ಕುವೆಂಪು ಅವರು ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಸಾಮಾಜಿಕ ಸಮಾನತೆ ಸಾರಿದ್ದಾರೆ-ವಕೀಲ ಜಿ.ಟಿ.ನರೇಂದ್ರಕುಮಾರ್

ಕುವೆಂಪುರವರು ಸಾಮಾಜಿಕ ಸಮಾನತೆಯನ್ನು ತಮ್ಮ ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಹರಡಿದ್ದಾರೆ ಎಂದು ಸಮಾಜವಾದಿ ಚಿಂತಕರು ಹಾಗೂ ಹೈಕೋರ್ಟಿನ ವಕೀಲರಾದ ಜಿ.ಟಿ.ನರೇಂದ್ರಕುಮಾರ್  ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ನಡೆದ ‘ವಿಶ್ವ ಮಾನವ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಿಕ್ಷಣ ಉಳ್ಳವರು ಮತ್ತು ಇಲ್ಲದವರ ನಡುವಿನ ಅಂತರವನ್ನು ಕಡಿಮೆ ಮಾಡಬೇಕು ಎಂಬುದನ್ನು  ಕುವೆಂಪುರವರ ಸಾಹಿತ್ಯ ಮತ್ತು ವೈಚಾರಿಕತೆ ಬರಹಗಳು  ತಿಳಿಸುತ್ತವೆ. ಕುವೆಂಪುವರ ಚಿಂತನೆಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಈ ಮೂಲಕ ಪುರೋಹಿತರನ್ನು ಅವಲಂಬಿಸದೆ, ಜ್ಞಾನವಂತರಾಗಿ ಸರ್ವೋದಯದತ್ತ ಮುಖ ಮಾಡಬೇಕು ಎಂದರು.

ಜಾತಿ ಮತ್ತು ಪುರೋಹಿತಶಾಹಿ ವಂಚನೆಯನ್ನು ಅರಿಯಲು ನಿರಂಕುಶಮತಿಗಳಾಗಬೇಕೆಂದು ಕುವೆಂಪು ಹೇಳಿದರು. ಕುವೆಂಪುರವರ ಶೂದ್ರತಪಸ್ವಿ, ಜಲಗಾರ ಹಾಗೂ ಬೆರಳ್ಗೆ ಕೊರಳ್ ನಾಟಕಗಳು ಸಮಾಜದ ಮೌಢ್ಯ ಹಾಗೂ ಅವಿವೇಕವನ್ನು ಕುರಿತು ಹೇಳುವುದರ ಜೊತೆಗೆ ಸಮಾಜದಲ್ಲಿ ವಿಚಾರಶಕ್ತಿಯನ್ನು ಉದ್ಧೀಪಿಸುತ್ತವೆ ಎಂದರು. ಸ್ವಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ನಾವು ಧರ್ಮಗಳ ಆಚೆಗೂ ಬದುಕುವ ಚೈತನ್ಯವನ್ನು ಹೊಂದಬೇಕಾಗುತ್ತದೆ. ಇಂದಿನ ವರದಕ್ಷಿಣೆ ಹಾಗೂ ಆಡಂಬರದ ಮದುವೆಯ ಅನಿಷ್ಠಗಳನ್ನು ಮೀರಿ ಮಂತ್ರಮಾಂಗಲ್ಯದಂತಹ ಸರಳ ಹಾಗೂ ವೈಚಾರಿಕ ಜೀವನ ದೃಷ್ಟಿಯ ದೀಕ್ಷೆಯತ್ತ ಯುವಜನ ಆಕರ್ಷಿತರಾಗಬೇಕಾಗುತ್ತದೆ. ಕುವೆಂಪು ವಿಚಾರಧಾರೆಗಳನ್ನು ಇಂದಿನ ಯುವಕರು ಅರಿಯುವುದರಿಂದ ಸಮಾಜ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ ಎಂದರು.

ಕವಿ ಮತ್ತು ಚಿಂತಕ ಡಾ.ಪ್ರಕಾಶ್ ಮಂಟೇದ ಮಾತನಾಡಿ, ಕುವೆಂಪು ಈ ನಾಡು ಹಾಗೂ ನಮ್ಮ ಬದುಕಿನ ಅದಮ್ಯ ಚೇತನ. ವಿದ್ಯಾರ್ಥಿಗಳು ಆತ್ಮಶ್ರೀಗಳಾಗಲು ಇಂತಹ ಮಾನವತವಾದಿ ಲೇಖಕರನ್ನು ಓದುತ್ತ ತಮ್ಮ ಚೈತನ್ಯವನ್ನು ಉದ್ಧೀಪನಗೊಳಿಸಿಕೊಳ್ಳಬೇಕು. ಅಲ್ಲದೆ, ಯುವ ಸಮುದಾಯ ಕುವೆಂಪು ಓದಿನ ಮೂಲಕ ಎಲ್ಲ ಜನರನ್ನು ಪ್ರೀತಿಸುವ ಸಮಾಜವಾದಿ ಚೇತನವಾಗಿ ಹೊರಹೊಮ್ಮಬೇಕೆಂದು ಎಂದರು.

ಪ್ರಾಂಶುಪಾಲ ಡಾ.ಸದಾಶಿವ ರಾಮಚಂದ್ರಗೌಡ ಮಾತನಾಡಿ, ಕುವೆಂಪುರವರನ್ನು ಒಂದು ಜಾತಿ ಮತ್ತು ವೈಚಾರಿಕ ದೃಷ್ಟಿಕೋನಕ್ಕೆ ಕಟ್ಟಿಹಾಕದೆ ಮುಕ್ತ ಮನಸ್ಸಿನಿಂದ ಓದಿ ತಮ್ಮ ಜ್ಞಾನವನ್ನು ವಿಕಸನ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರೊ.ಉಮೇಶ್, ಪ್ರೊ. ಸತೀಶ್, ಡಾ. ಬಿ.ಆರ್ ಗಂಗಾಧರಯ್ಯ, ಕವಿ ಚಿನ್ನುಪ್ರಕಾಶ್, ಫಷೀರ್,   ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಕುವೆಂಪುರವರ ವಿಶ್ವಮಾನವತೆ ಎಂಬ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೂ ಬಹುಮಾನ ವಿತರಣೆ ನಡೆಯಿತು. ಪ್ರಬಂಧ ಸ್ಪರ್ಧೆಯಲ್ಲಿ ಆಶಾ ಪ್ರಥಮ ಸ್ಥಾನ, ತೃತೀಯ ಬಿ.ಎ ವಿದ್ಯಾರ್ಥಿನಿ ಮೀನಾ ದ್ವಿತೀಯ ಸ್ಥಾನ. ಭವ್ಯ ತೃತೀಯ ಸ್ಥಾನ ಪಡೆದರು.

Ramesh Babu

Journalist

Recent Posts

ಕೆ.ಸಿ.ವ್ಯಾಲಿಯಿಂದ ಜಿಲ್ಲೆಯ ರೈತರ ಬದುಕು ಹಸನು- ಕಾಂಗ್ರೆಸ್‌ ಮುಖಂಡ ಜನಪಹಳ್ಳಿ ನವೀನ್‌

ಕೋಲಾರ: ಕೆ.ಸಿ.ವ್ಯಾಲಿ ಯೋಜನೆಯಿಂದ ಅಂತರ್ಜಲ ಹೆಚ್ಚಿ ರೈತರ ಬದುಕು ಹಸನಾಗಿದ್ದು, ಜೆಡಿಎಸ್‌ ಪಕ್ಷ ಸೇರಿದಂತೆ ಕೆಲ ಮುಖಂಡರಿಂದ ದಾರಿ ತಪ್ಪಿಸುವ…

4 hours ago

ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು  ವತಿಯಿಂದ ಪದ್ಮಶ್ರೀ ಸಾಲುಮರದ ತಿಮ್ಮಕ್ಕ ಅವರಿಗೆ ನುಡಿನಮನ…

4 hours ago

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆ: ಮಕ್ಕಳು, ಶಿಕ್ಷಕ ಭಾವುಕ

ಆಲಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಸಹ ಶಿಕ್ಷಕ ಅರುಣ್ ಅವರು ವರ್ಗಾವಣೆಗೊಂಡಿದ್ದು, ಈ ಹಿನ್ನೆಲೆ ಇಂದು ಎಸ್…

7 hours ago

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಬಿಜೆಪಿ-ಜೆಡಿಎಸ್ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ.‌ ಪ್ರಹ್ಲಾದ್ ಜೋಶಿ ಕೂಡ ಒಂದೇ ಒಂದು ದಿನ…

15 hours ago

ಚುನಾವಣಾ ಫಲಿತಾಂಶದ ವಿಶ್ಲೇಷಣೆ…..

ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…

17 hours ago

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್: ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸಲು ಸಭೆ

ಡಿ.13ರಂದು ರಾಷ್ಟ್ರೀಯ ಲೋಕ ಅದಾಲತ್ ನಡೆಯಲಿದ್ದು, ರಾಷ್ಟ್ರೀಯ ಲೋಕ ಅದಾಲತ್ ಮುಖೇನ ರಾಜೀಯಾಗುವ ಪ್ರಕರಣಗಳ ವಿಲೇವಾರಿಗೊಳಿಸುವಂತೆ ಕರ್ನಾಟಕ ರಾಜ್ಯ ಕಾನೂನು…

1 day ago