ಕುವೆಂಪು ಅವರು ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಸಾಮಾಜಿಕ ಸಮಾನತೆ ಸಾರಿದ್ದಾರೆ-ವಕೀಲ ಜಿ.ಟಿ.ನರೇಂದ್ರಕುಮಾರ್

ಕುವೆಂಪುರವರು ಸಾಮಾಜಿಕ ಸಮಾನತೆಯನ್ನು ತಮ್ಮ ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಹರಡಿದ್ದಾರೆ ಎಂದು ಸಮಾಜವಾದಿ ಚಿಂತಕರು ಹಾಗೂ ಹೈಕೋರ್ಟಿನ ವಕೀಲರಾದ ಜಿ.ಟಿ.ನರೇಂದ್ರಕುಮಾರ್  ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ನಡೆದ ‘ವಿಶ್ವ ಮಾನವ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಿಕ್ಷಣ ಉಳ್ಳವರು ಮತ್ತು ಇಲ್ಲದವರ ನಡುವಿನ ಅಂತರವನ್ನು ಕಡಿಮೆ ಮಾಡಬೇಕು ಎಂಬುದನ್ನು  ಕುವೆಂಪುರವರ ಸಾಹಿತ್ಯ ಮತ್ತು ವೈಚಾರಿಕತೆ ಬರಹಗಳು  ತಿಳಿಸುತ್ತವೆ. ಕುವೆಂಪುವರ ಚಿಂತನೆಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಈ ಮೂಲಕ ಪುರೋಹಿತರನ್ನು ಅವಲಂಬಿಸದೆ, ಜ್ಞಾನವಂತರಾಗಿ ಸರ್ವೋದಯದತ್ತ ಮುಖ ಮಾಡಬೇಕು ಎಂದರು.

ಜಾತಿ ಮತ್ತು ಪುರೋಹಿತಶಾಹಿ ವಂಚನೆಯನ್ನು ಅರಿಯಲು ನಿರಂಕುಶಮತಿಗಳಾಗಬೇಕೆಂದು ಕುವೆಂಪು ಹೇಳಿದರು. ಕುವೆಂಪುರವರ ಶೂದ್ರತಪಸ್ವಿ, ಜಲಗಾರ ಹಾಗೂ ಬೆರಳ್ಗೆ ಕೊರಳ್ ನಾಟಕಗಳು ಸಮಾಜದ ಮೌಢ್ಯ ಹಾಗೂ ಅವಿವೇಕವನ್ನು ಕುರಿತು ಹೇಳುವುದರ ಜೊತೆಗೆ ಸಮಾಜದಲ್ಲಿ ವಿಚಾರಶಕ್ತಿಯನ್ನು ಉದ್ಧೀಪಿಸುತ್ತವೆ ಎಂದರು. ಸ್ವಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ನಾವು ಧರ್ಮಗಳ ಆಚೆಗೂ ಬದುಕುವ ಚೈತನ್ಯವನ್ನು ಹೊಂದಬೇಕಾಗುತ್ತದೆ. ಇಂದಿನ ವರದಕ್ಷಿಣೆ ಹಾಗೂ ಆಡಂಬರದ ಮದುವೆಯ ಅನಿಷ್ಠಗಳನ್ನು ಮೀರಿ ಮಂತ್ರಮಾಂಗಲ್ಯದಂತಹ ಸರಳ ಹಾಗೂ ವೈಚಾರಿಕ ಜೀವನ ದೃಷ್ಟಿಯ ದೀಕ್ಷೆಯತ್ತ ಯುವಜನ ಆಕರ್ಷಿತರಾಗಬೇಕಾಗುತ್ತದೆ. ಕುವೆಂಪು ವಿಚಾರಧಾರೆಗಳನ್ನು ಇಂದಿನ ಯುವಕರು ಅರಿಯುವುದರಿಂದ ಸಮಾಜ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ ಎಂದರು.

ಕವಿ ಮತ್ತು ಚಿಂತಕ ಡಾ.ಪ್ರಕಾಶ್ ಮಂಟೇದ ಮಾತನಾಡಿ, ಕುವೆಂಪು ಈ ನಾಡು ಹಾಗೂ ನಮ್ಮ ಬದುಕಿನ ಅದಮ್ಯ ಚೇತನ. ವಿದ್ಯಾರ್ಥಿಗಳು ಆತ್ಮಶ್ರೀಗಳಾಗಲು ಇಂತಹ ಮಾನವತವಾದಿ ಲೇಖಕರನ್ನು ಓದುತ್ತ ತಮ್ಮ ಚೈತನ್ಯವನ್ನು ಉದ್ಧೀಪನಗೊಳಿಸಿಕೊಳ್ಳಬೇಕು. ಅಲ್ಲದೆ, ಯುವ ಸಮುದಾಯ ಕುವೆಂಪು ಓದಿನ ಮೂಲಕ ಎಲ್ಲ ಜನರನ್ನು ಪ್ರೀತಿಸುವ ಸಮಾಜವಾದಿ ಚೇತನವಾಗಿ ಹೊರಹೊಮ್ಮಬೇಕೆಂದು ಎಂದರು.

ಪ್ರಾಂಶುಪಾಲ ಡಾ.ಸದಾಶಿವ ರಾಮಚಂದ್ರಗೌಡ ಮಾತನಾಡಿ, ಕುವೆಂಪುರವರನ್ನು ಒಂದು ಜಾತಿ ಮತ್ತು ವೈಚಾರಿಕ ದೃಷ್ಟಿಕೋನಕ್ಕೆ ಕಟ್ಟಿಹಾಕದೆ ಮುಕ್ತ ಮನಸ್ಸಿನಿಂದ ಓದಿ ತಮ್ಮ ಜ್ಞಾನವನ್ನು ವಿಕಸನ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರೊ.ಉಮೇಶ್, ಪ್ರೊ. ಸತೀಶ್, ಡಾ. ಬಿ.ಆರ್ ಗಂಗಾಧರಯ್ಯ, ಕವಿ ಚಿನ್ನುಪ್ರಕಾಶ್, ಫಷೀರ್,   ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಕುವೆಂಪುರವರ ವಿಶ್ವಮಾನವತೆ ಎಂಬ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೂ ಬಹುಮಾನ ವಿತರಣೆ ನಡೆಯಿತು. ಪ್ರಬಂಧ ಸ್ಪರ್ಧೆಯಲ್ಲಿ ಆಶಾ ಪ್ರಥಮ ಸ್ಥಾನ, ತೃತೀಯ ಬಿ.ಎ ವಿದ್ಯಾರ್ಥಿನಿ ಮೀನಾ ದ್ವಿತೀಯ ಸ್ಥಾನ. ಭವ್ಯ ತೃತೀಯ ಸ್ಥಾನ ಪಡೆದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

7 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

11 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

11 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

14 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

1 day ago