ಕುವೆಂಪು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ-ಅಧ್ಯಾಪಕ ಜೆ.ಪಿ.ಉಪಾಧ್ಯೆ

‘ಮನುಷ್ಯ ಜಾತಿ ತಾನೊಂದು ವಲಂ’ ಎಂದು‌ ಆದಿಕವಿ ಪಂಪನ ಆಶಯವನ್ನು ಒಳಗೊಂಡ ವಿಶ್ವಮಾನವ ಸಂದೇಶವನ್ನು ಕುವೆಂಪು ಹೇಳಿದ್ದಾರೆ ಎಂದು ಜವಾಹರ್ ನವೋದಯ ವಿದ್ಯಾಲಯದ ಕನ್ನಡ ಅಧ್ಯಾಪಕ  ಜೆ.ಪಿ.ಉಪಾಧ್ಯೆ ತಿಳಿಸಿದರು.

ದೊಡ್ಡಬಳ್ಳಾಪುರ ಜವಾಹರ್ ನವೋದಯ ವಿದ್ಯಾಲಯದಲ್ಲಿ ನಡೆದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.‌

ಕುವೆಂಪು ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ.  ಮಾನವ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ.  ಪ್ರತಿಯೊಬ್ಬರು ಕುವೆಂಪು ಅವರು ಹೇಳಿರುವ ವಿಶ್ವಮಾನವ ಸಂದೇಶದ ತತ್ವಾದರ್ಶ ಮೈಗೊಡಿಸಿಕೊಂಡರೆ ಸಮಾಜದಲ್ಲಿ ಸಾಮರಸ್ಯ ನೆಲಸಲಿದೆ ಎಂದರು.

ವಿಜ್ಞಾನ ವಿಭಾಗದ ಉಪನ್ಯಾಸಕ ಅಶೋಕ ಪುಜಾರಿ ಮಾತನಾಡಿ, ಕುವೆಂಪು ಅವರು ತಮ್ಮ ಸಾಹಿತ್ಯ ಮತ್ತು ವಿಚಾರಗಳಲ್ಲಿ ವೈಚಾರಿಕ ಪ್ರಜ್ಞೆಯ ಮಹತ್ವಕ್ಕೆ ಹೆಚ್ಚು ಆದ್ಯತೆ ನೀಡಿದರು. ಜಾತಿ, ಮತ, ಪಂಥಕ್ಕೆ ಆಧ್ಯತೆ ನೀಡದೇ ಮಾನವೀಯ ಧರ್ಮ ಮೇಲು ಎಂದು ಸಾರಿದ್ದರು. ಕುವೆಂಪು ತಮ್ಮ ಕಾಲಮಾನದ ಎಲ್ಲ ಮೌಲ್ಯಗಳನ್ನು ವೈಚಾರಿಕತೆಯ ಪ್ರಖರ ಬೆಳಕಿನಲ್ಲಿ ಕಂಡವರು.  ವೈಚಾರಿಕತೆಯನ್ನು  ಕುವೆಂಪು ತಮ್ಮ  ಬರಹ ಮತ್ತು ಬದುಕುಗಳಲ್ಲಿ ಅಳವಡಿಸಿಕೊಂಡವರು ಎಂದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಚೈತನ್ಯ ಕುವೆಂಪುರವರ ಜೀವನ ಪರಿಚಯ ಮಾಡಿಕೊಟ್ಟಳು. ಅಭಿರಾಮ, ಅಮಿತ್, ನಿವೇದಿತಾ ಮೊದಲಾದವರು ಕುವೆಂಪು ಗೀತೆಗಳನ್ನು ಹಾಡಿದರು. ಜವಾಹರ್ ನವೋದಯ ವಿದ್ಯಾಲಯದ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Ramesh Babu

Journalist

Recent Posts

ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮ: ವಿಜೇತರಿಗೆ ಬಹುಮಾನ ವಿತರಣೆ

ಫೆ.24ರಂದು ದೊಡ್ಡಬಳ್ಳಾಪುರ ನಗರದ ಬಸವ ಭವನದಲ್ಲಿ ಅಗಸ್ತ್ಯ ಅಂತರರಾಷ್ಟ್ರೀಯ ಸಂಸ್ಥೆಯ ವತಿಯಿಂದ ವಿಜ್ಞಾನ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ…

3 hours ago

ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿ: ಚಿಕಿ*ತ್ಸೆ ಫಲಕಾರಿಯಾಗದೆ ಸಾವು: ಪ್ರತಿಭಟನೆ ಮತ್ತು ಪ್ರಕರಣ ದಾಖಲು

ಹಾಸನ: ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಗರ್ಭಿಣಿಯೊಬ್ಬರು ಚಿಕಿ*ತ್ಸೆ ಫಲಕಾರಿಯಾಗದೆ ಮೃ*ಪಟ್ಟ ಘಟನೆ ಹಾಸನ ನಗರದ ಹಿಮ್ಸ್ (HIMS) ಆಸ್ಪತ್ರೆಯಲ್ಲಿ ನಡೆದಿದೆ.…

15 hours ago

ತೂಬಗೆರೆಯ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ: ಹುಂಡಿ, ತಾಳಿ, ಆಭರಣ ಕಳವು

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ಗ್ರಾಮದ ದೊಡ್ಡಮ್ಮ ದೇವಾಲಯದಲ್ಲಿ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಮಂಗಳವಾರ ಬೆಳಿಗ್ಗೆ ದೇವಾಲಯದ ಬಾಗಿಲಿನ ಬೀಗ…

15 hours ago

ಸಂಬಳಕ್ಕಾಗಿ ಕಾರ್ಮಿಕರಿಂದ ಕಾರ್ಖಾನೆ ಮುಂದೆ ಪ್ರತಿಭಟನೆ

ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಗಾರ್ಮೆಂಟ್ಸ್ ಕಾರ್ಖಾನೆ(ಶೈಲೇಂದ್ರ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್)ಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಕಳೆದ…

16 hours ago

ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ ಜಿಲ್ಲಾಧಿಕಾರಿ ಎಬಿ ಬಸವರಾಜು ಆದೇಶ

ಕರ್ನಾಟಕ ಸ್ಥಳೀಯ ಸಂಸ್ಥೆಗಳ(ಪಕ್ಷಾಂತರ ನಿಷೇಧ) ಅಧಿನಿಯಮ 4(2)(|||) ರನ್ವಯ ತಕ್ಷಣದಿಂದ ಜಾರಿಗೆ ಬರುವಂತೆ ನೆಲಮಂಗಲ ನಗರಸಭೆಯ ಏಳು ಸದಸ್ಯರನ್ನು ಅನರ್ಹಗೊಳಿಸಿ…

18 hours ago

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

1 day ago