊಳ್ಳಬೇಕು. ಅಲ್ಲದೆ, ಯುವ ಸಮುದಾಯ ಕುವೆಂಪು ಓದಿನ ಮೂಲಕ ಎಲ್ಲ ಜನರನ್ನು ಪ್ರೀತಿಸುವ ಸಮಾಜವಾದಿ ಚೇತನವಾಗಿ ಹೊರಹೊಮ್ಮಬೇಕೆಂದು ಎಂದರು.

ಪ್ರಾಂಶುಪಾಲ ಡಾ.ಸದಾಶಿವ ರಾಮಚಂದ್ರಗೌಡ ಮಾತನಾಡಿ, ಕುವೆಂಪುರವರನ್ನು ಒಂದು ಜಾತಿ ಮತ್ತು ವೈಚಾರಿಕ ದೃಷ್ಟಿಕೋನಕ್ಕೆ ಕಟ್ಟಿಹಾಕದೆ ಮುಕ್ತ ಮನಸ್ಸಿನಿಂದ ಓದಿ ತಮ್ಮ ಜ್ಞಾನವನ್ನು ವಿಕಸನ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರೊ.ಉಮೇಶ್, ಪ್ರೊ. ಸತೀಶ್, ಡಾ. ಬಿ.ಆರ್ ಗಂಗಾಧರಯ್ಯ, ಕವಿ ಚಿನ್ನುಪ್ರಕಾಶ್, ಫಷೀರ್,   ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಕುವೆಂಪುರವರ ವಿಶ್ವಮಾನವತೆ ಎಂಬ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೂ ಬಹುಮಾನ ವಿತರಣೆ ನಡೆಯಿತು. ಪ್ರಬಂಧ ಸ್ಪರ್ಧೆಯಲ್ಲಿ ಆಶಾ ಪ್ರಥಮ ಸ್ಥಾನ, ತೃತೀಯ ಬಿ.ಎ ವಿದ್ಯಾರ್ಥಿನಿ ಮೀನಾ ದ್ವಿತೀಯ ಸ್ಥಾನ. ಭವ್ಯ ತೃತೀಯ ಸ್ಥಾನ ಪಡೆದರು.

Ramesh Babu

Journalist

Recent Posts

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

14 hours ago

ಶ್ರೀ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಚಿಂತನೆ: ₹184 ಕೋಟಿ ಮೊತ್ತದ ಕೇಂದ್ರ ಸರ್ಕಾರದ ಯೋಜನೆಗೆ ಶೀಘ್ರವೇ ಅನುಮೋದನೆ – ಸಂಸದ ಡಾ.ಕೆ‌ ಸುಧಾಕರ್

ಇಂದು ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ, 'ಪ್ರಸಾದ್ 2.0' (PRASHAD…

14 hours ago

ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಬೇಕು- ಪೊಲೀಸ್ ಸಬ್ ಇನ್ಸ್ಪೆಕ್ಟರ್ ವರಲಕ್ಷ್ಮಿ .ವಿ

ದೊಡ್ಡಬಳ್ಳಾಪುರ: ಮಹಿಳಾ ದಿನ ಕೇವಲ ಒಂದು ದಿನದ ಆಚರಣೆಯಲ್ಲ ಬದಲಾಗಿ ಮಹಿಳೆಯರ ಸಮಾನತೆಗಾಗಿ ನಡೆಯುತ್ತಿರುವ ನಿರಂತರ ಹೋರಾಟದ ಸಂಕೇತ ಎಂದು…

1 day ago

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ: ಉಚಿತ ಆರೋಗ್ಯ ಶಿಬರ ಮತ್ತು ರಕ್ತದಾನ ಶಿಬಿರ ಆಯೋಜನೆ

ಕೇಂದ್ರ ಮೀಸಲು ಪೊಲೀಸ್ ಪಡೆ (CRPF) 87ನೇ ಸ್ಥಾಪನಾ ದಿನಾಚರಣೆ ಹಿನ್ನೆಲೆ ಕರ್ನಾಟಕ ಮತ್ತು ಕೇರಳ ವಲಯದ CRPF ಬೆಂಗಳೂರು…

1 day ago

ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆಯಲ್ಲಿ ವ್ಯತ್ಯಯ: ದೊಡ್ಡಬಳ್ಳಾಪುರಕ್ಕೆ ಕಳೆದ ಒಂದು ವಾರದಿಂದ ಬಾರದ ವಾಣಿಜ್ಯ ಸಿಲಿಂಡರ್ ಗಳು: ನಗರದ ಹೋಟೆಲ್ ಗಳು, ಘಾಟಿ ಕ್ಷೇತ್ರಕ್ಕೂ ತಟ್ಟಿದ ಬಿಸಿ: ಸೌದೆ ಒಲೆ ಮೊರೆ ಹೋದ ಜನ

ಮದ್ಯಪ್ರಾಚ್ಯಗಳ ದೇಶಗಳಲ್ಲಿ ನಡೆಯುತ್ತಿರುವ ಯುದ್ದಗಳಿಂದಾಗಿ ಎಲ್.ಪಿ.ಜಿ ಕೊರತೆ ದೇಶಕ್ಕೆ ಎದುರಾಗಿದೆ. ಹೋಟೆಲ್ ಗಳಲ್ಲಿ ವಾಣಿಜ್ಯ ಸಿಲಿಂಡರ್ ಗಳ ಅಭಾವ ಸೃಷ್ಟಿಯಾಗಿ…

1 day ago

ಮಧ್ಯಪ್ರಾಚ್ಯದಲ್ಲಿ ಯುದ್ಧ ಹಿನ್ನೆಲೆ: ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವ: ಗೃಹ ಬಳಕೆಯ ಗ್ಯಾಸ್ ಸಿಲಿಂಡರ್ ಸಮಸ್ಯೆ ಇಲ್ಲ- ಆಹಾರ ಸಚಿವ ಕೆ.ಎಚ್. ಮುನಿಯಪ್ಪ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಅಭಾವದ ಪರಿಸ್ಥಿತಿ ಸೃಷ್ಟಿಯಾಗಿರುವ ವರದಿಗಳ ನಡುವೆ ಗೃಹ ಬಳಕೆಯ…

2 days ago