ಕುವೆಂಪು ಅವರ ಮಂತ್ರ ಮಾಂಗಲ್ಯ ಆಶಯದಂತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ನವ ಜೋಡಿ: ವಿವಾಹವೆಂದರೆ ಎರಡು ಮನಸ್ಸುಗಳ ಒಂದುಗೂಡುವಿಕೆಯಾಗಬೇಕು- ಸಂಪತ್ತಿನ ಪ್ರದರ್ಶನವಾಗಬಾರದು- ಲೇಖಕ ಮಂಜುನಾಥ ಎಂ.ಅದ್ದೆ

ದೊಡ್ಡಬಳ್ಳಾಪುರ: ರಾಷ್ಟ್ರಕವಿ ಕುವೆಂಪು ಅವರ ಆಶಯದಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ನವ ವಧು-ವರನಿಗೆ ಕರ್ನಾಟಕ ರಾಜ್ಯ ನಾಟಕ ಅಕಾಡೆಮಿ ಸದಸ್ಯ ಟಿ.ಎಚ್.ಲವಕುಮಾರ್ ಅವರು ಮಂತ್ರ ಮಾಂಗಲ್ಯ ಬೋಧನೆ ಮಾಡುವ ಮೂಲಕ ನಗರದ ತ.ನ.ಪ್ರಭುದೇವ್ ಅವರ ತೋಟದಲ್ಲಿ ಭಾನುವಾರ ಟಿ.ಎಂ.ಬೃಂದ ಹಾಗೂ ಎಂ.ಪೃಥ್ವಿಕ್ ಘೋರ್ಪಡೆ ವಿವಾಹ ನಡೆಯಿತು.

ಈ ಸಂದರ್ಭದಲ್ಲಿ ವಧು-ವರರನ್ನು ಆರ್ಶೀವದಿಸಿ ಮಾತನಾಡಿದ ಲೇಖಕ ಮಂಜುನಾಥ ಎಂ.ಅದ್ದೆ, ಇತ್ತೀಚಿನ ದಿನಗಳಲ್ಲಿ ವಿವಾಹ ಎನ್ನುವುದು ಎರಡು ಮನಸ್ಸುಗಳ ಒಂದುಗೂಡುವಿಕೆಗಿಂತಲು ತಮ್ಮಲ್ಲಿನ ಸಂಪತ್ತಿನ ಪ್ರದರ್ಶನಕ್ಕೆ ಹೆಚ್ಚಿನ ಮಹತ್ವ ದೊರೆಯುತ್ತಿದೆ. ಸಾವಿರಾರು ಕೋಟಿ ಖರ್ಚು ಮಾಡುವ ವಿವಾಹಗಳನ್ನು ನಾವಿಂದು ನೋಡುತ್ತಿದ್ದೇವೆ. ಆದರೆ ಕುವೆಂಪು ಅವರ ಮಂತ್ರ ಮಾಂಗಲ್ಯದ ವಿವಾಹದಲ್ಲಿ ಎರಡು ಯುವ ಮನಸ್ಸುಗಳ ಹಾಗೂ ಎರಡು ಕುಟುಂಬಗಳ ಗಟ್ಟಿಯಾದ ಬಾಂಧವ್ಯವನ್ನು ಕಾಣಬುಹುದಾಗಿದೆ ಎಂದರು.

ರಾಜ್ಯ ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, ರೈತ ಸಂಘದ ಚಳುವಳಿಯಲ್ಲಿ ಕುವೆಂಪು ಅವರ ಮಂತ್ರಮಾಂಗಲ್ಯದ ವಿವಾಹಗಳು ನಡೆಯಬೇಕು ಎನ್ನುವುದು ಒಂದಾಗಿದೆ. ಇದರಿಂದ ರೈತರು ಸಾಲಕ್ಕೆ ಸಿಲುಕುವುದು ತಪ್ಪಲಿದೆ. ಇದೇ ಮಾರ್ಗದಲ್ಲಿ ವಿವಾಹವಾದ ಪ್ರೊ.ಎಂ.ಡಿ.ನಂಜುಂಡಸ್ವಾಮಿ, ಕೆ.ಪಿ.ಪೂರ್ಣಚಂದ್ರತೇಜಸ್ವಿ ಅವರು ರೈತ ಸಂಘದ ಹೋರಾಟಗಾರರಿಗೆ ಮಾದರಿಯಾಗಿದ್ದಾರೆ ಎಂದರು.

ಚುಕ್ಕಿ ನಂಜುಂಡಸ್ವಾಮಿ ಮಾತನಾಡಿ, ಸರಳ ಭಾಷೆಯಲ್ಲಿ, ಬದುಕಿನ ಮೌಲ್ಯಗಳನ್ನು ತಿಳಿಸುವ ಕುವೆಂಪು ಅವರ ಮಂತ್ರ ಮಾಂಗಲ್ಯ ವಿವಾಹಗಳು ಸದಾ ಕಾಲಕ್ಕೂ ಆದರ್ಶವಾಗಿದೆ. ರಾಜ್ಯದಲ್ಲಿ ಸಾವಿರಾರು ವಿವಾಹಗಳು ಇದೇ ಆಶಯದಲ್ಲಿ ನಡೆಯುವ ಮೂಲಕ ಸಮೃದ್ದ ಬದುಕನ್ನು ನಡೆಸಿರುವವರು ನಮ್ಮೊಂದಿಗೆ ಇದ್ದಾರೆ ಎಂದರು.

ಬಿಬಿಎಂಪಿ ಯಲಹಂಕ ವಲಯ ಆಯುಕ್ತರಾದ ಸಿ.ಎಸ್.ಕರೀಗೌಡ ಅವರು ಚುಟುಕು ಕವಿ ಎಚ್.ದುಂಡಿರಾಜ್ ಅವರ ಕವನ ‘ರಸ್ತೆಯಲ್ಲಿ ನೋಡಿ ನಕ್ಕಳು ಅವಳು, ಈಗ ನಮ್ಮಿಬ್ಬರಿಗೆ ಇಬ್ಬರು ಮಕ್ಕಳು’ ವಾಚನ ಮಾಡಿ ಇಷ್ಟೇ ಸರಳವಾಗಿರಬೇಕು ವಿವಾಹ ಎನ್ನುವುದೇ ಮಂತ್ರ ಮಾಂಗಲ್ಯದ ಆಶಯವು ಆಗಿದೆ ಎಂದರು.

ಸರಳ ವಿವಾಹದಲ್ಲಿ ಕುವೆಂಪು ಅವರ ಮಂತ್ರ ಮಾಂಗಲ್ಯ ಪುಸ್ತಕವನ್ನು ಉಡುಗರೆಯಾಗಿ ನೀಡಲಾಯಿತು.

ನಟರಾಜ್ ನಾಗಸಂದ್ರ ಅವರು ಅಚ್ಚುಕಟ್ಟಾಗಿ ಮಂತ್ರ ಮಾಂಗಲ್ಯ ವಿವಾಹ ಕಾರ್ಯಕ್ರಮದ ನಿರೂಪಣೆ ಮಾಡಿದರು.

ಈ ವೇಳೆ ರಾಜ್ಯ ರೈತ ಸಂಘದ ಮುಖಂಡರಾದ ಕೆ.ಚುಲೋಚನಮ್ಮ ವೆಂಕಟರೆಡ್ಡಿ,ಕೆ.ಉಮಾ,ಮುತ್ತೇಗೌಡ, ವಿ.ಆರ್.ಗೀತಾವತಿ,ಮುನೇಶ್ವರರಾವ್, ಎಂ.ಪ್ರಜ್ವಲ್ ಹಾಗೂ ರೈತ ಸಂಘದ ಮುಖಂಡರು ಇದ್ದರು.

Ramesh Babu

Journalist

Recent Posts

ನಂದಿಗಿರಿಧಾಮದಲ್ಲಿ ಕೆಎಸ್‌ಟಿಡಿಸಿಯ ನೂತನ ‘ಮಯೂರ ಸನ್‌ರೈಸ್ ರೆಸ್ಟೋರೆಂಟ್’ ಉದ್ಘಾಟನೆ: ನಂದಿಬೆಟ್ಟದ ಸಂಚಾರ ದಟ್ಟಣೆಗೆ ರೋಪ್‌ವೇ ಹಾಗೂ ಸಮಗ್ರ ಪಾರ್ಕಿಂಗ್ ಯೋಜನೆ- ಸಚಿವ ಕೆ.ಜೆ ಜಾರ್ಜ್

ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿರುವ ಮಯೂರ ಹೋಟೆಲ್‌ಗಳು ಹಾಗೂ ಇತರೆ…

1 hour ago

ಸಮಾಜಸೇವಕ ಮಹೇಂದ್ರ ಬಾಬುಗೆ ಅದ್ಧೂರಿ ಜನ್ಮದಿನ ಆಚರಣೆ

ದೊಡ್ಡಬಳ್ಳಾಪುರ: ಸಾಯಿರಾಂ ಡ್ರಿಪ್ ಇರಿಗೇಷನ್ ಹಾಗೂ ಕನ್‌ಸ್ಟ್ರಕ್ಷನ್ ಸಂಸ್ಥೆಯ ಮಾಲೀಕರಾದ ಬಿ. ಮಹೇಂದ್ರ ಬಾಬು ಅವರ 46ನೇ ವರ್ಷದ ಹುಟ್ಟುಹಬ್ಬವನ್ನು…

12 hours ago

ಕುಖ್ಯಾತ ಅಂತರರಾಜ್ಯ ಕೇಬಲ್ ಕಳ್ಳರ ಬಂಧನ: ₹15 ಲಕ್ಷ ಮೌಲ್ಯದ ಕೇಬಲ್ ವಶ

ದೊಡ್ಡಬಳ್ಳಾಪುರ: ಅಲ್ಯೂಮಿನಿಯಂ ವಿದ್ಯುತ್ ಕೇಬಲ್ ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು, ಅಂತರರಾಜ್ಯ ಕೇಬಲ್ ಕಳ್ಳರ ಜಾಲವನ್ನು…

23 hours ago

RSS ನೋಂದಣಿಗೆ ಆಗ್ರಹಿಸಿ ಪ್ರತಿಭಟನೆ; ರಾಷ್ಟ್ರಪತಿಗಳಿಗೆ ಮನವಿ

ದೊಡ್ಡಬಳ್ಳಾಪುರ : ಹೊರದೇಶಗಳಲ್ಲಿ ಅಲ್ಲಿನ ನೆಲದ ಕಾನೂನಿಗೆ ಬದ್ಧವಾಗಿ ನೋಂದಣಿ ಮಾಡಿಸಿಕೊಂಡಿರುವ ಸಂಘ ಪರಿವಾರ, ಇಲ್ಲಿನ ನೆಲದ ಕಾನೂನಿಗೆ ವ್ಯತಿರಿಕ್ತವಾಗಿ…

23 hours ago

ಕೊನೆಯ ಕ್ಷಣದಲ್ಲಿ ಅನುಮತಿ ನಿರಾಕರಣೆ: ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ರದ್ದು: ಮುಂದಿನ ದಿನಗಳಲ್ಲಿ ಕಾರ್ಯಕ್ರಮ ಆಯೋಜನೆ-ವಕೀಲ ಪ್ರತಾಪ್

ದೊಡ್ಡಬಳ್ಳಾಪುರ: ತೂಬಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮಂಗಳವಾರ ನಡೆಯಬೇಕಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಕೊನೆಯ ಕ್ಷಣದಲ್ಲಿ ಕಾಲೇಜು ವತಿಯಿಂದ…

1 day ago

ಮುಂಗಾರು ಮಳೆ ಕೊರತೆ, ಭೂಗರ್ಭದ ನೀರಿಗೆ ಭಾರೀ ಹೊಡೆತ: ಜಲಬಿಕ್ಕಟ್ಟಿನ ಮುನ್ಸೂಚನೆ

ಮುಂಗಾರು ಆರಂಭವಾಗಿದ್ದರೂ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಸಾಮಾನ್ಯವಾಗಿ…

1 day ago