ಕುವೆಂಪು ಅವರ ಮಂತ್ರ ಮಾಂಗಲ್ಯ ಆಶಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ: ವಿವಾಹವೆಂದರೆ ಎರಡು ಮನಸ್ಸುಗಳ ಒಂದುಗೂಡುವಿಕೆಯಾಗಬೇಕು- ಸಂಪತ್ತಿನ ಪ್ರದರ್ಶನವಾಗಬಾರದು- ಲೇಖಕ ಮಂಜುನಾಥ ಎಂ.ಅದ್ದೆ

ದೊಡ್ಡಬಳ್ಳಾಪುರ: ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನವ ವಧು-ವರನಿಗೆ ಕರ್ನಾಟಕ ರಾಜ್ಯ ನಾಟಕ ಅಕಾಡೆಮಿ ಸದಸ್ಯ ಟಿ.ಎಚ್.ಲವಕುಮಾರ್ ಅವರು ಮಂತ್ರ ಮಾಂಗಲ್ಯ ಬೋಧನೆ ಮಾಡುವ ಮೂಲಕ ನಗರದ ತ.ನ.ಪ್ರಭುದೇವ್ ಅವರ ತೋಟದಲ್ಲಿ ಭಾನುವಾರ ಟಿ.ಎಂ.ಬೃಂದ ಹಾಗೂ ಎಂ.ಪೃಥ್ವಿಕ್ ಘೋರ್ಪಡೆ ವಿವಾಹ ನಡೆಯಿತು.

ಈ ಸಂದರ್ಭದಲ್ಲಿ ವಧು-ವರರನ್ನು ಆರ್ಶೀವದಿಸಿ ಮಾತನಾಡಿದ ಲೇಖಕ ಮಂಜುನಾಥ ಎಂ.ಅದ್ದೆ, ಇತ್ತೀಚಿನ ದಿನಗಳಲ್ಲಿ ವಿವಾಹ ಎನ್ನುವುದು ಎರಡು ಮನಸ್ಸುಗಳ ಒಂದುಗೂಡುವಿಕೆಗಿಂತಲು ತಮ್ಮಲ್ಲಿನ ಸಂಪತ್ತಿನ ಪ್ರದರ್ಶನಕ್ಕೆ ಹೆಚ್ಚಿನ ಮಹತ್ವ ದೊರೆಯುತ್ತಿದೆ. ಸಾವಿರಾರು ಕೋಟಿ ಖರ್ಚು ಮಾಡುವ ವಿವಾಹಗಳನ್ನು ನಾವಿಂದು ನೋಡುತ್ತಿದ್ದೇವೆ. ಆದರೆ ಕುವೆಂಪು ಅವರ ಮಂತ್ರ ಮಾಂಗಲ್ಯದ ವಿವಾಹದಲ್ಲಿ ಎರಡು ಯುವ ಮನಸ್ಸುಗಳ ಹಾಗೂ ಎರಡು ಕುಟುಂಬಗಳ ಗಟ್ಟಿಯಾದ ಬಾಂಧವ್ಯವನ್ನು ಕಾಣಬುಹುದಾಗಿದೆ ಎಂದರು.

ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ರೈತ ಸಂಘದ ಚಳುವಳಿಯಲ್ಲಿ ಕುವೆಂಪು ಅವರ ಮಂತ್ರಮಾಂಗಲ್ಯದ ವಿವಾಹಗಳು ನಡೆಯಬೇಕು ಎನ್ನುವುದು ಒಂದಾಗಿದೆ. ಇದರಿಂದ ರೈತರು ಸಾಲಕ್ಕೆ ಸಿಲುಕುವುದು ತಪ್ಪಲಿದೆ. ಇದೇ ಮಾರ್ಗದಲ್ಲಿ ವಿವಾಹವಾದ ಪ್ರೊ.ಎಂ.ಡಿ.ನಂಜುಂಡಸ್ವಾಮಿ, ಕೆ.ಪಿ.ಪೂರ್ಣಚಂದ್ರತೇಜಸ್ವಿ ಅವರು ರೈತ ಸಂಘದ ಹೋರಾಟಗಾರರಿಗೆ ಮಾದರಿಯಾಗಿದ್ದಾರೆ ಎಂದರು.

ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, ಸರಳ ಭಾಷೆಯಲ್ಲಿ, ಬದುಕಿನ ಮೌಲ್ಯಗಳನ್ನು ತಿಳಿಸುವ ಕುವೆಂಪು ಅವರ ಮಂತ್ರ ಮಾಂಗಲ್ಯ ವಿವಾಹಗಳು ಸದಾ ಕಾಲಕ್ಕೂ ಆದರ್ಶವಾಗಿದೆ. ರಾಜ್ಯದಲ್ಲಿ ಸಾವಿರಾರು ವಿವಾಹಗಳು ಇದೇ ಆಶಯದಲ್ಲಿ ನಡೆಯುವ ಮೂಲಕ ಸಮೃದ್ದ ಬದುಕನ್ನು ನಡೆಸಿರುವವರು ನಮ್ಮೊಂದಿಗೆ ಇದ್ದಾರೆ ಎಂದರು.

ಬಿಬಿಎಂಪಿ ಯಲಹಂಕ ವಲಯ ಆಯುಕ್ತರಾದ ಸಿ.ಎಸ್.ಕರೀಗೌಡ ಅವರು ಚುಟುಕು ಕವಿ ಎಚ್.ದುಂಡಿರಾಜ್ ಅವರ ಕವನ ‘ರಸ್ತೆಯಲ್ಲಿ ನೋಡಿ ನಕ್ಕಳು ಅವಳು, ಈಗ ನಮ್ಮಿಬ್ಬರಿಗೆ ಇಬ್ಬರು ಮಕ್ಕಳು’ ವಾಚನ ಮಾಡಿ ಇಷ್ಟೇ ಸರಳವಾಗಿರಬೇಕು ವಿವಾಹ ಎನ್ನುವುದೇ ಮಂತ್ರ ಮಾಂಗಲ್ಯದ ಆಶಯವು ಆಗಿದೆ ಎಂದರು.

ಸರಳ ವಿವಾಹದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯ ಪುಸ್ತಕವನ್ನು ಉಡುಗರೆಯಾಗಿ ನೀಡಲಾಯಿತು.

ನಟರಾಜ್ ನಾಗಸಂದ್ರ ಅವರು ಅಚ್ಚುಕಟ್ಟಾಗಿ ಮಂತ್ರ ಮಾಂಗಲ್ಯ ವಿವಾಹ ಕಾರ್ಯಕ್ರಮದ ನಿರೂಪಣೆ ಮಾಡಿದರು.

ಈ ವೇಳೆ ರಾಜ್ಯ ರೈತ ಸಂಘದ ಮುಖಂಡರಾದ ಕೆ.ಚುಲೋಚನಮ್ಮ ವೆಂಕಟರೆಡ್ಡಿ,ಕೆ.ಉಮಾ,ಮುತ್ತೇಗೌಡ, ವಿ.ಆರ್.ಗೀತಾವತಿ,ಮುನೇಶ್ವರರಾವ್, ಎಂ.ಪ್ರಜ್ವಲ್ ಹಾಗೂ ರೈತ ಸಂಘದ ಮುಖಂಡರು ಇದ್ದರು.

Ramesh Babu

Journalist

Recent Posts

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

14 hours ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

20 hours ago

80ರ ಹೊಸ್ತಿಲಲ್ಲಿ ಭಾರತ…..

ಅಂತೂ ಇಂತೂ, ಹಾಗೂ ಹೀಗೂ ಸ್ವಾತಂತ್ರ್ಯ ಪಡೆದ ನಂತರದ 79 ವರ್ಷಗಳನ್ನು ಪೂರೈಸಿದ್ದೇವೆ. ಬಹುತೇಕ ಒಂದು ಪೀಳಿಗೆ ಅಂತ್ಯವಾಗಿ ಮುಂದಿನ…

1 day ago

ಆಹಾರ ಭದ್ರತೆಯಲ್ಲಿ ಯಾವುದೇ ಲೋಪವಾಗದಿರಲಿ- ಆಹಾರ ಆಯೋಗ ಅಧ್ಯಕ್ಷ ಡಾ.ಹೆಚ್ ಕೃಷ್ಣ

ಜಿಲ್ಲೆಯಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ವಿತರಿಸುವ ಮಕ್ಕಳಿಗೆ, ಮಹಿಳೆಯರಿಗೆ ದುರ್ಬಲರಿಗೆ, ಹಿರಿಯರಿಗೆ ಆಹಾರ ವಿತರಣೆಯಲ್ಲಿ ಯಾವುದೇ ರೀತಿಯ ಲೋಪದೋಷ ಕಂಡು…

1 day ago

ನಾಳೆ(ಆ.14) ತೂಬಗೆರೆ ಸೊಸೈಟಿಗೆ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘದ (ಎಂ.ಪಿ.ಆರ್.ಎ.ಸಿ.ಎಸ್.) ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ…

2 days ago

“ನನಗೆ ನೀರು ಬೇಕು, ಮಾತಾಡಲ್ಲ” — ಬಾಯಿಗೆ ಪ್ಲಾಸ್ಟರ್ ಹಾಕಿದ ವಾಟಾಳ್ ನಾಗರಾಜ್

ಬೆಂಗಳೂರು: ಕಾವೇರಿ ನದಿ ನೀರಿನ ವಿಚಾರವಾಗಿ ಕರ್ನಾಟಕ ಬಂದ್‌ಗೆ ಕರೆ ನೀಡಿದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರನ್ನು ಪೊಲೀಸರು…

2 days ago