ಕುವೆಂಪು ಅವರು ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಸಾಮಾಜಿಕ ಸಮಾನತೆ ಸಾರಿದ್ದಾರೆ-ವಕೀಲ ಜಿ.ಟಿ.ನರೇಂದ್ರಕುಮಾರ್

ಕುವೆಂಪುರವರು ಸಾಮಾಜಿಕ ಸಮಾನತೆಯನ್ನು ತಮ್ಮ ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಹರಡಿದ್ದಾರೆ ಎಂದು ಸಮಾಜವಾದಿ ಚಿಂತಕರು ಹಾಗೂ ಹೈಕೋರ್ಟಿನ ವಕೀಲರಾದ ಜಿ.ಟಿ.ನರೇಂದ್ರಕುಮಾರ್  ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ನಡೆದ ‘ವಿಶ್ವ ಮಾನವ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಿಕ್ಷಣ ಉಳ್ಳವರು ಮತ್ತು ಇಲ್ಲದವರ ನಡುವಿನ ಅಂತರವನ್ನು ಕಡಿಮೆ ಮಾಡಬೇಕು ಎಂಬುದನ್ನು  ಕುವೆಂಪುರವರ ಸಾಹಿತ್ಯ ಮತ್ತು ವೈಚಾರಿಕತೆ ಬರಹಗಳು  ತಿಳಿಸುತ್ತವೆ. ಕುವೆಂಪುವರ ಚಿಂತನೆಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಈ ಮೂಲಕ ಪುರೋಹಿತರನ್ನು ಅವಲಂಬಿಸದೆ, ಜ್ಞಾನವಂತರಾಗಿ ಸರ್ವೋದಯದತ್ತ ಮುಖ ಮಾಡಬೇಕು ಎಂದರು.

ಜಾತಿ ಮತ್ತು ಪುರೋಹಿತಶಾಹಿ ವಂಚನೆಯನ್ನು ಅರಿಯಲು ನಿರಂಕುಶಮತಿಗಳಾಗಬೇಕೆಂದು ಕುವೆಂಪು ಹೇಳಿದರು. ಕುವೆಂಪುರವರ ಶೂದ್ರತಪಸ್ವಿ, ಜಲಗಾರ ಹಾಗೂ ಬೆರಳ್ಗೆ ಕೊರಳ್ ನಾಟಕಗಳು ಸಮಾಜದ ಮೌಢ್ಯ ಹಾಗೂ ಅವಿವೇಕವನ್ನು ಕುರಿತು ಹೇಳುವುದರ ಜೊತೆಗೆ ಸಮಾಜದಲ್ಲಿ ವಿಚಾರಶಕ್ತಿಯನ್ನು ಉದ್ಧೀಪಿಸುತ್ತವೆ ಎಂದರು. ಸ್ವಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ನಾವು ಧರ್ಮಗಳ ಆಚೆಗೂ ಬದುಕುವ ಚೈತನ್ಯವನ್ನು ಹೊಂದಬೇಕಾಗುತ್ತದೆ. ಇಂದಿನ ವರದಕ್ಷಿಣೆ ಹಾಗೂ ಆಡಂಬರದ ಮದುವೆಯ ಅನಿಷ್ಠಗಳನ್ನು ಮೀರಿ ಮಂತ್ರಮಾಂಗಲ್ಯದಂತಹ ಸರಳ ಹಾಗೂ ವೈಚಾರಿಕ ಜೀವನ ದೃಷ್ಟಿಯ ದೀಕ್ಷೆಯತ್ತ ಯುವಜನ ಆಕರ್ಷಿತರಾಗಬೇಕಾಗುತ್ತದೆ. ಕುವೆಂಪು ವಿಚಾರಧಾರೆಗಳನ್ನು ಇಂದಿನ ಯುವಕರು ಅರಿಯುವುದರಿಂದ ಸಮಾಜ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ ಎಂದರು.

ಕವಿ ಮತ್ತು ಚಿಂತಕ ಡಾ.ಪ್ರಕಾಶ್ ಮಂಟೇದ ಮಾತನಾಡಿ, ಕುವೆಂಪು ಈ ನಾಡು ಹಾಗೂ ನಮ್ಮ ಬದುಕಿನ ಅದಮ್ಯ ಚೇತನ. ವಿದ್ಯಾರ್ಥಿಗಳು ಆತ್ಮಶ್ರೀಗಳಾಗಲು ಇಂತಹ ಮಾನವತವಾದಿ ಲೇಖಕರನ್ನು ಓದುತ್ತ ತಮ್ಮ ಚೈತನ್ಯವನ್ನು ಉದ್ಧೀಪನಗೊಳಿಸಿಕೊಳ್ಳಬೇಕು. ಅಲ್ಲದೆ, ಯುವ ಸಮುದಾಯ ಕುವೆಂಪು ಓದಿನ ಮೂಲಕ ಎಲ್ಲ ಜನರನ್ನು ಪ್ರೀತಿಸುವ ಸಮಾಜವಾದಿ ಚೇತನವಾಗಿ ಹೊರಹೊಮ್ಮಬೇಕೆಂದು ಎಂದರು.

ಪ್ರಾಂಶುಪಾಲ ಡಾ.ಸದಾಶಿವ ರಾಮಚಂದ್ರಗೌಡ ಮಾತನಾಡಿ, ಕುವೆಂಪುರವರನ್ನು ಒಂದು ಜಾತಿ ಮತ್ತು ವೈಚಾರಿಕ ದೃಷ್ಟಿಕೋನಕ್ಕೆ ಕಟ್ಟಿಹಾಕದೆ ಮುಕ್ತ ಮನಸ್ಸಿನಿಂದ ಓದಿ ತಮ್ಮ ಜ್ಞಾನವನ್ನು ವಿಕಸನ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರೊ.ಉಮೇಶ್, ಪ್ರೊ. ಸತೀಶ್, ಡಾ. ಬಿ.ಆರ್ ಗಂಗಾಧರಯ್ಯ, ಕವಿ ಚಿನ್ನುಪ್ರಕಾಶ್, ಫಷೀರ್,   ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಕುವೆಂಪುರವರ ವಿಶ್ವಮಾನವತೆ ಎಂಬ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೂ ಬಹುಮಾನ ವಿತರಣೆ ನಡೆಯಿತು. ಪ್ರಬಂಧ ಸ್ಪರ್ಧೆಯಲ್ಲಿ ಆಶಾ ಪ್ರಥಮ ಸ್ಥಾನ, ತೃತೀಯ ಬಿ.ಎ ವಿದ್ಯಾರ್ಥಿನಿ ಮೀನಾ ದ್ವಿತೀಯ ಸ್ಥಾನ. ಭವ್ಯ ತೃತೀಯ ಸ್ಥಾನ ಪಡೆದರು.

Ramesh Babu

Journalist

Recent Posts

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

6 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

6 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

21 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago

ದೇವಾಲಯಗಳ ಹುಂಡಿ ಭದ್ರತೆಗೆ ಸಿಸಿಟಿವಿ ಕಣ್ಗಾವಲು- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಒಳಪಡುವ ಪ್ರವರ್ಗ ಎ ಮತ್ತು ಬಿ ದೇವಾಲಯಗಳ ಹುಂಡಿ ಭದ್ರತೆ ಸೇರಿದಂತೆ ಎಣಿಕೆ ಕಾರ್ಯ,…

2 days ago