ಕುವೆಂಪು ಅವರ ಮಂತ್ರ ಮಾಂಗಲ್ಯ ಆಶಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ: ವಿವಾಹವೆಂದರೆ ಎರಡು ಮನಸ್ಸುಗಳ ಒಂದುಗೂಡುವಿಕೆಯಾಗಬೇಕು- ಸಂಪತ್ತಿನ ಪ್ರದರ್ಶನವಾಗಬಾರದು- ಲೇಖಕ ಮಂಜುನಾಥ ಎಂ.ಅದ್ದೆ

ದೊಡ್ಡಬಳ್ಳಾಪುರ: ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನವ ವಧು-ವರನಿಗೆ ಕರ್ನಾಟಕ ರಾಜ್ಯ ನಾಟಕ ಅಕಾಡೆಮಿ ಸದಸ್ಯ ಟಿ.ಎಚ್.ಲವಕುಮಾರ್ ಅವರು ಮಂತ್ರ ಮಾಂಗಲ್ಯ ಬೋಧನೆ ಮಾಡುವ ಮೂಲಕ ನಗರದ ತ.ನ.ಪ್ರಭುದೇವ್ ಅವರ ತೋಟದಲ್ಲಿ ಭಾನುವಾರ ಟಿ.ಎಂ.ಬೃಂದ ಹಾಗೂ ಎಂ.ಪೃಥ್ವಿಕ್ ಘೋರ್ಪಡೆ ವಿವಾಹ ನಡೆಯಿತು.

ಈ ಸಂದರ್ಭದಲ್ಲಿ ವಧು-ವರರನ್ನು ಆರ್ಶೀವದಿಸಿ ಮಾತನಾಡಿದ ಲೇಖಕ ಮಂಜುನಾಥ ಎಂ.ಅದ್ದೆ, ಇತ್ತೀಚಿನ ದಿನಗಳಲ್ಲಿ ವಿವಾಹ ಎನ್ನುವುದು ಎರಡು ಮನಸ್ಸುಗಳ ಒಂದುಗೂಡುವಿಕೆಗಿಂತಲು ತಮ್ಮಲ್ಲಿನ ಸಂಪತ್ತಿನ ಪ್ರದರ್ಶನಕ್ಕೆ ಹೆಚ್ಚಿನ ಮಹತ್ವ ದೊರೆಯುತ್ತಿದೆ. ಸಾವಿರಾರು ಕೋಟಿ ಖರ್ಚು ಮಾಡುವ ವಿವಾಹಗಳನ್ನು ನಾವಿಂದು ನೋಡುತ್ತಿದ್ದೇವೆ. ಆದರೆ ಕುವೆಂಪು ಅವರ ಮಂತ್ರ ಮಾಂಗಲ್ಯದ ವಿವಾಹದಲ್ಲಿ ಎರಡು ಯುವ ಮನಸ್ಸುಗಳ ಹಾಗೂ ಎರಡು ಕುಟುಂಬಗಳ ಗಟ್ಟಿಯಾದ ಬಾಂಧವ್ಯವನ್ನು ಕಾಣಬುಹುದಾಗಿದೆ ಎಂದರು.

ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ರೈತ ಸಂಘದ ಚಳುವಳಿಯಲ್ಲಿ ಕುವೆಂಪು ಅವರ ಮಂತ್ರಮಾಂಗಲ್ಯದ ವಿವಾಹಗಳು ನಡೆಯಬೇಕು ಎನ್ನುವುದು ಒಂದಾಗಿದೆ. ಇದರಿಂದ ರೈತರು ಸಾಲಕ್ಕೆ ಸಿಲುಕುವುದು ತಪ್ಪಲಿದೆ. ಇದೇ ಮಾರ್ಗದಲ್ಲಿ ವಿವಾಹವಾದ ಪ್ರೊ.ಎಂ.ಡಿ.ನಂಜುಂಡಸ್ವಾಮಿ, ಕೆ.ಪಿ.ಪೂರ್ಣಚಂದ್ರತೇಜಸ್ವಿ ಅವರು ರೈತ ಸಂಘದ ಹೋರಾಟಗಾರರಿಗೆ ಮಾದರಿಯಾಗಿದ್ದಾರೆ ಎಂದರು.

ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, ಸರಳ ಭಾಷೆಯಲ್ಲಿ, ಬದುಕಿನ ಮೌಲ್ಯಗಳನ್ನು ತಿಳಿಸುವ ಕುವೆಂಪು ಅವರ ಮಂತ್ರ ಮಾಂಗಲ್ಯ ವಿವಾಹಗಳು ಸದಾ ಕಾಲಕ್ಕೂ ಆದರ್ಶವಾಗಿದೆ. ರಾಜ್ಯದಲ್ಲಿ ಸಾವಿರಾರು ವಿವಾಹಗಳು ಇದೇ ಆಶಯದಲ್ಲಿ ನಡೆಯುವ ಮೂಲಕ ಸಮೃದ್ದ ಬದುಕನ್ನು ನಡೆಸಿರುವವರು ನಮ್ಮೊಂದಿಗೆ ಇದ್ದಾರೆ ಎಂದರು.

ಬಿಬಿಎಂಪಿ ಯಲಹಂಕ ವಲಯ ಆಯುಕ್ತರಾದ ಸಿ.ಎಸ್.ಕರೀಗೌಡ ಅವರು ಚುಟುಕು ಕವಿ ಎಚ್.ದುಂಡಿರಾಜ್ ಅವರ ಕವನ ‘ರಸ್ತೆಯಲ್ಲಿ ನೋಡಿ ನಕ್ಕಳು ಅವಳು, ಈಗ ನಮ್ಮಿಬ್ಬರಿಗೆ ಇಬ್ಬರು ಮಕ್ಕಳು’ ವಾಚನ ಮಾಡಿ ಇಷ್ಟೇ ಸರಳವಾಗಿರಬೇಕು ವಿವಾಹ ಎನ್ನುವುದೇ ಮಂತ್ರ ಮಾಂಗಲ್ಯದ ಆಶಯವು ಆಗಿದೆ ಎಂದರು.

ಸರಳ ವಿವಾಹದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯ ಪುಸ್ತಕವನ್ನು ಉಡುಗರೆಯಾಗಿ ನೀಡಲಾಯಿತು.

ನಟರಾಜ್ ನಾಗಸಂದ್ರ ಅವರು ಅಚ್ಚುಕಟ್ಟಾಗಿ ಮಂತ್ರ ಮಾಂಗಲ್ಯ ವಿವಾಹ ಕಾರ್ಯಕ್ರಮದ ನಿರೂಪಣೆ ಮಾಡಿದರು.

ಈ ವೇಳೆ ರಾಜ್ಯ ರೈತ ಸಂಘದ ಮುಖಂಡರಾದ ಕೆ.ಚುಲೋಚನಮ್ಮ ವೆಂಕಟರೆಡ್ಡಿ,ಕೆ.ಉಮಾ,ಮುತ್ತೇಗೌಡ, ವಿ.ಆರ್.ಗೀತಾವತಿ,ಮುನೇಶ್ವರರಾವ್, ಎಂ.ಪ್ರಜ್ವಲ್ ಹಾಗೂ ರೈತ ಸಂಘದ ಮುಖಂಡರು ಇದ್ದರು.

Ramesh Babu

Journalist

Recent Posts

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

54 minutes ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

1 hour ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

3 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

6 hours ago

ಮಳೆ ಕೊರತೆ ನೀಗಿಸಲು ಸರ್ಕಾರದ ಮಾಸ್ಟರ್ ಪ್ಲ್ಯಾನ್: ಎಚ್.ಎ.ಎಲ್‌ನಲ್ಲಿ ಮೋಡ ಬಿತ್ತನೆಗೆ ಜಲ ಸಂಪನ್ಮೂಲ ಸಚಿವರಿಂದ ಚಾಲನೆ

ರಾಜ್ಯದಲ್ಲಿ ಎದುರಾಗಿರುವ ಮಳೆ‌ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…

7 hours ago

ಕಡಿದಾದ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಸಿಮೆಂಟ್ ಲಾರಿ; ಚಾಲಕ ಸ್ಥಳದಲ್ಲೇ ಸಾವು ಗುಂಡಮ್ಮಗೆರೆ–ಹೊಸಹಳ್ಳಿ ರಸ್ತೆಯಲ್ಲಿ ಮುಂಜಾನೆ ದುರಂತ | ರಸ್ತೆಗೆ ಚೆಲ್ಲಾಪಿಲ್ಲಿಯಾದ ಸಿಮೆಂಟ್ ಮೂಟೆಗಳು

  ದೊಡ್ಡಬಳ್ಳಾಪುರ: ಕಡಿದಾದ ತಿರುವಿನಲ್ಲಿ ಸಿಮೆಂಟ್ ಮೂಟೆಗಳನ್ನು ಸಾಗಿಸುತ್ತಿದ್ದ ಲಾರಿಯೊಂದು ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವ…

10 hours ago