ಕುವೆಂಪು ಅವರು ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಸಾಮಾಜಿಕ ಸಮಾನತೆ ಸಾರಿದ್ದಾರೆ-ವಕೀಲ ಜಿ.ಟಿ.ನರೇಂದ್ರಕುಮಾರ್

ಕುವೆಂಪುರವರು ಸಾಮಾಜಿಕ ಸಮಾನತೆಯನ್ನು ತಮ್ಮ ಸಾಹಿತ್ಯ, ವೈಚಾರಿಕತೆ ಹಾಗೂ ಚಿಂತನೆಗಳ ಮೂಲಕ ಹರಡಿದ್ದಾರೆ ಎಂದು ಸಮಾಜವಾದಿ ಚಿಂತಕರು ಹಾಗೂ ಹೈಕೋರ್ಟಿನ ವಕೀಲರಾದ ಜಿ.ಟಿ.ನರೇಂದ್ರಕುಮಾರ್  ತಿಳಿಸಿದರು.

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ನಡೆದ ‘ವಿಶ್ವ ಮಾನವ ದಿನಾಚರಣೆ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ಶಿಕ್ಷಣ ಉಳ್ಳವರು ಮತ್ತು ಇಲ್ಲದವರ ನಡುವಿನ ಅಂತರವನ್ನು ಕಡಿಮೆ ಮಾಡಬೇಕು ಎಂಬುದನ್ನು  ಕುವೆಂಪುರವರ ಸಾಹಿತ್ಯ ಮತ್ತು ವೈಚಾರಿಕತೆ ಬರಹಗಳು  ತಿಳಿಸುತ್ತವೆ. ಕುವೆಂಪುವರ ಚಿಂತನೆಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು. ಈ ಮೂಲಕ ಪುರೋಹಿತರನ್ನು ಅವಲಂಬಿಸದೆ, ಜ್ಞಾನವಂತರಾಗಿ ಸರ್ವೋದಯದತ್ತ ಮುಖ ಮಾಡಬೇಕು ಎಂದರು.

ಜಾತಿ ಮತ್ತು ಪುರೋಹಿತಶಾಹಿ ವಂಚನೆಯನ್ನು ಅರಿಯಲು ನಿರಂಕುಶಮತಿಗಳಾಗಬೇಕೆಂದು ಕುವೆಂಪು ಹೇಳಿದರು. ಕುವೆಂಪುರವರ ಶೂದ್ರತಪಸ್ವಿ, ಜಲಗಾರ ಹಾಗೂ ಬೆರಳ್ಗೆ ಕೊರಳ್ ನಾಟಕಗಳು ಸಮಾಜದ ಮೌಢ್ಯ ಹಾಗೂ ಅವಿವೇಕವನ್ನು ಕುರಿತು ಹೇಳುವುದರ ಜೊತೆಗೆ ಸಮಾಜದಲ್ಲಿ ವಿಚಾರಶಕ್ತಿಯನ್ನು ಉದ್ಧೀಪಿಸುತ್ತವೆ ಎಂದರು. ಸ್ವಸ್ಥ್ಯ ಸಮಾಜ ನಿರ್ಮಾಣಕ್ಕಾಗಿ ನಾವು ಧರ್ಮಗಳ ಆಚೆಗೂ ಬದುಕುವ ಚೈತನ್ಯವನ್ನು ಹೊಂದಬೇಕಾಗುತ್ತದೆ. ಇಂದಿನ ವರದಕ್ಷಿಣೆ ಹಾಗೂ ಆಡಂಬರದ ಮದುವೆಯ ಅನಿಷ್ಠಗಳನ್ನು ಮೀರಿ ಮಂತ್ರಮಾಂಗಲ್ಯದಂತಹ ಸರಳ ಹಾಗೂ ವೈಚಾರಿಕ ಜೀವನ ದೃಷ್ಟಿಯ ದೀಕ್ಷೆಯತ್ತ ಯುವಜನ ಆಕರ್ಷಿತರಾಗಬೇಕಾಗುತ್ತದೆ. ಕುವೆಂಪು ವಿಚಾರಧಾರೆಗಳನ್ನು ಇಂದಿನ ಯುವಕರು ಅರಿಯುವುದರಿಂದ ಸಮಾಜ ಆರೋಗ್ಯವಾಗಿರಲು ಸಾಧ್ಯವಾಗುತ್ತದೆ ಎಂದರು.

ಕವಿ ಮತ್ತು ಚಿಂತಕ ಡಾ.ಪ್ರಕಾಶ್ ಮಂಟೇದ ಮಾತನಾಡಿ, ಕುವೆಂಪು ಈ ನಾಡು ಹಾಗೂ ನಮ್ಮ ಬದುಕಿನ ಅದಮ್ಯ ಚೇತನ. ವಿದ್ಯಾರ್ಥಿಗಳು ಆತ್ಮಶ್ರೀಗಳಾಗಲು ಇಂತಹ ಮಾನವತವಾದಿ ಲೇಖಕರನ್ನು ಓದುತ್ತ ತಮ್ಮ ಚೈತನ್ಯವನ್ನು ಉದ್ಧೀಪನಗೊಳಿಸಿಕೊಳ್ಳಬೇಕು. ಅಲ್ಲದೆ, ಯುವ ಸಮುದಾಯ ಕುವೆಂಪು ಓದಿನ ಮೂಲಕ ಎಲ್ಲ ಜನರನ್ನು ಪ್ರೀತಿಸುವ ಸಮಾಜವಾದಿ ಚೇತನವಾಗಿ ಹೊರಹೊಮ್ಮಬೇಕೆಂದು ಎಂದರು.

ಪ್ರಾಂಶುಪಾಲ ಡಾ.ಸದಾಶಿವ ರಾಮಚಂದ್ರಗೌಡ ಮಾತನಾಡಿ, ಕುವೆಂಪುರವರನ್ನು ಒಂದು ಜಾತಿ ಮತ್ತು ವೈಚಾರಿಕ ದೃಷ್ಟಿಕೋನಕ್ಕೆ ಕಟ್ಟಿಹಾಕದೆ ಮುಕ್ತ ಮನಸ್ಸಿನಿಂದ ಓದಿ ತಮ್ಮ ಜ್ಞಾನವನ್ನು ವಿಕಸನ ಮಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಪ್ರೊ.ಉಮೇಶ್, ಪ್ರೊ. ಸತೀಶ್, ಡಾ. ಬಿ.ಆರ್ ಗಂಗಾಧರಯ್ಯ, ಕವಿ ಚಿನ್ನುಪ್ರಕಾಶ್, ಫಷೀರ್,   ಕಾಲೇಜಿನ ಅಧ್ಯಾಪಕರು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಕುವೆಂಪುರವರ ವಿಶ್ವಮಾನವತೆ ಎಂಬ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದವರಿಗೂ ಬಹುಮಾನ ವಿತರಣೆ ನಡೆಯಿತು. ಪ್ರಬಂಧ ಸ್ಪರ್ಧೆಯಲ್ಲಿ ಆಶಾ ಪ್ರಥಮ ಸ್ಥಾನ, ತೃತೀಯ ಬಿ.ಎ ವಿದ್ಯಾರ್ಥಿನಿ ಮೀನಾ ದ್ವಿತೀಯ ಸ್ಥಾನ. ಭವ್ಯ ತೃತೀಯ ಸ್ಥಾನ ಪಡೆದರು.

Ramesh Babu

Journalist

Recent Posts

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ 11ನೇ ಸ್ಥಾನ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಶೇ. 95.62% ರಷ್ಟು ಫಲಿತಾಂಶ ಪಡೆಯುವ…

4 hours ago

ಭಗೀರಥ ಜಯಂತಿ ಆಚರಣೆ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ತಾಲೂಕು ಆಡಳಿತದ ವತಿಯಿಂದ ತಹಶಿಲ್ದಾರ್ ಮಲ್ಲಪ್ಪ ಎರಗೋಡ ನೇತೃತ್ವದಲ್ಲಿ ತಾಲ್ಲೂಕು ಕಚೇರಿ…

7 hours ago

ಯಲಹಂಕದ ಮಣಿಪಾಲ್ ಆಸ್ಪತ್ರೆಯಲ್ಲಿ ಸಕಾಲಿಕ ಮತ್ತು ತಜ್ಞ ಆರೈಕೆಯಿಂದ ಆಕಸ್ಮಿಕವಾಗಿ 2 ನೇ ಮಹಡಿಯಿಂದ ಬಿದ್ದ 2 ವರ್ಷದ ಮಗುವಿಗೆ ಜೀವದಾನ

ಜೀವನ ಕೆಲವೊಮ್ಮೆ ಕ್ಷಣಾರ್ಧದಲ್ಲಿ ಬದಲಾಗುತ್ತದೆ. ಒಂದು ಕ್ಷಣದಲ್ಲಿ ಎಲ್ಲವೂ ಸಹಜವಾಗಿರುತ್ತದೆ, ಮುಂದಿನ ಕ್ಷಣದಲ್ಲಿ ಅನಿಶ್ಚಿತತೆ ಆವರಿಸುತ್ತದೆ. ಅಪಘಾತಗಳು ಯಾವುದೇ ಮುನ್ನೆಚ್ಚರಿಕೆ…

9 hours ago

SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ: ಮೂವರು‌ ವಿದ್ಯಾರ್ಥಿಗಳಿಗೆ 625ಕ್ಕೆ 625 ಅಂಕ

ಇಂದು ಮಧ್ಯಾಹ್ನ 12ಕ್ಕೆ 2026 SSLC ಪರೀಕ್ಷೆ-1ರ ಫಲಿತಾಂಶ ಪ್ರಕಟ ಮಾಡಲಾಗಿದೆ. 7 ಲಕ್ಷದ 24 ಸಾವಿರದ 794 ವಿದ್ಯಾರ್ಥಿಗಳು…

11 hours ago

ನವಜಾತ ಶಿಶುವಿನ ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದ ಪಾಪಿ ತಾಯಿ

ಇಲ್ಲೋರ್ವ ಪಾಪಿ ತಾಯಿ ನವಜಾತ ಶಿಶುವನ್ನು ಕತ್ತು ಕೊಯ್ದು ಟಾಯ್ಲೆಟ್ ಗೆ ಎಸೆದು ಅಮಾನವೀಯತೆ ಮೆರೆದಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ…

12 hours ago

Free Blackjack Online: The Most Effective Means to Practice and Have A Good Time

Blackjack is one of the most prominent gambling enterprise video games on the planet. It's…

12 hours ago