ಕುವೆಂಪು ಅವರು ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಸಾಮಾಜಿಕ ಸಮಾನತೆ ಸಾರಿದ್ದಾರೆ-ವಕೀಲ ಜಿ.ಟಿ.ನರೇಂದ್ರಕುಮಾರ್

ಕುವೆಂಪುರವರು ಸಾಮಾಜಿಕ ಸಮಾನತೆಯನ್ನು ತಮ್ಮ ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಹರಡಿದ್ದಾರೆ ಎಂದು ಸಮಾಜವಾದಿ ಚಿಂತಕರು ಹಾಗೂ ಹೈಕೋರ್ಟಿನ ವಕೀಲರಾದ ಜಿ.ಟಿ.ನರೇಂದ್ರಕುಮಾರ್  ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ನಡೆದ ‘ವಿಶ್ವ ಮಾನವ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಿಕ್ಷಣ ಉಳ್ಳವರು ಮತ್ತು ಇಲ್ಲದವರ ನಡುವಿನ ಅಂತರವನ್ನು ಕಡಿಮೆ ಮಾಡಬೇಕು ಎಂಬುದನ್ನು  ಕುವೆಂಪುರವರ ಸಾಹಿತ್ಯ ಮತ್ತು ವೈಚಾರಿಕತೆ ಬರಹಗಳು  ತಿಳಿಸುತ್ತವೆ. ಕುವೆಂಪುವರ ಚಿಂತನೆಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಈ ಮೂಲಕ ಪುರೋಹಿತರನ್ನು ಅವಲಂಬಿಸದೆ, ಜ್ಞಾನವಂತರಾಗಿ ಸರ್ವೋದಯದತ್ತ ಮುಖ ಮಾಡಬೇಕು ಎಂದರು.

ಜಾತಿ ಮತ್ತು ಪುರೋಹಿತಶಾಹಿ ವಂಚನೆಯನ್ನು ಅರಿಯಲು ನಿರಂಕುಶಮತಿಗಳಾಗಬೇಕೆಂದು ಕುವೆಂಪು ಹೇಳಿದರು. ಕುವೆಂಪುರವರ ಶೂದ್ರತಪಸ್ವಿ, ಜಲಗಾರ ಹಾಗೂ ಬೆರಳ್ಗೆ ಕೊರಳ್ ನಾಟಕಗಳು ಸಮಾಜದ ಮೌಢ್ಯ ಹಾಗೂ ಅವಿವೇಕವನ್ನು ಕುರಿತು ಹೇಳುವುದರ ಜೊತೆಗೆ ಸಮಾಜದಲ್ಲಿ ವಿಚಾರಶಕ್ತಿಯನ್ನು ಉದ್ಧೀಪಿಸುತ್ತವೆ ಎಂದರು. ಸ್ವಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ನಾವು ಧರ್ಮಗಳ ಆಚೆಗೂ ಬದುಕುವ ಚೈತನ್ಯವನ್ನು ಹೊಂದಬೇಕಾಗುತ್ತದೆ. ಇಂದಿನ ವರದಕ್ಷಿಣೆ ಹಾಗೂ ಆಡಂಬರದ ಮದುವೆಯ ಅನಿಷ್ಠಗಳನ್ನು ಮೀರಿ ಮಂತ್ರಮಾಂಗಲ್ಯದಂತಹ ಸರಳ ಹಾಗೂ ವೈಚಾರಿಕ ಜೀವನ ದೃಷ್ಟಿಯ ದೀಕ್ಷೆಯತ್ತ ಯುವಜನ ಆಕರ್ಷಿತರಾಗಬೇಕಾಗುತ್ತದೆ. ಕುವೆಂಪು ವಿಚಾರಧಾರೆಗಳನ್ನು ಇಂದಿನ ಯುವಕರು ಅರಿಯುವುದರಿಂದ ಸಮಾಜ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ ಎಂದರು.

ಕವಿ ಮತ್ತು ಚಿಂತಕ ಡಾ.ಪ್ರಕಾಶ್ ಮಂಟೇದ ಮಾತನಾಡಿ, ಕುವೆಂಪು ಈ ನಾಡು ಹಾಗೂ ನಮ್ಮ ಬದುಕಿನ ಅದಮ್ಯ ಚೇತನ. ವಿದ್ಯಾರ್ಥಿಗಳು ಆತ್ಮಶ್ರೀಗಳಾಗಲು ಇಂತಹ ಮಾನವತವಾದಿ ಲೇಖಕರನ್ನು ಓದುತ್ತ ತಮ್ಮ ಚೈತನ್ಯವನ್ನು ಉದ್ಧೀಪನಗೊಳಿಸಿಕೊಳ್ಳಬೇಕು. ಅಲ್ಲದೆ, ಯುವ ಸಮುದಾಯ ಕುವೆಂಪು ಓದಿನ ಮೂಲಕ ಎಲ್ಲ ಜನರನ್ನು ಪ್ರೀತಿಸುವ ಸಮಾಜವಾದಿ ಚೇತನವಾಗಿ ಹೊರಹೊಮ್ಮಬೇಕೆಂದು ಎಂದರು.

ಪ್ರಾಂಶುಪಾಲ ಡಾ.ಸದಾಶಿವ ರಾಮಚಂದ್ರಗೌಡ ಮಾತನಾಡಿ, ಕುವೆಂಪುರವರನ್ನು ಒಂದು ಜಾತಿ ಮತ್ತು ವೈಚಾರಿಕ ದೃಷ್ಟಿಕೋನಕ್ಕೆ ಕಟ್ಟಿಹಾಕದೆ ಮುಕ್ತ ಮನಸ್ಸಿನಿಂದ ಓದಿ ತಮ್ಮ ಜ್ಞಾನವನ್ನು ವಿಕಸನ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರೊ.ಉಮೇಶ್, ಪ್ರೊ. ಸತೀಶ್, ಡಾ. ಬಿ.ಆರ್ ಗಂಗಾಧರಯ್ಯ, ಕವಿ ಚಿನ್ನುಪ್ರಕಾಶ್, ಫಷೀರ್,   ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಕುವೆಂಪುರವರ ವಿಶ್ವಮಾನವತೆ ಎಂಬ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೂ ಬಹುಮಾನ ವಿತರಣೆ ನಡೆಯಿತು. ಪ್ರಬಂಧ ಸ್ಪರ್ಧೆಯಲ್ಲಿ ಆಶಾ ಪ್ರಥಮ ಸ್ಥಾನ, ತೃತೀಯ ಬಿ.ಎ ವಿದ್ಯಾರ್ಥಿನಿ ಮೀನಾ ದ್ವಿತೀಯ ಸ್ಥಾನ. ಭವ್ಯ ತೃತೀಯ ಸ್ಥಾನ ಪಡೆದರು.

Ramesh Babu

Journalist

Recent Posts

ಸೆ.7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ

ದೊಡ್ಡಬಳ್ಳಾಪುರ: ನಗರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರಂದು ದೊಡ್ಡಬಳ್ಳಾಪುರದ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. 66/11…

47 minutes ago

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

12 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

13 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

14 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

17 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

1 day ago